ಸಂಗಮದಲ್ಲಿ ಅಂಬರೀಶ್ ಅಸ್ಥಿ ವಿಸರ್ಜನೆ
Team Udayavani, Nov 29, 2018, 6:20 AM IST
ಶ್ರೀರಂಗಪಟ್ಟಣ: ಇಹಲೋಕ ತ್ಯಜಿಸಿದ ಅಂಬರೀಶ್ ಅವರ ಅಸ್ಥಿ ವಿಸರ್ಜನೆಯನ್ನು ಸಾಂಪ್ರದಾಯಿಕ ವಿಧಿ-ವಿಧಾನಗಳೊಂದಿಗೆ ಬುಧವಾರ ಇಲ್ಲಿಗೆ ಸಮೀಪದ ಸಂಗಮ ಕ್ಷೇತ್ರದಲ್ಲಿ ನೆರವೇರಿಸಲಾಯಿತು.
ಕಾವೇರಿ, ಲೋಕಪಾವನಿ ಹಾಗೂ ಪಶ್ಚಿಮವಾಹಿನಿ ನದಿಗಳು ಸಂಗಮಿಸುವ ಕ್ಷೇತ್ರ ಸಂಗಮಕ್ಕೆ ಮಧ್ಯಾಹ್ನ 2 ಗಂಟೆ ವೇಳೆಗೆ
ಬೆಂಗಳೂರಿನಿಂದ ಅಸ್ಥಿಯೊಂದಿಗೆ ಸುಮಲತಾ ಹಾಗೂ ಅಭಿಷೇಕ್ ಆಗಮಿಸಿದರು. ವೇದವಿದ್ವಾನ್ ಭಾನುಪ್ರಕಾಶ್ ಶರ್ಮಾ ಶಿಷ್ಯ ಲಕ್ಷ್ಮೀಶ ಹಾಗೂ ಬೆಂಗಳೂರಿನಿಂದ ಆಗಮಿಸಿದ್ದ ಪುರೋಹಿತರ ತಂಡದ ನೇತೃತ್ವದಲ್ಲಿ ವಿಧಿ-ವಿಧಾನ ನೆರವೇರಿಸಲಾಯಿತು.
ಸಂಗಮದ ಸ್ನಾನಘಟ್ಟದ ಮೇಲೆ ಮಡಿಯುಟ್ಟು ಕುಳಿತ ಸುಮಲತಾ ಹಾಗೂ ಅಭಿಷೇಕ್ ನಾಲ್ಕು ಕುಡಿಕೆಗಳಲ್ಲಿ ತುಂಬಿದ್ದ
ಅಸ್ಥಿಗೆ ಹಾಲು, ಮೊಸರು, ಗಂಧ, ತುಪ್ಪ, ಸಕ್ಕರೆ ಪಂಚಗವ್ಯಗಳಿಂದ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ನದಿಗೆ ಇಳಿದು ನಾಲ್ಕೂ ಕುಡಿಕೆಗಳಲ್ಲಿದ್ದ ಅಸ್ಥಿಯನ್ನು ನದಿ ತಟದಲ್ಲಿ ಹಿಮ್ಮುಖವಾಗಿ ನಿಂತು ಅಭಿಷೇಕ್ ವಿಸರ್ಜನೆ ಮಾಡಿದರು. ಸಚಿವ ಪುಟ್ಟರಾಜು ಹಾಗೂ ನಿರ್ಮಾಪಕ ಮುನಿರತ್ನ ಹರಿಗೋಲಿನಲ್ಲಿ ಸ್ವಲ್ಪಮುಂದೆ ಹೋಗಿ ನದಿಯಲ್ಲಿ ಅಸ್ಥಿ ಸಮರ್ಪಕವಾಗಿ ವಿಸರ್ಜನೆಯಾಗಲು ಸಹಕರಿಸಿದರು. ಸಂಗಮದಲ್ಲಿ ಅಸ್ಥಿ ವಿಸರ್ಜನೆ ಮಾಡಿದ ಬಳಿಕ ಕುಟುಂಬದವರು ಅಂತಿಮ ಗೌರವ ಸಲ್ಲಿಸಿದರು.
ನಟರಾದ ದರ್ಶನ್, ದೊಡ್ಡಣ್ಣ, ರಾಕ್ಲೈನ್ ವೆಂಕಟೇಶ್, ನಿರ್ಮಾಪಕರಾದ ಸಂದೇಶ್ ನಾಗರಾಜು, ಅಂಬರೀಶ್ ಅಣ್ಣ ಆನಂದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸ್ಥಳ ಬದಲಾವಣೆ: ಮೊದಲು ಅಂಬರೀಶ್ ಅವರ ಅಸ್ಥಿ ವಿಸರ್ಜನೆ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ನಿಗದಿ ಪಡಿಸಲಾಗಿತ್ತು. ಈ ವಿಷಯ ತಿಳಿದು ಅಸಂಖ್ಯಾತ ಅಭಿಮಾನಿಗಳ ದಂಡು ಪಶ್ಚಿಮವಾಹಿನಿ ಬಳಿ ಜಮಾಯಿಸಿತ್ತು. ಜನರನ್ನು ನಿಯಂತ್ರಣ ಮಾಡುವುದು ಕಷ್ಟವಾಗಲಿದೆ ಎಂಬುದನ್ನು ಅರಿತ ಪೊಲೀಸ್ ಅಧಿಕಾರಿಗಳು ಅಸ್ಥಿ ವಿಸರ್ಜನೆಯನ್ನು ಸಂಗಮಕ್ಕೆ ಸ್ಥಳಾಂತರಿಸಿದರು. ಸಂಗಮದಲ್ಲಿ ಅಸ್ಥಿ ವಿಸರ್ಜನೆ ಮಾಡುವ ಸ್ಥಳ ಅಶುಚಿತ್ವದಿಂದ ಕೂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಹಾಗೂ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಪುರಸಭೆ ಸಿಬ್ಬಂದಿಯಿಂದ ಅದನ್ನು ಸ್ವತ್ಛಗೊಳಿಸಿ, ಶಾಮಿಯಾನದ ವ್ಯವಸ್ಥೆ ಮಾಡಿಸಿದರು. ಅಭಿಮಾನಿಗಳನ್ನು ನಿಯಂತ್ರಿಸಲು ಬ್ಯಾರಿಕೇಡ್ಗಳನ್ನು ಅಳವಡಿಸಲಾಯಿತು. ಅಸ್ಥಿಗೆ ಪೂಜೆ ಸಲ್ಲಿಸುವ ಸ್ಥಳಕ್ಕೆ ಗಣ್ಯರು, ಅಧಿಕಾರಿಗಳನ್ನು ಹೊರತುಪಡಿಸಿ ಉಳಿದವರನ್ನು ನಿರ್ಬಂಧಿಸಲಾಯಿತು. ಅಂಬರೀಶ್ ಜೊತೆ ರಾಜಕೀಯ ವೈಮನಸ್ಸನ್ನು ಹೊಂದಿದ್ದ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಅಸ್ಥಿ ವಿಸರ್ಜನೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು ಸಾರ್ವಜನಿಕ ಚರ್ಚೆಗೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ