ಪುಣೆ ಕನ್ನಡ ಸಂಘದ ವತಿಯಿಂದ ಹಾಸ್ಯ ಕವಿ ಸಮ್ಮೇಳನ


Team Udayavani, Nov 27, 2018, 4:40 PM IST

2511mum02.jpg

ಪುಣೆ: ಕವನ ಹೃದಯದಲ್ಲಿ ಹುಟ್ಟುತ್ತದೆ. ಬುದ್ಧಿ ಅದನ್ನು ಕಟ್ಟುತ್ತದೆ. ಕವನಗಳು ಹೃದಯದ ಭಾವನೆಗಳ ತರಂಗಗಳನ್ನು ಎಬ್ಬಿಸುವಂತಿರಬೇಕು. ವಿವಿಧ ಯೋಚನಾಲಹರಿಯನ್ನು ಎಬ್ಬಿಸಿ ಮನಸ್ಸಿಗೆ ಮುದ ನೀಡುವಂತಿರ ಬೇಕು. ಭಾವನೆಗಳ ಉತ್ಕಟತೆ ಇಲ್ಲದಿದ್ದರೆ ಕವನಕ್ಕೆ ಅರ್ಥವಿಲ್ಲ.  ಕವನದಲ್ಲಿ ಪ್ರಾಸ, ಲಯ, ತಾಳ ಇದ್ದರೆ ಇನ್ನಷ್ಟು ಆಕರ್ಷಕವಾಗಿ ಮೂಡಿಬರುತ್ತದೆ. ಅದರಲ್ಲಿಯೂ ಹಾಸ್ಯಕವನಗಳು ಹಾಸ್ಯಪ್ರಜ್ಞೆಯನ್ನು ಮನಸ್ಸಿಗೆ ಮೂಡಿಸುವುದಲ್ಲದೆ ಮಾನ ಸಿಕ ಋಣಾತ್ಮಕ ಭಾವನೆಗಳನ್ನು ದೂರ ಮಾಡುತ್ತದೆ. ಸಮಕಾಲೀನ ಜಗತ್ತಿನಲ್ಲಿ ಸಮಾಜದಲ್ಲಿರುವ ಆಚಾರ, ವಿಚಾರ, ಸಂಪ್ರದಾಯಗಳನ್ನು ಸ್ವಂತ ದೃಷ್ಟಿ ಯಲ್ಲಿ ಸೂಕ್ಷ್ಮವಾಗಿ ಅವಲೋಕಿಸಿ ಅದರಲ್ಲಿರುವ ಲೋಪದೋಷಗಳನ್ನು ಗುರುತಿಸಿ ನಮ್ಮಲ್ಲಿರುವ  ಸೃಜನ ಶೀಲತೆಯ ಸಹಾಯದಿಂದ, ಅನುಭವದ ಸಹಾಯದಿಂದ ಕಲಾತ್ಮಕವಾಗಿ ಅಭಿವ್ಯಕ್ತಿಗೊಳಿಸುವ ಶಕ್ತ ಮಾಧ್ಯಮವೇ ಕವನ ಎಂದು ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ, ಕವಯಿತ್ರಿ ಇಂದಿರಾ ಸಾಲ್ಯಾನ್‌ ಅಭಿಪ್ರಾಯಪಟ್ಟರು.

ಅವರು ನ. 24ರಂದು ಪುಣೆ ಕನ್ನಡ ಸಂಘದ ಡಾ| ಶ್ಯಾಮರಾವ್‌ ಕಲ್ಮಾಡಿ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ನಡೆದ ಪುಣೆ ಕನ್ನಡ ಸಂಘದಿಂದ ಆಯೋಜಿಸಿದ ಹತ್ತನೇ ವಾರ್ಷಿಕ  ಕವಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡಾಂಬೆಯ ಅಳಿಲ ಸೇವೆಯನ್ನು ಸಲ್ಲಿಸುವ ಪ್ರಯತ್ನ ನಮ್ಮದಾಗಿದ್ದು,  ಪುಣೆ ಕನ್ನಡ ಸಂಘದ ಉದ್ದೇಶವೂ ಇದೆ ಆಗಿದೆ. ಕನ್ನಡ ಭಾಷೆಯನ್ನೂ ಉಳಿಸುವ, ಬೆಳೆಸುವ, ಮೆರೆಸುವ ಕಾರ್ಯವನ್ನು ಕನ್ನಡ ಸಂಘ ಮಾಡುತ್ತಾ ಬಂದಿದ್ದು ಅದಕ್ಕಾಗಿ ಸಾಹಿತ್ಯಪರ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ನುಡಿದು, ದೋಸೆ ಎಂಬ ಸ್ವರಚಿತ ಕವನವನ್ನು ಸುಶ್ರಾವ್ಯವಾಗಿ ಹಾಡಿ ರಂಜಿಸಿದರು.

ಕನ್ನಡ ಮಾಧ್ಯಮ ಹೈಸ್ಕೂಲ್‌ ಮುಖ್ಯೋಪಾಧ್ಯಾಯ ಚಂದ್ರಕಾಂತ ಹಾರಕೂಡೆ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡಿಗರ ಹಿತದೃಷ್ಟಿಯನ್ನಿಟ್ಟುಕೊಂಡು  ಕನ್ನಡ ಸಾಹಿತ್ಯ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ  ಪುಣೆ ಕನ್ನಡ ಸಂಘದ ವತಿಯಿಂದ ನಿರಂತರವಾಗಿ ಇದೀಗ ಹತ್ತನೇ ವಾರ್ಷಿಕ ಕವಿ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ವರ್ಷವಿಡೀ ಹತ್ತು ಹಲವು ಕನ್ನಡಪರ ಚಟುವಟಿಕೆಗಳು ಕನ್ನಡ ಸಂಘದಿಂದ ನಡೆಯುತ್ತಾ ಇದೆ. ಅಂತೆಯೇ ನವೆಂಬರ್‌ ಪೂರ್ಣ ತಿಂಗಳು ಕನ್ನಡ ರಾಜ್ಯೋತ್ಸವದಂಗವಾಗಿ ಕನ್ನಡಪರ ಕಾರ್ಯಕ್ರಮಗಳನ್ನು  ಅಯೋಜಿಸುತ್ತಿದ್ದು ಕವಿ ಸಮ್ಮೇಳನವನ್ನೂ ಆಚರಿಸುತ್ತಿದ್ದೇವೆ. ಇಂದು ಈ ಕವಿ ಸಮ್ಮೇಳನದಲ್ಲಿ ಭಾಗವಹಿಸಿದ ಕವಿವರ್ಯರೆಲ್ಲರಿಗೂ ಶುಭಾಶಯಗಳು ಎಂದರು.

ಪುಣೆಯ ಕವಿಗಳಾದ ಕೃ. ಶಿ. ಹೆಗಡೆ,  ಕೃಷ್ಣ ಇತ್ನಾಳ್‌, ಪಾಂಗಾಳ ವಿಶ್ವನಾಥ ಶೆಟ್ಟಿ, ಪೊಳಲಿ ಮಹೇಶ್‌ ಹೆಗ್ಡೆ, ಕಿರಣ್‌ ಬಿ. ರೈ ಕರ್ನೂರು, ಜ್ಯೋತಿ ಕಡಕೊಳ್‌, ರವೀಶ್‌ ನಂಜುಂಡಯ್ಯ, ಸದಾನಂದ ಬಿಳ್ಳೂರ್‌, ಮಮತಾ ಅಂಚನ್‌, ಹೇಮಾ ಎ. ಭಟ್‌ ಮದಂಗಲ್ಲು, ಸುಭಾಶ್ಚಂದ್ರ ಸಕ್ರೋಜಿ, ಅನ್ನಪೂರ್ಣ ಸಕ್ರೋಜಿ ಹಾಗೂ ವಿಕೇಶ್‌ ರೈ ಶೇಣಿ ಅವರು ಕವನ ವಾಚಿಸಿದರು. ಮೊದಲಿಗೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕವಿಗಳನ್ನು ಸಂಘದ ವತಿಯಿಂದ ಸತ್ಕರಿಸಲಾಯಿತು. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕವಿಗಳ ಪರಿಚಯವನ್ನು ಮಾಡಿಕೊಟ್ಟರು.  ಶಿಕ್ಷಕಿ ಶೋಭಾ ಪಂಚಾಂಗಮಠ ಕಾರ್ಯಕ್ರಮ ನಿರೂಪಿಸಿ ಶಿಕ್ಷಕ ಟಿ. ವಿ. ಸದಾನಂದ ವಂದಿಸಿದರು. ಕಾರ್ಯಕ್ರಮದಲ್ಲಿ ಪುಣೆ ಕನ್ನಡ ಸಂಘದ ವಿಶ್ವಸ್ಥರಾದ ಡಾ| ಬಾಲಾಜಿತ್‌ ಶೆಟ್ಟಿ, ಜನಸಂಪರ್ಕಾಧಿಕಾರಿ ರಾಮದಾಸ ಆಚಾರ್ಯ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಪ್ರೇಮಿಗಳು ಉಪಸ್ಥಿತರಿದ್ದರು. 

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.