ಡಿ.11ರವರೆಗೆ ಅರ್ಜುನ್ ಸರ್ಜಾ ಬಂಧನವಿಲ್ಲ
Team Udayavani, Nov 29, 2018, 11:38 AM IST
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಟಿ ಶೃತಿ ಹರಿಹರನ್ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರನ್ನು ಡಿಸೆಂಬರ್ 11ರವರೆಗೆ ಬಂಧಿಸದಂತೆ ಹೈಕೋರ್ಟ್ ಬುಧವಾರ ಹೇಳಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ತಮ್ಮ ಶೃತಿ ಹರಿಹರನ್ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜುನ್ ಸರ್ಜಾ ಸಲ್ಲಿಸಿರುವ ಅರ್ಜಿ ವಿಚಾರಣೆ
ನಡೆಸಿದ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದಲ್ಲಿ ಅರ್ಜುನ್ ಸರ್ಜಾ ಅವರನ್ನು ಬಂಧಿಸದಂತೆ ನ.2ರಂದು ನೀಡಿದ್ದ ಮಧ್ಯಂತರ ಆದೇಶವನ್ನು ಡಿ.11ರವರೆಗೆ ವಿಸ್ತರಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ, ಅರ್ಜಿ ಸಂಬಂಧ ವಾದ ಮಂಡಿಸಲು ಶೃತಿ ಪರ ವಕೀಲರು ಕಾಲಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಡಿ.11ಕ್ಕೆ ಮುಂದೂಡಿತು.
ಪ್ರಕರಣವೇನು?: ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್, ಈ ಸಂಬಂಧ ಅ.27ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಶೃತಿ ಹರಿಹರನ್ ತಮ್ಮ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಆರೋಪಗಳನ್ನು ಸಾಬೀತುಪಡಿಸಲು ಸೂಕ್ತ ಸಾಕ್ಷಾಧಾರಗಳೂ ಇಲ್ಲ. ದುರುದ್ದೇಶದಿಂದ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹೀಗಾಗಿ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕೆಂದು ಕೋರಿ ಅರ್ಜುನ್ ಸರ್ಜಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ