ತೋಟಗಾರಿಕಾ ಸಚಿವರಿಂದ ಕೊಳೆರೋಗ ಪರಿಹಾರದ ಭರವಸೆ: ಶಾಸಕ


Team Udayavani, Nov 29, 2018, 1:05 AM IST

koleroga-28-11.jpg

ಕುಂದಾಪುರ: ತಾಲೂಕಿಗೆ ಕೊಳೆರೋಗ ಪರಿಹಾರ ಬಾಬ್ತು 3 ಕೋ.ರೂ. ಬಾಕಿ ಇದೆ. ತೋಟಗಾರಿಕಾ ಸಚಿವರ ಜತೆ ಮಾತನಾಡಲಾಗಿದ್ದು ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ. ಅವರು ಬುಧವಾರ ಇಲ್ಲಿನ ತಾಲೂಕು ಪಂಚಾಯತ್‌ನಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೊಲೀಸರಿಗೆ ತರಾಟೆ
ಜಿ.ಪಂ. ಸದಸ್ಯ ಸುರೇಶ್‌ ಬಟ್ವಾಡಿ ಅವರಿಗೆ ಬೈಂದೂರು ಎಸ್‌ಐ ಅವಮಾನಿಸಿದ್ದಾರೆ ಎನ್ನುವ ವಿಚಾರ ತೀವ್ರ ಚರ್ಚೆಗೆ ಒಳಗಾಯಿತು. ಕುಂದಾಪುರ ಎಎಸ್‌ಐ ಅವರು ಸಭೆಗೆ ಪೊಲೀಸ್‌ ಇಲಾಖೆ ಪರವಾಗಿ ಆಗಮಿಸಿದ್ದು ಶಾಸಕರನ್ನು ಕೆರಳಿಸಿತು. ಅನಂತರ ಡಿವೈಎಸ್‌ಪಿ ದಿನೇಶ್‌ ಕುಮಾರ್‌ ಬಿ.ಪಿ. ಅವರನ್ನು ಸಭೆಗೆ ಕರೆಸಲಾಯಿತು. ಪೊಲೀಸ್‌ ದೌರ್ಜನ್ಯ ಕುರಿತು ಲಿಖೀತ ದೂರು ಬಂದಿಲ್ಲ. ಬಂದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಡಿವೈಎಸ್‌ಪಿ ಸ್ಪಷ್ಟನೆ ನೀಡಿದರು.

ತಾಲೂಕು ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ  ಸಿಬಂದಿ ಕೊರತೆ, ಆಯುರ್ವೇದ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಬಗ್ಗೆ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಬೈಂದೂರು ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆ ದರ್ಜೆಗೆ ಏರಿಸಲು ಮನವಿ ಮಾಡಲಾಗಿದೆ. ಸಿದ್ದಾಪುರ, ಗಂಗೊಳ್ಳಿಗೆ 108 ಅಂಬುಲೆನ್ಸ್‌ ಬಂದಿದ್ದು ಕಂಡ್ಲೂರು, ವಂಡ್ಸೆಗೆ ಬರಲಿದೆ ಎಂದು ಶಾಸಕರು ಹೇಳಿದರು. ಕೋಡಿಗೆ ನಗರ ಆರೋಗ್ಯ ಕೇಂದ್ರ ಮಂಜೂರಿಗೆ ಬರೆದಿದ್ದರೂ, 50 ಸಾವಿರ ಜನರಿರಬೇಕೆಂಬ ಷರತ್ತಿನಿಂದ ಮಂಜೂರು ಅಸಾಧ್ಯ ಎಂದು ಡಾ| ನಾಗಭೂಷಣ್‌ ಉಡುಪ ಹೇಳಿದರು. ತಾ. ಆಸ್ಪತ್ರೆಯಲ್ಲಿ ಜಿ.ಶಂಕರ್‌ ಟ್ರಸ್ಟ್‌ನಿಂದ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯಾಗುತ್ತಿದೆ. ಇದಕ್ಕೆ ವೈದ್ಯರ ನೇಮಕವಾಗಬೇಕಿದೆ. 5 ಡಯಾಲಿಸಿಸ್‌ ಯಂತ್ರಗಳಿದ್ದು 26 ಜನ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದು 16 ಜನ ಕಾಯುತ್ತಿದ್ದಾರೆ. ವೈದ್ಯರು, ಸಿಬಂದಿ ಕೊರತೆ ಇದೆ ಎಂದು ತಾಲೂಕು ಆಸ್ಪತ್ರೆಯ ಡಾ| ರಾಬರ್ಟ್‌ ರೆಬೆಲ್ಲೋ ಹೇಳಿದರು.

ವರದಿ ಪಾಲನೆಯಿಲ್ಲ
ಜಿ.ಪಂ. ಸದಸ್ಯೆ ಶ್ರೀಲತಾ ಅವರು ಪಾಲನಾ ವರದಿ ಪಾಲನೆಯೇ ಆಗುತ್ತಿಲ್ಲ. ಅನುಪಾಲನೆಯಲ್ಲಿ ಹೇಳಿದರೂ ಕಾರ್ಯಗತವಾಗುತ್ತಿಲ್ಲ. ಕಾಟಾಚಾರಕ್ಕೆ ಸಭೆ ಮಾಡಲಾಗುತ್ತಿದೆ ಎಂದರು. ಸಣ್ಣ ನೀರಾವರಿ, ನಿರ್ಮಿತಿ ಕೇಂದ್ರ, ಪೊಲೀಸ್‌ ಇಲಾಖೆಯವರು ಕಳೆದ 3 ತಿಂಗಳ ಹಿಂದೆ ನಡೆದ ಸಭೆಯ ನಡವಳಿಗೆ ಇನ್ನೂ ಉತ್ತರ ನೀಡಿಲ್ಲ ಎಂದರು. ಇದಕ್ಕೆ ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಪ್ರತಿಕ್ರಿಯಿಸಿ ಅಧಿಕಾರಿಗಳು ಇಂತಹ ನಿರ್ಲಕ್ಷ್ಯ ಮಾಡಬಾರದು ಎಂದರು.

ಅರ್ಹರಿಗೆ ಸಿಗುತ್ತಿಲ್ಲ
ಅರ್ಹ ಫ‌ಲಾನುಭವಿಗಳಿಗೆ ಸರಕಾರಿ ಸೌಲತ್ತು ದೊರೆಯದೇ ದೊರೆತವರಿಗೇ ಮರಳಿ ದೊರೆಯುತ್ತಿದೆ. ಇದಕ್ಕಾಗಿ ಪೋರ್ಟಲ್‌ ವ್ಯವಸ್ಥೆ ಮಾಡಲಾಗಿದ್ದು ಸೀನಿಯಾರಿಟಿ ಆಧಾರದಲ್ಲಿ ಮಂಜೂರಾಗುತ್ತದೆ. ಒಮ್ಮೆ ಸೌಕರ್ಯ ದೊರೆತರೆ ಅವರಿಗೆ 7 ವರ್ಷ ಅದೇ ಸೌಕರ್ಯ ದೊರೆಯದಂತೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಹೇಳಿದರು. 

ಇಲಾಖೆಯಲ್ಲಿ ಸಿಬಂದಿ ಕೊರತೆಯಿದ್ದು 20 ಸಹಾಯಕ ಕೃಷಿ ಅಧಿಕಾರಿಗಳಿರಬೇಕಿದ್ದು 3 ಮಂದಿಯಷ್ಟೇ ಇದ್ದಾರೆ ಎಂದರು. ಬೆಳ್ಳಾಲದಲ್ಲಿ ತೆಂಗಿನಮರದಿಂದ ಬಿದ್ದು ಗೋಪಾಲಶೆಟ್ಟಿ ಅವರು ಮೃತಪಟ್ಟು 5 ತಿಂಗಳಾದರೂ ಪರಿಹಾರ ಸಿಗಲಿಲ್ಲ ಎಂದು ಕೆಡಿಪಿ ಸದಸ್ಯ ಪ್ರಸನ್ನ ಕುಮಾರ್‌ ಹೇಳಿದರು. ಇಂತಹ 4 ಪ್ರಕರಣ ಗಳಿದ್ದು ಸಹಾಯಕ ಕಮಿಷನರ್‌ ಅವರ ಜತೆ ಸಭೆ ಮಾಡಿ ಪರಿಹಾರ ನೀಡಲಾಗುವುದು ಎಂದರು. ತಾ.ಪಂ. ಅಧ್ಯಕ್ಷೆ ಜಯಶ್ರೀ ಎಸ್‌. ಮೊಗವೀರ, ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣ, ಕಾರ್ಯ ನಿರ್ವಹಣಾಧಿಕಾರಿ ಕಿರಣ್‌ ಪೆಡೆ°àಕರ್‌, ಡಿವೈಎಸ್‌ಪಿ ದಿನೇಶ್‌ ಕುಮಾರ್‌ ಬಿ.ಪಿ., ಕುಂದಾಪುರ ತಹಶೀಲ್ದಾರ್‌ ತಿಪ್ಪೆಸ್ವಾಮಿ, ಬೈಂದೂರು ತಹಶೀಲ್ದಾರ್‌ ಕಿರಣ್‌ ಗೋರಯ್ಯ ಉಪಸ್ಥಿತರಿದ್ದರು. 

ಕಳಪೆ ಶಾಲಾ ಕಟ್ಟಡ
ಆರ್‌ಎಂಎಸ್‌ ಯೋಜನೆಯಡಿ ಮಾಡಿದ ಶಾಲಾ ಕಾಮಗಾರಿಗಳು ಕಳಪೆಯಾಗಿದೆ ಎಂಬ ಆರೋಪ ಕೇಳಿ ಬಂತು. ಕಾಮಗಾರಿ ಪೂರ್ಣವಾಗದಿದ್ದರೂ ಇಲಾಖೆ ಅವುಗಳನ್ನು ಹಸ್ತಾಂತರಿಸಿಕೊಂಡದ್ದಕ್ಕೆ ಬಾಬು ಶೆಟ್ಟಿ ಅವರಿಂದ ಆಕ್ಷೇಪ ವ್ಯಕ್ತವಾಯಿತು. ಶಿಕ್ಷಣ ಇಲಾಖೆಯೇ ಹೀಗಾದರೆ ಇತರ ಇಲಾಖೆಗಳ ಗತಿಯೇನು ಎಂದು ಶಾಸಕರು ಪ್ರಶ್ನಿಸಿದರು.

ಜೀಪು ಬಳಕೆ
ಕೊರಗ ಸಮುದಾಯಕ್ಕೆ ನೀಡಿದ ಜೀಪನ್ನು ತಾಲೂಕು ವೈದ್ಯಾಧಿಕಾರಿ ಬಳಸುತ್ತಾರೆ ಎಂದು ಜಿ.ಪಂ. ಸದಸ್ಯೆ ಗೌರಿ ದೇವಾಡಿಗ ಅವರು ಆಕ್ಷೇಪಿಸಿದಾಗ 18 ವರ್ಷ ಹಳೆಯ ಜೀಪು ನೀಡಲಾಗಿದ್ದು ಕೆಟ್ಟುಹೋಗಿದೆ. ಅನಿವಾರ್ಯ ಕಾರಣದಿಂದ ಜೀಪು ಬಳಸಿದ್ದೇನೆ. ಹೊಸ ಜೀಪು ಕೊಡಿಸಿ ಎಂದು ತಾಲೂಕು ವೈದ್ಯಾಧಿಕಾರಿ ಡಾ| ನಾಗಭೂಷಣ್‌ ಉಡುಪ ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.