ಸುಮಲತಾ ಅಂಬರೀಶ್ಗೆ ಊಟ ಕಳುಹಿಸಿದ ಭಾರತಿ
Team Udayavani, Nov 28, 2018, 6:00 AM IST
ಬೆಂಗಳೂರು: ಅಂಬರೀಶ್ ನಿಧನದ ನಂತರ ಅವರ ಮನೆ ಕಳೆಗುಂದಿದೆ. ಯಜಮಾನನಿಲ್ಲದೇ ಮನೆ ಬಿಕೋ ಎನ್ನುತ್ತಿದೆ.
ಅಂಬರೀಶ್ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ಗೆ ಸಾಂತ್ವನ ಹೇಳಲು ಸಾಕಷ್ಟು ಜನರು ಆಗಮಿಸುತ್ತಿದ್ದ ದೃಶ್ಯ
ಮಂಗಳವಾರ ಕಂಡು ಬಂದಿತು.
ಮತ್ತೂಂದೆಡೆ, ಕಳೆದ ಮೂರು ದಿನಗಳಿಂದ ಮಾನಸಿಕ ಹಾಗೂ ದೈಹಿಕವಾಗಿ ಬಳಲಿರುವ ಅಂಬಿ ಪತ್ನಿ ಮತ್ತು ಪುತ್ರನಿಗೆ ಭಾರತಿ ವಿಷ್ಣುವರ್ಧನ್ ತಮ್ಮ ಮನೆಯಲ್ಲಿ ಊಟ ತಯಾರು ಮಾಡಿ ಕಳುಹಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಾವು ಬರಲಾಗದೇ ಭಾರತಿ ವಿಷ್ಣುವರ್ಧನ್, ತಮ್ಮ ಕಾರು ಚಾಲಕನ ಕೈಯಲ್ಲಿ ಊಟ ಕಳುಹಿಸಿದ್ದಾರೆನ್ನಲಾಗಿದೆ. ಇನ್ನು, ಅಭಿಷೇಕ್ ಹಾಗೂ ಸುಮಲತಾ ಅವರಿಗೆ ಸಾಂತ್ವನ ಹೇಳಲು ಅನೇಕ ಮಂದಿ ಜೆ.ಪಿ.ನಗರದ ನಿವಾಸಕ್ಕೆ ಧಾವಿಸುತ್ತಿದ್ದಾರೆ. ಮಂಗಳವಾರ “ಅಮರ್’ ಚಿತ್ರದ ನಿರ್ದೇಶಕ ನಾಗಶೇಖರ್ ಸೇರಿ ಅನೇಕರು ಅಂಬರೀಶ್ ಅವರ ಮನೆಗೆ ಭೇಟಿ ನೀಡಿ, ಅಭಿಷೇಕ್ ಹಾಗೂ ಸುಮಲತಾ ಅವರಿಗೆ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ