ಭಕ್ತಿಯಲ್ಲಿ ಶಕ್ತಿ ತೋರಿದ ಕನಕದಾಸರು
Team Udayavani, Nov 27, 2018, 11:41 AM IST
ಶಹಾಬಾದ: ಕೃಷ್ಣನನ್ನೇ ತನ್ನತ್ತ ತಿರುಗಿಸುವ ಮೂಲಕ ಭಕ್ತಿಯಲ್ಲಿ ಎಷ್ಟೊಂದು ಶಕ್ತಿಯಿದೆ ಎಂಬುದನ್ನು ತೋರಿಸಿಕೊಟ್ಟವರು ಕನಕದಾಸರು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ಅಧ್ಯಕ್ಷ ಮಲ್ಕಣ್ಣ ಮುದ್ದಾ ಹೇಳಿದರು. ನಗರದ ಕನ್ನಡ ಭವನದಲ್ಲಿ ಕಸಾಪದಿಂದ ಆಯೋಜಿಸಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲರೂ ದೇವರ ದರ್ಶನಕ್ಕಾಗಿ ದೇಶದ ಎಲ್ಲ ತೀರ್ಥ ಕ್ಷೇತ್ರಗಳಿಗೆ ಹೋಗುತ್ತಾರೆ. ಆದರೆ ದೇವರನ್ನೇ ತನ್ನ ಭಕ್ತಿಯ ಶಕ್ತಿಯಿಂದ ತನ್ನತ್ತ ಸೆಳೆದವರು ಕನಕದಾಸರು. ಸಮಾಜದಲ್ಲಿರುವ ಮೂಢನಂಬಿಕೆ ತೊಲಗಿಸಲು ತಮ್ಮ ಕೀರ್ತನೆಗಳ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು. ದಾಸ ಸಾಹಿತ್ಯ ಮೂಲಕ ಸಮಾಜದ ಓರೆ ಕೋರೆ ತಿದ್ದುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ಅವಿರತವಾಗಿ ಶ್ರಮಿಸಿದ ಮಹಾನ್ ಚಿಂತಕ ಕನಕದಾಸರಾಗಿದ್ದರು ಎಂದು ಹೇಳಿದರು.
ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ ಮಾತನಾಡಿ, ಕನಕದಾಸರು ಹಾಗೂ ಪುರಂದರ ದಾಸರಂತಹ ವೈಚಾರಕ ಸಂತರಿಂದಾಗಿ ಸಮಾಜದಲ್ಲಿದ್ದ ಮೇಲು-ಕೀಳು ಮತ್ತು ಜಾತಿ- ಮತಗಳಂಥ ಭಾವನೆಗಳು ಬದಿಗೆ ಸರಿದವು.
ದೇವಸ್ತುತಿಯೇ ಮುಖ್ಯ ಎನಿಸಿದ ಭಕ್ತಿ ಪರಂಪರೆ ಕಾಲದಲ್ಲಿ ಕನಕದಾಸರು ತಮ್ಮ ದಾಸಸಾಹಿತ್ಯದ ಮೂಲಕ ವೈಚಾರಿಕ ಮತ್ತು ಪ್ರತಿಭಟಿಸುತ್ತ ಜೀವನ ಸಾಗಿಸಿದ್ದರು ಎಂದು ಹೇಳಿದರು. ಕಸಾಪ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ್, ಧನವಂತ ಮುದಿಗೌಡ, ಅಶೋಕ ಮೊಸಲಗಿ, ಬಂಡಪ್ಪ ಪೂಜಾರಿ, ರಾಯಣ್ಣ ಪೂಜಾರಿ, ಶಾಂತಪ್ಪ ಹಡಪದ, ಸುರೇಶ ಪೂಜಾರಿ, ರಮೇಶ ಜೋಗದನಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ