ಕರಾವಳಿ: ಮುಂಗಾರು ಮಾತ್ರ; ಹಿಂಗಾರು ಮರೀಚಿಕೆ


Team Udayavani, Nov 27, 2018, 10:36 AM IST

rain.jpg

ಮಂಗಳೂರು: ಈ ಬಾರಿ ಮಳೆಗಾಲ ಮುಗಿಯುವುದಕ್ಕೂ ಮೊದಲೇ ಕರಾವಳಿಯ ಜೀವನಾಡಿ ನದಿಗಳಲ್ಲಿ ನೀರಿನ ಮಟ್ಟ ಕುಸಿದಿತ್ತು. ಬಹಳಷ್ಟು ಕಡೆ ಅಂತರ್ಜಲವೂ ಕುಸಿದು ಅಚ್ಚರಿ ಮೂಡಿಸಿತ್ತು. ಇದರ ನಡುವೆ ಹಿಂಗಾರು ಮಳೆಯೂ ಗಮನಾರ್ಹ ಪ್ರಮಾಣದಲ್ಲಿ ಕಡಿಮೆಯಾಗಿದೆ.  

ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಈ ಬಾರಿಯ ಹಿಂಗಾರು ಆರಂಭಿಕ ಹಂತದಲ್ಲಿಯೇ ಕ್ಷೀಣಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದ ಮಳೆ ಬರುವ  ಸಾಧ್ಯತೆ ತೀರಾ ಕಡಿಮೆ. ಕರಾವಳಿ ಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಸುಗ್ಗಿ ಬೆಳೆಯು ಬಹುತೇಕ ಹಿಂಗಾರು ಮಳೆಯನ್ನು ಅವಲಂಬಿಸಿದೆ. ಮುಂಗಾರಿನಲ್ಲಿ ಅತಿವೃಷ್ಟಿಯಿಂದ ನಲುಗಿದ್ದ ರೈತ ಈಗ ಹಿಂಗಾರು ಮಳೆ ಕೊರತೆಯಿಂದ ಸಂಕಷ್ಟಕ್ಕೀಡಾಗಿದ್ದಾನೆ. ಸಾಮಾನ್ಯವಾಗಿ ಡಿಸೆಂಬರ್‌ ಅಂತ್ಯದ ವರೆಗೂ ನದಿ, ತೊರೆ ಗಳಲ್ಲಿ ನೀರಿನ ಹರಿವು ಇರುತ್ತದೆ. ಆದರೆ ಈ ಬಾರಿ ತೀರಾ ಕಡಿಮೆಯಾಗಿದೆ. ಹಿಂಗಾರು ಮಳೆ ಉತ್ತಮವಾಗಿ ಸುರಿದು ನೀರಿನ ಮಟ್ಟ ಕಾಯ್ದುಕೊಳ್ಳಲು ಸಹಾಯವಾಗಬಹುದು ಎಂದು ನಿರೀಕ್ಷಿಸ ಲಾಗಿತ್ತು. ಅದಾಗಿಲ್ಲ. 

ಸಾಮಾನ್ಯವಾಗಿ ತೋಟಗಾರಿಕೆ ಬೆಳೆಗಳಿಗೆ ನೀರು ಹಾಯಿಸಲು ಪ್ರಾರಂಭಿಸುವುದು ಡಿಸೆಂಬರ್‌ ಬಳಿಕ. ಆದರೆ ಈ ಬಾರಿ ಅನೇಕ ಕಡೆ ಈಗಾಗಲೇ ನೀರುಣಿಸಲು ಆರಂಭಿಸಲಾಗಿದೆ. ಅಕ್ಟೋಬರ್‌ 2ನೇ ವಾರದಿಂದ ಹಿಂಗಾರು ಮಾರುತದ ಪ್ರವೇಶವಾಗಿ ಮಧ್ಯಾಹ್ನದ ಅನಂತರ ಗುಡುಗು ಸಹಿತ ಭಾರೀ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಹಿಂಗಾರು ಮಾರುತ ದುರ್ಬಲವಾಗಿ ನಿರೀಕ್ಷಿತ ಮಳೆಯಾಗಿಲ್ಲ.

ಶೇ.29ರಷ್ಟು ಕೊರತೆ 
ನ‌. 3ರಂದು ರಾಜ್ಯಕ್ಕೆ ಹಿಂಗಾರು ಪ್ರವೇಶಿಸಿದ್ದರೂ ನಿರೀಕ್ಷೆಯಂತೆ ಮಳೆಯಾಗಲಿಲ್ಲ. ನ.19ರಂದು ಕೊನೆಯ ಮಳೆ ನಕ್ಷತ್ರ ಅನುರಾಧಾ ಪ್ರಾರಂಭವಾಗಿ ಆಸುಪಾಸಿನ ಒಂದೆರಡು ದಿನ ಉತ್ತಮ ಮಳೆಯಾಗಿತ್ತು. ಆ ಬಳಿಕ ಉತ್ತಮ ಮಳೆಯಾಗಿಲ್ಲ. ಇದರಿಂದಾಗಿ ಕರಾವಳಿಯಲ್ಲಿ ಶೇ.29ರಷ್ಟು ಮಳೆ ಕೊರತೆ ಉಂಟಾಗಿದೆ. ಅ.1ರಿಂದ ನ.22ರ ವರೆಗೆ ಕರಾವಳಿ ಪ್ರದೇಶದಲ್ಲಿ 239.20 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಕೇವಲ 171.36 ಮಿ.ಮೀ. ಮಳೆ ಸುರಿದಿದೆ. 

ಅವಧಿಗೂ ಮುನ್ನ ಶುರುವಾಗಿದೆ ಚಳಿ
ಕರಾವಳಿ ಪ್ರದೇಶದಲ್ಲಿ  ಸಾಮಾನ್ಯವಾಗಿ ಡಿಸೆಂಬರ್‌, ಜನವರಿ, ಫೆಬ್ರ ವರಿ ತಿಂಗಳಿನಲ್ಲಿ ಚಳಿ ಇರುತ್ತದೆ. ಆದರೆ ಈ ಬಾರಿ ಅವಧಿಗೂ ಮುನ್ನ ಅಂದರೆ ನವೆಂಬರ್‌ನಲ್ಲಿಯೇ ಚಳಿ ಪ್ರಾರಂಭವಾಗಿದೆ. ಬಾನಿ ನಲ್ಲಿ ಮೋಡಗಳ ಚಲನೆ ಕಡಿಮೆ ಯಾಗಿದ್ದೇ ಇದಕ್ಕೆ ಕಾರಣ. ಇದ ರಿಂದಾಗಿ ವಾತಾವರಣದಲ್ಲಿ  ಮಧ್ಯಾಹ್ನದ ವೇಳೆ ವಾಡಿಕೆ ಉಷ್ಣಾಂಶಕ್ಕಿಂತ 2-3 ಡಿಗ್ರಿ ಸೆ. ಹೆಚ್ಚಳವಾಗುತ್ತಿದೆ. ಅದೇ ರೀತಿ ರಾತ್ರಿ ವೇಳೆ ವಾಡಿಕೆಗಿಂತ 2 ಡಿ.ಸೆ. ಉಷ್ಣಾಂಶ ಕಡಿಮೆಯಾಗುತ್ತಿದೆ.

ಭರವಸೆ ಹುಸಿಯಾಯ್ತು
ಈ ನಡುವೆ ಬಂಗಾಲಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿ ಉತ್ತಮ ಮಳೆ ನಿರೀಕ್ಷೆ ಮೂಡಿಸಿದರೂ ಪಥ ಬದಲಾಗಿ ದೊಡ್ಡ ಮಟ್ಟದ ಮಳೆ ಸುರಿಯಲಿಲ್ಲ. ತ. ನಾಡು, ಕೇರಳದ ಕೆಲವೆಡೆ ಮಳೆ ಸುರಿದಿತ್ತು. ಈಗ ಮತ್ತೆ ಬಂಗಾಲಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. ತ.ನಾಡು, ಪುದುಚೇರಿ ಮತ್ತು ಕೇರಳದಲ್ಲಿ ನ. 29ರಿಂದ ಕೆಲವು ದಿನ ಮಳೆ ನಿರೀಕ್ಷೆ ಇದೆ. ಈಗಿನ ಮುನ್ಸೂಚನೆಯಂತೆ ಕರಾವಳಿಯಲ್ಲಿ ಲಘು ಮಳೆ ಮಾತ್ರ ನಿರೀಕ್ಷಿಸಲಾಗಿದೆ.

ಮಾನ್ಸೂನ್‌ ಮೇಲೂ ಪರಿಣಾಮ?
ಹವಾಮಾನ ಅಧಿಕಾರಿಯೊಬ್ಬರು ‘ಉದಯವಾಣಿ’ಗೆ ಪ್ರತಿಕ್ರಿಯಿಸಿ, ಎಲ್‌ನಿನೊ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗದೇ ಇದ್ದಿರಬಹುದು. ಉಷ್ಣಾಂಶ ಮತ್ತಷ್ಟು ಹೆಚ್ಚಿದರೆ ಮುಂದಿನ ವರ್ಷದ ಮಾನ್ಸೂನ್‌ ಮೇಲೆ ಕೂಡ ನೇರ ಪರಿಣಾಮ ಬೀಳ ಬಹುದು ಎಂದಿದ್ದಾರೆ.

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.