ಆರ್ಥಿಕ ಪರಿಸ್ಥಿತಿ ನೋಡಿ ಮೀಸಲಾತಿ ನೀಡಿ


Team Udayavani, Nov 25, 2018, 4:43 PM IST

bell-1.jpg

ಹೂವಿನಹಡಗಲಿ: ಸರ್ಕಾರ ಕೇವಲ ಜಾತಿ ಆಧಾರದ ಮೇಲೆ ಮೀಸಲಾತಿ ನೀಡುವುದು ಬಿಟ್ಟು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲಾ ಜಾತಿಯ ಬಡವರಿಗೂ ಕೂಡಾ ಮೀಸಲಾತಿ ನೀಡಬೇಕು ಎಂದು ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಹೇಳಿದರು.

ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ವೀರಶೈವ ಪಂಚಮಸಾಲಿ ಸಂಘಟನೆಯಿಂದ ಆಯೋಜಿಸಲಾಗಿದ್ದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತ ನಾಮಫಲಕ ಅನಾವರಣ ಹಾಗೂ ರಾಣಿ ಕಿತ್ತೂರು ಚನ್ನಮ್ಮ ವಿಜಯೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
 
ವೀರಶೈವ ಪಂಚಮಸಾಲಿ ಸಮಾಜ ಬಾಂಧವರು ಈಗಾಗಲೇ ಬಹುವರ್ಷಗಳಿಂದ 2ಎ ಮೀಸಲಾತಿಗಾಗಿ ಹೋರಾಟ ನಡೆಸಿದ್ದಾರೆ. ಯಾರದೋ ಹಕ್ಕನ್ನು ಕಿತ್ತುಕೊಂಡು ಸರ್ಕಾರ ನಮಗೆ ನೀಡುವುದು ಬೇಡ. ನಮ್ಮಲ್ಲಿರುವ ಬಡವರ ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ಅಭಿವೃದ್ಧಿಗಾಗಿ ಸೌಲಭ್ಯಗಳನ್ನು ನೀಡಬೇಕಾಗಿದೆ ಎಂದರು.

ಸರ್ಕಾರದ ಕೆಲವೊಂದು ನೀತಿ ನಿಯಮಗಳು ಬದಲಾಗಬೇಕಾಗಿದೆ. ಬಹುಕಾಲದಿಂದ ಮೀಸಲಾತಿಯ ಸೌಲಭ್ಯವನ್ನು ಅನುಭವಿಸುತ್ತಿರುವವರು ಎಲ್ಲರೂ ಅಲ್ಲದಿದ್ದರು ಕೆಲವರು ಈಗಾಗಲೇ ಆರ್ಥಿಕವಾಗಿ, ಶೈಕ್ಷಣಿಕವಾಗಿ ರಾಜಕೀಯ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿದ್ದಾರೆ. ಅವರ ಮಕ್ಕಳು ಕೂಡಾ ಸರ್ಕಾರದ ಸೌಲಭ್ಯದಲ್ಲಿ ಶಿಕ್ಷಣ ಸೇರಿದಂತೆ ಎಲ್ಲವನ್ನು ಪಡೆಯುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ಇಂತಹ ದ್ವಂದ್ವ ನೀತಿಗಳನ್ನು ವಿರೋಧಿ ಸುವುದಕ್ಕಾಗಿಯೇ ನಕ್ಸಲರು ಮತ್ತು ಕಮ್ಯೂನಿಷ್ಟರು ಹುಟ್ಟಿಕೊಳ್ಳುತ್ತಾರೆ. ಸರ್ಕಾರ ಮೀಸಲಾತಿಯಲ್ಲಿ ಪರಿಷ್ಕರಣೆ ಮಾಡುವುದರ ಮೂಲಕ ಎಲ್ಲಾ ಸಮಾಜದ ಬಡವರಿಗೂ ಕೂಡಾ ಸೌಲಭ್ಯವನ್ನು ನೀಡಬೇಕು ಎಂದರು.

ತಾವು ಇತ್ತೀಚೆಗೆ 6 ತಿಂಗಳ ಹಿಂದೆ ಶ್ರೀ ಪೀಠಕ್ಕೆ ಸ್ವಾಮೀಜಿಗಳಾಗಿ ನೇಮಕಗೊಂಡಿದ್ದು, ಈ ಹಿಂದೆ ಯೋಗದ ಮೂಲಕ ಸಮಾಜ ಸೇವೆ ಮಾಡುತ್ತಿದ್ದೆ, 8 ರಾಷ್ಟ್ರಗಳನ್ನು ಸುತ್ತಿದ ಅನುಭವವಿದೆ. ಪೀಠದ ಜವಾಬ್ದಾರಿ ಹೊತ್ತಿರುವುದರಿಂದ ಸಮಾಜದ ಅಭಿವೃದ್ಧಿಯ ಕರ್ತವ್ಯವು ಕೂಡಾ ನನ್ನದಾಗಿರುವುದರಿಂದ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗಾಗಲೇ ಪ್ರಸಾದದ ವ್ಯವಸ್ಥೆ ಸೇರಿದಂತೆ ಹಲವು ವಿಶೇಷತೆಗಳು ಇದ್ದು, ಸಮಾಜ ಬಾಂಧವರು ಪೀಠಕ್ಕೆ ಭೇಟಿ ನೀಡುವುದರ ಮೂಲಕ ಭಕ್ತಿ ಸಮರ್ಪಣೆ ಸೇರಿದಂತೆ ಸಾಮಾಜಿಕ ಹಾಗೂ ಧಾರ್ಮಿಕ ಜಾಗೃತಿ ಕೂಡಾ ಪಡೆದುಕೊಳ್ಳಬೇಕು ಎಂದರು.

 ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮಾತನಾಡಿ, ವೀರಶೈವ ಪಂಚಮಸಾಲಿ ಸಮಾಜ ಒಂದು ದೊಡ್ಡ ಸಮಾಜವಾಗಿದ್ದು, ಎಲ್ಲ ಸಮಾಜದವರೊಂದಿಗೆ ಅವಿನಾಭಾವ ಸಂಬಂಧ ಇರಿಸಿಕೊಂಡಂತಹ ಸಮಾಜದ ಅಭಿವೃದ್ಧಿ ಮತ್ತು ಮಾರ್ಗದರ್ಶನಕ್ಕಾಗಿ ವಚನಾನಂದ ಶ್ರೀಗಳಂತಹ ಒಬ್ಬ ಗುರುಗಳು ಲಭಿಸಿರುವುದು ಸಂತಸ ತಂದಿದೆ ಎಂದರು.
 
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿದರು. ತಾ.ಪಂ ಅಧ್ಯಕ್ಷೆ ಶಾರದಮ್ಮ, ಹಿರೇಹಡಗಲಿ ಗ್ರಾಪಂ ಅಧ್ಯಕ್ಷೆ ಕೊಂಪಿ ಚನ್ನಮ್ಮ, ಜಿ.ಪಂ ಸದಸ್ಯೆ ವೀಣಾ ಪರಮೇಶ್ವರಪ್ಪ, ಸಮಾಜದ ಮುಖಂಡರಾದ ಅರವಳ್ಳಿ ವೀರಣ್ಣ, ಬಳ್ಳುಳ್ಳಿ ವೀರಣ್ಣ, ಎಸ್‌.ಹಾಲೇಶ, ಬ್ಯಾಲಹುಣಿ ಬಸವನಗೌಡ, ಪಿ.ವೀರಣ್ಣ, ಸೊಪ್ಪಿನ ಮಂಜುನಾಥ, ಹಾಗೂ ಬಿ.ಹನುಮಂತಪ್ಪ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.