ಇಂದಿನಿಂದ ಬೆಂಗಳೂರು ಟೆಕ್‌ ಸಮ್ಮಿಟ್‌


Team Udayavani, Nov 29, 2018, 10:51 AM IST

2.jpg

ಬೆಂಗಳೂರು: “ಇನ್ನೋವೇಷನ್‌ ಆಂಡ್‌ ಇಂಪ್ಯಾಕ್ಟ್’ ಘೋಷ ವಾಕ್ಯದಡಿ ನಗರದ ಅರಮನೆ ಮೈದಾನದಲ್ಲಿ ಗುರುವಾರದಿಂದ ಮೂರು ದಿನಗಳ “ಟೆಕ್‌ ಸಮಿಟ್‌’ ನಡೆಯಲಿದೆ.

ಅಂತಾರಾಷ್ಟ್ರೀಯ ಶೃಂಗಸಭೆ ಇದಾಗಿದ್ದು, 68 ದೇಶಗಳ 4,157 ತಂಡಗಳು ಈ ಸಭೆಯಲ್ಲಿ ಭಾಗವಹಿಸಲಿವೆ. ಫಿನ್‌ ಲ್ಯಾಂಡ್‌, ಫ್ರಾನ್ಸ್‌, ಜರ್ಮನಿ, ನೆದರ್‌ಲ್ಯಾಂಡ್ಸ್‌, ಎಸ್ಟೋನಿಯ, ಜಪಾನ್‌, ಆಸ್ಟ್ರೇಲಿಯ ಮತ್ತು ಚೆಕ್‌ ರಿಪಬ್ಲಿಕ್‌ ಮುಂತಾದ ರಾಷ್ಟ್ರಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು ಸ್ಟಾರ್ಟ್‌ಅಪ್‌ ಝೋನ್‌ನಲ್ಲಿ 200ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗ್ಳು ಮತ್ತು 3 ಸಾವಿರ ನಿಯೋಜಿತ
ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ ಮಾಹಿತಿ ನೀಡಿದರು.

ಭಾರತದಿಂದ ಮತ್ತು ಜಾಗತಿಕ ಮಟ್ಟದಿಂದ ತಂತ್ರಜ್ಞಾನದ ಹೆಸರಾಂತ ತಜ್ಞರುಗಳು, ಭವಿಷ್ಯ ರೂಪಿಸುವ ದಾರ್ಶನಿಕರು,
ನೀತಿ ನಿರೂಪಕರು , ಸಂಶೋಧನಾ ಮುಖ್ಯಸ್ಥರುಗಳು ಹಾಗೂ ವಿಶ್ವದೆಲ್ಲೆಡೆಯಿಂದ ಉದ್ಯಮಗಳ ಇತರ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯದಲ್ಲಿ ವಾಣಿಜ್ಯೋದ್ಯಮದ ವೇಗ ವೃದ್ಧಿಸಲು ತಂತ್ರಜಾnನವನ್ನು ಬಳಸಿಕೊಳ್ಳುವ ಹಾಗೂ ವರ್ತಕ-ವರ್ತಕರುಗಳ ನಡುವೆ ಭೇಟಿ ನೀಡಲು ಅನುವು ಮಾಡಿಕೊಡುವ ಗುರಿಯನ್ನು ಈ ಸಮಾವೇಶ ಹೊಂದಿದೆ. ಪ್ರಸಕ್ತ ವರ್ಷದ ಬೆಂಗಳೂರು ಟೆಕ್‌ ಸಮ್ಮಿಟ್‌ ಹಿಂದಿನ ಸಮ್ಮೇಳನಗಳಿಗೆ ಹೋಲಿಸಿದರೆ ಬೃಹತ್‌ ಗಾತ್ರದ್ದಾಗಿರುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಡ್ರೋಣ್‌ ರೇಸ್‌ ಆಕರ್ಷಣೆ: ಈ ಬಾರಿಯ ಟೆಕ್‌ ಸಮಿಟ್‌ನಲ್ಲಿ ಡ್ರೋಣ್‌ ರೇಸ್‌ ಪ್ರಮುಖ ಆಕರ್ಷಣೆಯಾಗಿದ್ದು, ಕಾರು ರೇಸ್‌, ಬೈಕ್‌ ರೇಸ್‌ ನಂತೆಯೇ ಈಗ ಬೆಂಗಳೂರಿನಲ್ಲಿ ಡ್ರೋಣ್‌ಗಳ ರೇಸ್‌ ನಡೆಯಲಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಡ್ರೋಣ್‌ ರೇಸ್‌ ನಡೆಯುತ್ತಿದ್ದು, ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಡ್ರೋಣ್‌ ತಯಾರಿಕಾ ಕಂಪೆನಿಗಳು ಇದರಲ್ಲಿ ಭಾಗವಹಿಸಲಿವೆ.

ಮೊದಲ ದಿನ ಪ್ರಾಯೋಗಿಕವಾಗಿ ಡ್ರೋಣ್‌ಗಳು ಹಾರಾಟ ನಡೆಸಲಿದ್ದು, ಇದರಲ್ಲಿ ನಾಲ್ಕು ಡ್ರೋಣ್‌ಗಳು ಸೆಮಿಫೈನಲ್‌ಗೆ ಪ್ರವೇಶ ಪಡೆಯುತ್ತವೆ. 30ರಂದು ಅಂತಿಮ ಸುತ್ತಿನ ರೇಸ್‌ ಇರುತ್ತದೆ. ಯುವಕರನ್ನು ಆಕರ್ಷಿಸುವ ಉದ್ದೇಶದಿಂದ ಇದನ್ನು ಹಮ್ಮಿಕೊಳ್ಳಲಾಗಿದೆ.

ರೇಸ್‌ನಲ್ಲಿ ಭಾಗವಹಿಸುವ ನ್ಯಾನೋ ಡ್ರೋಣ್‌ಗಳು 250 ಗ್ರಾಂಕ್ಕಿಂತ ಕಡಿಮೆ ತೂಕ ಇರಲಿವೆ. ಗಂಟೆಗೆ 120 ಕಿ.ಮೀ. ವೇಗದಲ್ಲಿ ಹಾರಾಟ ನಡೆಸಬಲ್ಲವು. ಪ್ರತಿ ಡ್ರೋಣ್‌ಗೆ 2ರಿಂದ 3 ನಿಮಿಷ ಕಾಲಾವಕಾಶ ನೀಡಲಾಗಿರುತ್ತದೆ. ಅಷ್ಟರಲ್ಲಿ ಅವುಗಳು ತಮ್ಮ  ಮರ್ಥ್ಯ
ಪ್ರದರ್ಶಿಸಲಿವೆ. ಸಾಮಾನ್ಯವಾಗಿ ಒಳಾಂಗಣದಲ್ಲಿ ಡ್ರೋಣ್‌ ರೇಸ್‌ ನಡೆಯತ್ತದೆ. ಹೊರಾಂಗಣದಲ್ಲಿ ಈ ರೀತಿ ನಡೆಯುತ್ತಿರುವುದು ಇದೇ ಮೊದಲು. ಹಾಗಾಗಿ, ತುಂಬಾ ಅದ್ಭುತ ಅನುಭವ ನೀಡಲಿದೆ. 

ಸ್ವಿಡ್ಜರ್‌ಲ್ಯಾಂಡ್‌ನ‌ ನಾಲ್ಕು ಕಂಪನಿಗಳು, ಇಸ್ರೇಲ್‌ ಮತ್ತು ಭಾರತದ ತಲಾ ಒಂದು ಕಂಪೆನಿಗಳು ಇದರಲ್ಲಿ ಭಾಗವಹಿಸಲಿವೆ. ಡ್ರೋಣ್‌ ತಯಾರಿಕೆಯಲ್ಲಿ ಜರ್ಮನಿ, ಫ್ರಾನ್ಸ್‌, ಅಮೆರಿಕ, ಚೀನಾ ಮತ್ತಿತರ ದೇಶಗಳು ಕೂಡ ಮುಂಚೂಣಿಯಲ್ಲಿವೆ. ವಿಜೇತರಿಗೆ ಬಹುಮಾನ ಕೂಡ ಇರಲಿದೆ. ಡ್ರೋಣ್‌ಗಳಲ್ಲಿ ಹತ್ತಾರು ಪ್ರಕಾರಗಳಿದ್ದು, ಅವುಗಳ ತೂಕ 250 ಗ್ರಾಂ.ಗಿಂತ ಕಡಿಮೆ ಹಾಗೂ 150 ಕೆಜಿಗಿಂತ ಅಧಿಕವೂ ಆಗಿರುತ್ತವೆ. ವಿವಿಧ ಉದ್ದೇಶಗಳಿಗೆ ಇವುಗಳನ್ನು ಬಳಸಲಾಗುತ್ತ¨ 

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.