ಹಿಂಡಿಯಲ್ಲಿ ಕಲ್ಲು ಬೆರಸಿ ಮಾರಾಟ


Team Udayavani, Nov 29, 2018, 2:45 PM IST

kol-1.jpg

ಬಂಗಾರಪೇಟೆ: ಬರಗಾಲದಲ್ಲಿ ಕೈ ಹಿಡಿಯುವ ಹೈನೋದ್ಯಮ ಜಿಲ್ಲೆಯ ಜೀವಾಳವಾಗಿದೆ. ಹೀಗಾಗಿ ಜಾನುವಾರುಗಳ ಮೇವಿನ ಜತೆ ಹಿಂಡಿ, ಬೂಸ ಬಳಸುವುದು ಸಾಮಾನ್ಯ. ಅದರೆ ತೂಕ ಹೆಚ್ಚು ಬರಲೆಂದು ಹಿಂಡಿಯಲ್ಲಿ ಕಲ್ಲುಗಳನ್ನು ಮಿಶ್ರಣ ಮಾಡಿ ರೈತರಿಗೆ ಮಾರುತ್ತಿರುವ ಕೃತ್ಯ ಬೆಳಕಿಗೆ ಬಂದಿದೆ ಬಂಗಾರಪೇಟೆ ಪಟ್ಟಣದಲ್ಲಿ 20ಕ್ಕೂ ಹೆಚ್ಚು ಹಿಂಡಿ ಹಾಗೂ ಬೂಸಾ ಮಾರಾಟ ಮಾಡುವ ಅಂಗಡಿಗಳಿದ್ದು, ಈ ಅಂಗಡಿಗಳು ಪಶುಪಾಲನೆ ಇಲಾಖೆಯಿಂದ ಯಾವುದೇ ಲೈಸನ್ಸ್‌ ಪಡೆಯದೇ ಅಕ್ರಮವಾಗಿ ಕೃಷಿ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಸರ್ಕಾರದ ಹಾಗೂ ಇಲಾಖೆಯ ಕಣ್ಣುತಪ್ಪಿಸಿ ಕೆಲವರು ಹಿಂಡಿ ಉತ್ಪಾದನಾ ಘಟಕಗಳಳನ್ನು ತಯಾರಿಸಿಕೊಂಡು ಯಾವುದೇ ಹೆಸರಿಲ್ಲದೆ ತಯಾರಿಸಿ ಅಕ್ರಮವಾಗಿ ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ.

ಜಾನುವಾರುಗಳಿಗೆ ಉಪಯೋಗಿಸುವ ಹಿಂಡಿಯ ಬೆಲೆ ಪ್ರತಿ ಕೆ.ಜಿ.ಗೆ 30 ರಿಂದ 35 ರೂಗಳಿದ್ದು, ಪ್ರತಿ ಮೂಟೆಯಲ್ಲಿ 30 ಕೆ.ಜಿ.ಗಳಿದ್ದರೂ 35 ಕೆಜಿಗಳೆಂದು ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಹಿಂಡಿ ಪ್ರತಿ ಕೆ.ಜಿ.ಗೆ 50 ರಿಂದ 150 ಗ್ರಾಪಂ ಸಣ್ಣ ಗಾತ್ರದ ಕಲ್ಲುಗಳು ಮಿಶ್ರಣ ಮಾಡಿರುವುದರಿಂದ ರೈತರು ಹಿಂಡಿಯನ್ನು ಜಾನುವಾರುಗಳಿಗೆ ನೇರವಾಗಿ ನೀಡುವುದರಿಂದ ಹೊಟ್ಟೆನೋವಿನಿಂದ ನರಳುತ್ತಿರುವುದು ಕಂಡು ಬಂದಿದೆ. ಪ್ರತಿ ತಿಂಗಳ 10 ಇಂದ 12 ಹಸುಗಳು ಸಾಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಪಶು ಮತ್ತು ಕುಕ್ಕುಟ ಆಹಾರ ಮತ್ತು ಖನಿಜ ಮಿಶ್ರಣಗಳನ್ನು ನಿಯಂತ್ರಣ ಮಾಡಲು ಸರ್ಕಾರಗಳು ಈಗಾಗಲೇ ಗ್ರಾಹಕ ರಕ್ಷಣಾ ಕಾಯ್ದೆ-1986 ಮತ್ತು ಭಾರತೀಯ ಮಾನಕ ಸಂಸ್ಥೆ ಕಾಯ್ದೆ-1986 ಎಂಬ ಎರಡು ಕಾಯ್ದೆಗಳನ್ನು ಜಾರಿಗೆ ತಂದು ಸೂಕ್ತ ಕ್ರಮಕೈಗೊಳ್ಳಲು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ವಹಿಸಿದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮಕ್ಕೆ ಮುಂದಾಗದೇ ಕಣ್ಮುಚ್ಚಿ ಕುಳಿತಿದ್ದಾರೆ.

ಕಾನೂನು ಕ್ರಮ ಅಗತ್ಯ

ಬಂಗಾರಪೇಟೆ ತಾಲೂಕಿನಲ್ಲಿ 130ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಂಘಗಳಿದ್ದು, ಈ ಸಂಘಗಳ ಮೂಲಕ ಕೋಚಿಮುಲ್‌ಗೆ ಪ್ರತಿ ದಿನ 75 ಸಾವಿರ ಲೀಟರ್‌ಗಳಿಗೂ ಹೆಚ್ಚಾಗಿ ಹಾಲು ಉತ್ಪಾದನೆಯಗುತ್ತಿದೆ. 8 ರಿಂದ 9 ಸಾವಿರ ಸೀಮೆ ಹಸುಗಳಿದ್ದು, ಈ ಹಸುಗಳಿಗೆ ಮುಖ್ಯ ಆಹಾರವಾಗಿ ಹಿಂಡಿಯನ್ನು ನೀಡಲಾಗುತ್ತಿದೆ. ಈ ಹಿಂಡಿಯಲ್ಲಿ ಅಕ್ರಮವಾಗಿ ಕಲ್ಲುಗಳನ್ನು ಬೆರಸಿ ರೈತರಿಗೆ ಅನ್ಯಾಯ ಮಾಡುತ್ತಿರುವ ಅಂಶ ಕಂಡು ಬಂದಿದೆ. ಸಂಬಂಧಪಟ್ಟ ಇಲಾಖೆಗಳು ಈ ಅಕ್ರಮವನ್ನು ತಡೆಗಟ್ಟಲು ಮುಂದಾಗಬೇಕಿದೆ. ಲೈಸನ್ಸ್‌ ಇಲ್ಲದೇ ಕೃಷಿ, ಹೈನು ದಾಸ್ತಾನು ಮಾರಾಟ ಮಾಡುತ್ತಿರುವವರ ವಿರುದ್ಧ ಹಾಗೂ ಅನಧಿಕೃತವಾಗಿ ತಯಾರಿಕೆ ಮಾಡುವ ಘಟಕಗಳ ಮೇಲೆ ದಾಳಿ ಮಾಡಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ರೈತ ಸೇನೆಯ ತಾಲೂಕು ಅಧ್ಯಕ್ಷ ತೊರಗನದೊಡ್ಡಿ ಮಂಜುನಾಥ್‌ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಜಾನುವಾರುಗಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಳಪೆಯಾಗಿದ್ದಲ್ಲಿ ಇಲಾಖೆಯಿಂದ ಪರೀಕ್ಷಿಸಲಾಗುವುದು. ಕಲಬೆರಿಕೆ ಪಶು ಆಹಾರಗಳನ್ನು ಪೂರೈಕೆ ಮಾಡಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸಲಾಗುವುದು .ಜಾನುವಾರುಗಳಿಗೆ ಆಹಾರ ಪದಾರ್ಥಗಳನ್ನು ಪೂರ್ಯಕೆ ಮಾಡಲು ಇಲಾಖೆಯಿಂದ ಲೈಸನ್ಸ್‌ ಪಡೆಯುವುದು ಕಡ್ಡಾಯ. ಬಂಗಾರಪೇಟೆಯಲ್ಲಿ ಕಲ್ಲುಗಳನ್ನು ಬೆರಸಿ ಕಲಬೆರಕೆ ಮಾಡಿದ ಪಶು ಆಹಾರ ಮಾರಾಟ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು. 
   ಡಾ.ಟಿ.ಶಿವರಾಮ್‌ ಭಟ್‌, ಪಶು ಇಲಾಖಾ ನಿರ್ದೇಶಕರು

ಟಾಪ್ ನ್ಯೂಸ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.