ರೈತನ ಮನೆಗೆ ಸರ್ಕಾರ
Team Udayavani, Nov 30, 2018, 6:00 AM IST
ಬೆಂಗಳೂರು: ಈ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮವಾಸ್ತವ್ಯ ಮಾಡಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಈಗ ರೈತರ ಸಮಸ್ಯೆ ಬಗೆಹರಿಸಲು ಪ್ರತಿ ತಿಂಗಳಿಗೊಮ್ಮೆ ಸಂಪುಟ ಸಚಿವರ ಜತೆಗೂಡಿ ಗ್ರಾಮ ಭೇಟಿಗೆ ನಿರ್ಧರಿಸಿದ್ದಾರೆ.
ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರೈತರ ಮೊದಲ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. “ರೈತನ ಮನೆಯಲ್ಲಿ ರಾಜ್ಯ ಸರ್ಕಾರ’ ಎಂಬ ಘೋಷಣೆಯಡಿ ಗ್ರಾಮ ಭೇಟಿಗೆ ತೀರ್ಮಾನಿಸಲಾಗಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “”ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶೂನ್ಯ ಬಂಡವಾಳ ಕೃಷಿ ಹಾಗೂ ನೈಸರ್ಗಿಕ ಕೃಷಿ ಯೋಜನೆಗಳನ್ನು ಯಶಸ್ವಿಗೊಳಿಸಲು ರೈತರಿಗೆ ತಿಳವಳಿಕೆ ನೀಡುವುದು ಹಾಗೂ ರೈತರ ಹೊಲದಲ್ಲಿಯೇ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಲು ಸರ್ಕಾರ ಈ ಯೋಜನೆ ಹಮ್ಮಿಕೊಂಡಿದೆ” ಎಂದು ಹೇಳಿದರು.
“”ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರತಿ ತಿಂಗಳು ಒಂದು ಗ್ರಾಮಕ್ಕೆ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಕೃಷಿ, ಪಶು ಸಂಗೋಪನೆ, ತೋಟಗಾರಿಕೆ, ರೇಷ್ಮೆ, ಸಹಕಾರ ಸಚಿವರು ಹಾಜರಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ರೈತರಿಗೆ ಶಕ್ತಿ ತುಂಬುವ ಪ್ರಯತ್ನ ಮಾಡಲಾಗುವುದು. ರೈತರು ಅಳವಡಿಸಿಕೊಂಡಿರುವ ಕೃಷಿ ಪದ್ಧತಿಯನ್ನು ಬದಲಾಯಿಸಿ, ಹೆಚ್ಚು ಲಾಭದಾಯಕವಾಗಿ ಮಾಡಲು ಹೊಸ ಕೃಷಿ ನೀತಿ ಜಾರಿಗೆ ತರಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.
ಸಭೆಯಲ್ಲಿ 60 ಜನ ಪ್ರಗತಿಪರ ರೈತರು ಸರ್ಕಾರಕ್ಕೆ ಅನೇಕ ಸಲಹೆಗಳನ್ನು ನೀಡಿದ್ದಾರೆ. ಕೃಷಿ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಕೃಷಿ ವಿಜ್ಞಾನಿಗಳೂ ಹಾಜರಿದ್ದು, ಎಲ್ಲರ ಸಲಹೆ ಟಿಪ್ಪಣಿ ಮಾಡಿಕೊಂಡರು.
“”ರಾಜ್ಯ ಸರ್ಕಾರ ರೈತರಿಗೆ ತಾತ್ಕಾಲಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬದಲು ಶಾಶ್ವತ ಪರಿಹಾರ ದೊರೆಯುವಂತೆ ನೋಡಿಕೊಳ್ಳಬೇಕು. ರೈತರಿಗೆ ಪ್ರಮುಖವಾಗಿ ಕೃಷಿಯ ಜೊತೆಗೆ ಉಪ ಕಸುಬು ಮಾಡಲು ಸರ್ಕಾರದಿಂದ ಸಹಾಯಧನ ನೀಡಬೇಕು ಎಂಬ ಸಲಹೆ ಸಭೆಯಲ್ಲಿ ವ್ಯಕ್ತವಾಗಿದೆ. ಉತ್ತಮ ಬಿತ್ತನೆ ಬೀಜ, ಮಾರುಕಟ್ಟೆ ವ್ಯವಸ್ಥೆ, ಬೆಳೆ ದಾಸ್ತಾನು ಮಾಡಲು ಗೋದಾಮು ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದ್ದಾರೆ. ರೈತರಿಗೆ ನೀರು ಮತ್ತು ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ಅದನ್ನು ಪರಿಹರಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆಯೂ ಸರ್ಕಾರ ಹೆಚ್ಚಿನ ಗಮನ ಹರಿಸಲಿದೆ” ಎಂದು ಕುಮಾರಸ್ವಾಮಿ ಹೇಳಿದರು.
“”ಪ್ರಮುಖವಾಗಿ ಹೊರ ದೇಶಗಳಿಗೆ ರಪು¤ ಮಾಡುವ ಗುಣಮಟ್ಟದ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಸಲಹೆ ಕೇಳಿಬಂದಿದೆ. ಸರ್ಕಾರ ರೈತ ಪ್ರತಿನಿಧಿಗಳ ಸಮಸ್ಯೆಗಳು ಹಾಗೂ ಸಲಹೆಗಳನ್ನು ಮುಕ್ತವಾಗಿ ಸ್ವೀಕರಿಸಿದ್ದು, ಪ್ರತಿ ತಿಂಗಳು ಸಲಹಾ ಸಮಿತಿ ಸಭೆ ನಡೆಸಿ, ಪ್ರತಿಯೊಂದು ಸಭೆಯ ಪ್ರಗತಿ ಕುರಿತು ಚರ್ಚೆ ಮಾಡಲಾಗುವುದು. ರೈತರ ಹೊಲಗಳಲ್ಲಿಯೇ ಸಭೆ ಮಾಡುವ ಮೂಲಕ ರೈತರಲ್ಲಿ ವಿಶ್ವಾಸ ಹೆಚ್ಚಿಸುವ ಪ್ರಯತ್ನ ಮಾಡಲಾಗುವುದು” ಎಂದು ಹೇಳಿದರು.ಕೃಷಿ ಸಚಿವ ಶಿವಶಂಕರ ರೆಡ್ಡಿ, ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ, ಸಹಕಾರ ಸಚಿವ ಬಂಡೆಪ್ಪ ಕಾಂಶಪೂರ್, ಪ್ರತಿ ಜಿಲ್ಲೆಯ ಇಬ್ಬರು ಪ್ರಗತಿ ಪರ ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ