ತೀರ್ಪು ನೀಡಲಾಗದ ಪ್ರೇಮಕಥೆ …


Team Udayavani, Nov 30, 2018, 6:00 AM IST

33.jpg

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ತುಳು ಭಾಷೆಯಲ್ಲಿ ತಯಾರಾಗಿರುವ “ಬೆಸ್ಟ್‌ ಫ್ರೆಂಡ್ಸ್‌’ ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿ ಹೊರಬಂದಿವೆ. ಸುಮಾರು 158 ವರ್ಷಗಳ ಸುದೀರ್ಘ‌ ಕಾನೂನು ಹೋರಾಟದ ನಂತರ ತೃತಿಯ ಜಾತಿಯ ಜನರ ಪರವಾಗಿ ಹಾಗೂ ಐಪಿಸಿ ಕಾಲಂ 377 ಅನ್ವಯ ಸಲಿಂಗ ಪ್ರೀತಿ ಅಪರಾಧವಲ್ಲ ಎಂಬ ಸವೊìಚ್ಚ ನ್ಯಾಯಲಯದ ಪಂಚಪೀಠದ ತೀರ್ಪು ಇತ್ತೀಚೆಗೆ ಹೊರಬಂದು ದೇಶದಾದ್ಯಂತ ಸಾಕಷ್ಟು ಚರ್ಚೆಗೆ ಗುರಿಯಾಗಿತ್ತು. ಇದೇ ವೇಳೆ ನಿರ್ಲಕ್ಷಿತ ತೃತಿಯ ಲಿಂಗಿಗಳು ಮತ್ತು ಸಲಿಂಗಿಗಳ ಸಮುದಾಯದ ಜನರ ಭಾವನೆಗಳನ್ನು ಈ ಚಿತ್ರದಲ್ಲಿ ತೆರೆಮೇಲೆ ತೆರೆದಿಡಲಾಗುತ್ತಿದೆ ಎನ್ನುತ್ತದೆ ಚಿತ್ರತಂಡ. ಅಂದಹಾಗೆ, “ಬೆಸ್ಟ್‌ ಫ್ರೆಂಡ್ಸ್‌’ ಚಿತ್ರಕ್ಕೆ ಟೇಶಿ ವೆಂಕಟೇಶ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಲಯನ್‌ ಎಸ್‌. ವೆಂಕಟೇಶ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. 

“2012ರಲ್ಲಿ ಹಾಸನದಲ್ಲಿ ಇಬ್ಬರು ಸಲಿಂಗಿ ಹೆಣ್ಣು ಮಕ್ಕಳ ಬದುಕಿನಲ್ಲಿ ನಡೆದಿರುವ ಸತ್ಯ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ಈ ಚಿತ್ರಕ್ಕಾಗಿ ಸಾಕಷ್ಟು ವೈಜ್ಞಾನಿಕವಾಗಿ ಅಧ್ಯಯನ, ಪ್ರವಾಸ, ಸಂದರ್ಶನ ಮತ್ತು ಚಿತ್ರೀಕರಣಕ್ಕಾಗಿ ಮಾಡಿ ಸುಮಾರು ಆರು ವರ್ಷಗಳ ಸಮಯವನ್ನು ತೆಗೆದುಕೊಳ್ಳಲಾಗಿದೆ. ಚಿತ್ರದ ಮುಖ್ಯ ಕಥಾಹಂದರದಲ್ಲಿ ನೈಜ ಘಟನೆಯನ್ನಿಟ್ಟುಕೊಂಡು, ಉಳಿದಂತೆ ಒಂದಷ್ಟು ಕಾಲ್ಪನಿಕ ಸಂಗತಿಗಳನ್ನು  ಇಟ್ಟುಕೊಂಡು ಚಿತ್ರವನ್ನು ತೆರೆಮೇಲೆ ತರಲಾಗಿದೆ’ ಎನ್ನುತ್ತದೆ ಚಿತ್ರತಂಡ. 

“ತಂದೆ-ತಾಯಿಯಿಂದ ಜನ್ಮ ಪಡೆದಿರುವ ತೃತೀಯ ಸಮುದಾಯದವರನ್ನು ಪ್ರೀತಿಸಿ ಗೌರವಿಸವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಈ ಎಲ್ಲಾ ವಿಚಾರಗಳನ್ನು ಅಳವಡಿಸಿಕೊಂಡಿರುವ ವಿಶಿಷ್ಟ ಹಾಗೂ ವಿಭಿನ್ನ ಸಂದೇಶವನ್ನು ಸಾರುವುದೇ ಚಿತ್ರದ ಹೂರಣವಾಗಿದೆ. ಅಡಿಬರಹದಲ್ಲಿ “ಇದು ತೀರ್ಪು ನೀಡಲಾಗದ ಪ್ರೇಮಕಥೆ’ ಎಂದು ಹೇಳಿದ್ದೇವೆ. ಅಂತಿಮವಾಗಿ ಜನರೇ ಯಾವುದು ಸರಿ, ಯಾವುದು ತಪ್ಪು ಎಂದು ಇದನ್ನು ನಿರ್ಣಯಿಸಲಿ’ ಎನ್ನುವುದು ಚಿತ್ರತಂಡದ ಮಾತು.

ಇನ್ನು ಚಿತ್ರದಲ್ಲಿ “ಬೆಸ್ಟ್‌ ಫ್ರೆಂಡ್ಸ್‌’ ಆಗಿ ಮೇಘನಾ ಮತ್ತು ದ್ರವ್ಯಾ ಶೆಟ್ಟಿ ಅಭಿನಯಿಸಿದ್ದಾರೆ. ಉಳಿದಂತೆ ಆಶಾ, ಸುಮತಿ ಪಾಟೀಲ್‌ ಮೊದಲಾದ ಕಲಾವಿದರ ತಾರಾಗಣ ಚಿತ್ರದಲ್ಲಿದೆ. ಚಿತ್ರದ ಹಾಡುಗಳಿಗೆ ಆರವ್‌ ರಿಶಿಕ್‌  ಸಂಗೀತ ಸಂಯೋಜನೆಯಿದ್ದು, ಸುರೇಶ್‌ ಗುಟ್ಟಹಳ್ಳಿ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ರವಿ ಸುವರ್ಣ ಮತ್ತು ಧನುಷ್‌ ಜಯನ್‌ ಚಿತ್ರದ ದೃಶ್ಯಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ಕೆ.ಆರ್‌.ಲಿಂಗರಾಜು ಸಂಕಲನ ಚಿತ್ರದಲ್ಲಿದೆ.  ಅಂಬ್ರೆಲಾ ಆಡಿಯೋಸ್‌ ಸಂಸ್ಥೆಯ ಮೂಲಕ “ಬೆಸ್ಟ್‌ ಫ್ರೆಂಡ್ಸ್‌’ ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌ ಮತ್ತಿತರ ರಾಜಕೀಯ, ಚಿತ್ರೋದ್ಯಮದ ಗಣ್ಯರ ಸಮ್ಮುಖದಲ್ಲಿ ಹಾಡುಗಳು ಲೋಕಾರ್ಪಣೆಗೊಂಡವು. 

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.