ವಿದ್ಯಾರ್ಥಿಗಳೇ, ಸಂಶೋಧಕರ ಕೊರತೆ ನೀಗಿಸಿ


Team Udayavani, Nov 27, 2018, 12:24 PM IST

m5-vidyarthi.jpg

ಮೈಸೂರು: ರಾಷ್ಟ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಎಲ್ಲಾ ಆಯಾಮಗಳು ವಿಫ‌ಲವಾಗಿದ್ದು, ಸಮಾಜದ ಪರಿವರ್ತಕರಾಗಿ ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಆದರ್ಶವಾಗಿಸಿಕೊಳ್ಳಬೇಕಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ ಹೇಳಿದರು. 

ಹುಲಗಾದ್ರಿ ಟ್ರಸ್ಟ್‌ ಹಾಗೂ ಅಮೆರಿಕದ ನಿವಾಸಿ ಡಾ ಮೀರಾ ಸ್ವಾನಾಥನ್‌ ಇವರ ಸಹಭಾಗಿತ್ವದಲ್ಲಿ ನಗರದ ಎನ್‌ಐಇ ಡೈಮೆಂಡ್‌ ಜ್ಯುಬಲಿ ನ್ಪೋಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಬೃಹತ್‌ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ವಿಫ‌ಲಾವಾಗಿವೆ.

ಪ್ರಜಾಪ್ರಭುತ್ವದ ಆಶಯಗಳನ್ನೇ ಅಲುಗಾಡಿಸಿದ್ದು, ಅಮೂಲಾಗ್ರವಾದ ಬದಲಾವಣೆಯೊಂದೇ ದೇಶದ ಆಶಾಕಿರಣವಾಗಿದೆ ಎಂದರು.  ದೇಶದಲ್ಲಿ 30 ವರ್ಷಗಳ ಹಿಂದೆ 36 ಎಂಜಿನಿಯರಿಂಗ್‌ ಕಾಲೇಜುಗಳು ಮಾತ್ರವೇ ಇತ್ತು. ಆದರೆ, ಇಂದು 10,900 ಎಂಜನಿಯರಿಂಗ್‌ ಕಾಲೇಜುಗಳಿದ್ದು, ಪ್ರತಿವರ್ಷ 16 ಲಕ್ಷ ಮಂದಿ ಎಂಜಿನಿಯರಿಂಗ್‌ ಪದವಿ ಪಡೆದು ಹೊರಬರುತ್ತಿದ್ದಾರೆ.

ಅವರಲ್ಲಿ ನಿಜವಾದ ಅರ್ಹತೆ ಇರುವ  ಶೇ.17 ಮಾತ್ರವಿದ್ದು, ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ಅಲ್ಲದೇ ಎಲ್ಲರೂ ವೈದ್ಯರು, ಎಂಜಿನಿಯರ್‌ ಆಗಬೇಕೆಂದರೆ ಸಂಶೋಧಕರಾಗುವವರು ಯಾರು ಎಂದು ಪ್ರಶ್ನಿಸಿದರು. ದೇಶದಲ್ಲಿ ಸಂಶೋಧಕರ ಕೊರತೆ ಇದೆ ಎಂಬುದನ್ನು ಅರಿತು ಮುನ್ನಡೆಯುವ ಮೂಲಕ ಸಮಾಜದ ಪರಿವರ್ತಕರಾಗಿ ಸಂಸ್ಕೃತಿಯನ್ನು ಉಳಿಸಿ-ಬೆಳೆಸಲು ನಿಮ್ಮ ಸೇವೆ ಆದರ್ಶವಾಗಲಿ ಎಂದರು. 

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎನ್‌.ಕುಮಾರ್‌ ಮಾತನಾಡಿ, ಇತ್ತೀಚಿಗೆ ಯುವಜನತೆಯ ಹಣದ ವ್ಯಾಮೋಹದಿಂದ ಸಮಾಜವನ್ನು ವೃದ್ಧಾಶ್ರಮದತ್ತ ದೂಡಿದೆ. ಹೀಗಾಗಿ ಯುವಜನತೆ ನಿಮ್ಮ ಬುದ್ಧಿವಂತಿಕೆಯನ್ನು ಹಣಕ್ಕೆ ಮಾರಾಟ ಮಾಡಿಕೊಳ್ಳದೆ, ಸಮಾಜಕ್ಕೆ ಉಪಯೋಗವಾಗುವಂತೆ ನೋಡಿಕೊಳ್ಳಬೇಕಿದೆ. ಜೀವನದಲ್ಲಿ ಅಂಕಗಳಿಕೆ ಎಂಬುದು ಚಿಕ್ಕ ಭಾಗವಾಗಿದ್ದು, ಅಂಕ ಗಳಿಕೆಯನ್ನೇ ಮುಖ್ಯ ಗುರಿಯನ್ನಾಗಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದರು. 

ಕಾರ್ಯಕ್ರಮದಲ್ಲಿ 1000 ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 60 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಲಾಯಿತು. ಶಾಸಕ ಎಸ್‌.ಎ. ರಾಮದಾಸ್‌, ಮೈಸೂರು ಮೆಡಿಕಲ್‌ ಕಾಲೇಜಿನ ನಿವೃತ್ತ ನಿರ್ದೇಶಕಿ ಡಾ. ಗೀತಾ ಅವಧಾನಿ. ಎನ್‌ಐಇ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಚಂದ್ರಶೇಖರ್‌. ಹುಲಗಾದ್ರಿ ಟ್ರಸ್ಟ್‌, ಆದರ್ಶ ಸೇವಾ ಸಂಘದ ಮುಖ್ಯಸ್ಥ ಜಿ.ಆರ್‌.ನಾಗರಾಜ್‌, ಕಾರ್ಯದರ್ಶಿ ರಾಮಕೃಷ್ಣ, ರಘೋತ್ತಮ, ವೆಂಕಟರಾಮ್‌ ಇತರರಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.