ಯೋಗದಿಂದ ರೋಗ ದೂರ: ಗೌರಮ್ಮ
Team Udayavani, Nov 27, 2018, 4:00 PM IST
ಕೂಡ್ಲಿಗಿ: ಯೋಗದ ಮೂಲಕ ರೋಗಗಳನ್ನು ದೂರವಿಡಬಹುದು. ಯೋಗದಿಂದ ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯ, ಶಾಂತಿಯನ್ನು ಪಡೆಯಬಹುದಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ಜಿಲ್ಲಾ ಮಹಿಳಾ ಪ್ರಭಾರಿ ಬಿ.ಗೌರಮ್ಮ ಕರೆ ನೀಡಿದರು.
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತಂಜಲಿ ಯೋಗ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಆಯೋಜಿಸಿದ್ದ ಯೋಗ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಒತ್ತಡದ ಜೀವನದಲ್ಲಿ ನೂರೆಂಟು ಕಾಯಿಲೆಗಳಿಗೆ ಗುರಿಯಾಗುತ್ತಿರುವ ಜನತೆ ಯೋಗದ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇಂದಿನ ಜೀವನ ಪದ್ಧತಿಯಿಂದ ಶಾಂತಿ, ನೆಮ್ಮದಿ ಇಲ್ಲದಂತಾಗಿದ್ದು, ಇದರಿಂದ ಮನುಷ್ಯನ ಬದುಕು ಅಧೋಗತಿಯತ್ತ ಸಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯೋಗ ನೆಮ್ಮದಿಯ ಬದುಕಿಗೆ ಸಂಜೀವಿನ ಇದ್ದ ಹಾಗೇ. ಇದನ್ನು ಎಲ್ಲರೂ ಅರಿತು ನಿತ್ಯ ಜೀವನದಲ್ಲಿ ಯೋಗಕ್ಕೆ ಅಲ್ಪ ಸಮಯ ಮೀಸಲಿಡುವುದರ ಮೂಲಕ ಆರೋಗ್ಯವಂತಾಗಬೇಕಿದೆ ಎಂದು ತಿಳಿಸಿದರು.
ಪತಂಜಲಿ ಆರೋಗ್ಯ ಕೇಂದ್ರದ ಚನ್ನಣ್ಣ ಮಾತನಾಡಿ, ಯೋಗದಿಂದ ಇಂದು ಮನುಷ್ಯ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬಹುದಾಗಿದೆ. ಯೋಗದಿಂದ ನೂರಾರು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ದೇಶದ ಯೋಗವನ್ನು ಇಂದು ಇಡೀ ಜಗತ್ತೇ ಅನುಸರಿಸುತ್ತಿದ್ದು,
ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದಿಂದ ಮನುಷ್ಯ ತನ್ನ ವ್ಯಕ್ತಿತ್ವ, ನೆಮ್ಮದಿಯ ಬದುಕನ್ನೇ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಇಡೀ ಜಗತ್ತೇ ಇಂದು ಯೋಗಕ್ಕೆ ಮಹತ್ವ ನೀಡುತ್ತಿದೆ. ಹೀಗಾಗಿ ಯೋಗದ ಮೂಲಕ ರೋಗಗಳನ್ನು ದೂರವಿಟ್ಟು ಸ್ವತ್ಛಂದದ ಬದುಕನ್ನು ತಮ್ಮದಾಗಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೂಡ್ಲಿಗಿ ಪಿ.ಎಸ್.ಐ. ಹಾಲೇಶ್ ಧ್ವಜವನ್ನು ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪತಂಜಲಿ ಯೋಗಿ ಸಮಿತಿ ಅಧ್ಯಕ್ಷ ರಾಮಣ್ಣ, ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಪ್ರಕಾಶ್, ಸಂದೀಪ್ ರಾಯಸಂ, ಮೈದಾನ ಗೆಳೆಯರ ಬಳಗದ ಮಹಾಂತೇಶ್, ಕಲ್ಲಪ್ಪ, ಚನ್ನಬಸವನಗೌಡ, ವಿವೇಕ್, ಸಚಿನ್, ಉಪನ್ಯಾಸಕ ಕೆ.ನಾಗರಾಜ, ನಿವೃತ್ತ ಶಿಕ್ಷಕ ಎ.ಎಂ. ವೀರಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ