ಉಳ್ಳಾಲ: ಮನೆಯಿಂದ ನಗ,ನಗದು ಕಳವು
Team Udayavani, Nov 25, 2018, 9:49 AM IST
ಉಳ್ಳಾಲ: ಮನೆಯಲ್ಲಿ ಯಾರೂ ಇಲ್ಲದಿದ್ದ ಸಂದರ್ಭ ನುಗ್ಗಿದ ಮೂವರು ಕಳ್ಳರ ತಂಡ ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ಕದ್ದೊಯ್ದಿದ್ದು, ಪರಾರಿಯಾಗುತ್ತಿದ್ದ ಓರ್ವ ಕಳ್ಳ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದಾನೆ.ಸಿಕ್ಕಿ ಬಿದ್ದಿರುವ ತಮಿಳುನಾಡು ಮೂಲದ ಷಣ್ಮುಗಂ(40)ನಿಗೆ ಸ್ಥಳೀಯರು ಗಂಭೀರವಾಗಿ ಥಳಿಸಿದ್ದು, ಆತನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಳೆಕೋಟೆಯ ದಿ| ಮಹಮ್ಮದ್ ಅವರ ಜಸ್ವಿಲ್ ಮಂಜಿಲ್ನಲ್ಲಿ ಶನಿವಾರ ರಾತ್ರಿ ಕಳವಾಗಿದೆ. ಮನೆ ಮಂದಿಯೆಲ್ಲ ಸಂಬಂಧಿಕರ ಸಮಾರಂಭಕ್ಕೆ ತೆರಳಿದ್ದಾಗ ಬೀಗ ಒಡೆದು ನುಗ್ಗಿದ ಕಳ್ಳರು ಕಪಾಟಿನಲ್ಲಿಟ್ಟಿದ್ದ 17 ಪವನ್ ಚಿನ್ನ ಮತ್ತು 3.70 ಲ.ರೂ. ಅನ್ನು ಕದ್ದಿದ್ದಾರೆ.
ಓರ್ವ ಕಳ್ಳ ಸಿಕ್ಕಿ ಬಿದ್ದಿರುವುದು ಮತ್ತು ಆತನಿಗೆ ಸ್ಥಳೀಯರು ಹಲ್ಲೆ ನಡೆಸುತ್ತಿರುವ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಧಾವಿಸಿ ಷಣ್ಮುಗಂನನ್ನು ವಶಕ್ಕೆ ತೆಗೆದುಕೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿನ್ನಾಭರಣ ಹಾಗೂ ನಗದಿನೊಂದಿಗೆ ಪರಾರಿಯಾಗಿರುವ ಇಬ್ಬರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸ್ವಿಲ್ ಮಂಜಿಲ್ನ ಮಾಲಕ ಮಹಮ್ಮದ್ ಮತ್ತು ಅವರ ಪುತ್ರಿ ಜಮೀಲಾ ಅವರು ಒಂದೂವರೆ ತಿಂಗಳ ಹಿಂದೆ ಒಂದೇ ದಿವಸ ಸಾವನ್ನಪ್ಪಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್