ಜನಪ್ರತಿನಿಧಿ ಮೀರಿಸಿದ ಮಕ್ಕಳ ಹಾವಭಾವ!
Team Udayavani, Nov 30, 2018, 2:19 PM IST
ರಾಯಚೂರು: ಕಲಾಪಗಳಲ್ಲಿ ನಡೆಯುವ ಗದ್ದಲ, ಆಡಳಿತ-ವಿಪಕ್ಷಗಳ ನಡುವಿನ ವಾಕ್ಸಮರ, ಜನಪ್ರತಿನಿಧಿಗಳ ಮಧ್ಯ ನಡೆಯುವ ವ್ಯಂಗ್ಯ, ಟೀಕೆ, ಆರೋಪ ಪ್ರತ್ಯಾರೋಪಗಳನ್ನು ಕಣ್ಣಿಗೆ ಕಟ್ಟುವಂತೆ ಮಾಡಿ ತೋರುವ ಮೂಲಕ ವಿದ್ಯಾರ್ಥಿಗಳು ಗಮನ ಸೆಳೆದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ನೆರೆದವರ ಮೆಚ್ಚುಗೆ ಗಳಿಸಿತು. ಆರಂಭದಲ್ಲಿ ಮಕ್ಕಳು ಸ್ಪೀಕರ್, ಸಿಎಂ, ವಿಪಕ್ಷ ನಾಯಕ ಸ್ಥಾನಕ್ಕೆ ಸ್ಪರ್ಧಿಸಿ ತಮ್ಮನ್ನು ಯಾಕೆ ಆಯ್ಕೆ ಮಾಡಬೇಕು ಎಂಬ ಉದ್ದೇಶ ವಿವರಿಸಿದರು. ಬಳಿಕ ಆಯ್ಕೆ ಸಮಿತಿ ಮಕ್ಕಳ ಪ್ರತಿಭೆ ಆಧರಿಸಿ ಗಬ್ಬೂರಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅಕ್ಷತಾಳನ್ನು ಸ್ಪೀಕರ್ ಹುದ್ದೆಗೆ ಆಯ್ಕೆ ಮಾಡಿತು.
ಬಳಿಕ 13 ಜನರಲ್ಲಿ ಸಿಂಧನೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಗಂಗಾಬಿಕಾಳನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಯಿತು. ವಿಪಕ್ಷದ ನಾಯಕಿಯನ್ನಾಗಿ ಉದಾಳ ಪ್ರೌಢಶಾಲೆಯ ಚಂದ್ರಿಕಾ ಆಯ್ಕೆಯಾದರು. ಆರಂಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ಮೌನ ಆಚರಿಸಲಾಯಿತು. ಬಳಿಕ ಸ್ಪೀಕರ್ ಸಭೆಗೆ ಚಾಲನೆ ನೀಡಿದರು.
ಆರಂಭದಲ್ಲಿಯೇ ಸರ್ಕಾರದ ಸಾಲ ಮನ್ನಾ ವಿಚಾರ ಪ್ರಸ್ತಾಪಿಸಿದ ವಿಪಕ್ಷ ನಾಯಕರು, ರೈತರಿಗೆ ವಂಚನೆ ಮಾಡಿದ್ದೀರಿ ಎಂದು ದೂರಿದರು. ಇದಕ್ಕೆ ಉತ್ತರಿಸಿದ ಕೃಷಿ ಸಚಿವ, ರೈತರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ಈಗಾಗಲೇ ಅರ್ಧ ಹಣ ಬಿಡುಗಡೆ ಮಾಡಲಾಗಿದೆ. ಅದರ ಜತೆಗೆ ರೈತಮಿತ್ರ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.
ಸರ್ಕಾರ ಪ್ರತಿ ವರ್ಷ ನೀರಾವರಿ ಯೋಜನೆಗಳಿಗೆ 10 ಸಾವಿರ ಕೋಟಿ ನೀಡುತ್ತದೆ ಎಂದು ಹೇಳಿತ್ತು. ಆದರೆ, ಉತ್ತರ ಕರ್ನಾಟಕ ಭಾಗದ ಬಹುತೇಕ ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿವೆ. ಆಲಮಟ್ಟಿ ಜಲಾಶಯವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸುವ ಬೇಡಿಕೆ ಇದ್ದರೂ ಸರ್ಕಾರ ಯಾಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಅದಕ್ಕೆ ನೀರಾವರಿ ಸಚಿವ ಪ್ರತಿಕ್ರಿಯಿಸಿ, ಆಲಮಟ್ಟಿ ಯೋಜನೆ ಕೈಗೊಂಡರೆ ಸಾಕಷ್ಟು ಹಣ ಖರ್ಚಾಗುತ್ತದೆ. ನಾವು ಹಂತ ಹಂತವಾಗಿ ಎಲ್ಲ ಯೋಜನೆಗಳನ್ನು ಮುಗಿಸುತ್ತೇವೆ ಎಂದು ಸ್ಪಷ್ಟೀಕರಣ ನೀಡಿದರು.
ಕನ್ನಡದಲ್ಲಿ ಮಾತಾಡಿ: ಆಡಳಿತ ಪಕ್ಷದ ಸಚಿವರು, ಶಾಸಕರು ಸಭೆಯಲ್ಲಿ ಆಂಗ್ಲ ಪದ ಬಳಸುತ್ತಿದ್ದಂತೆ ವಿಪಕ್ಷ ನಾಯಕರು
ಸಭೆಯಲ್ಲಿ ಕನ್ನಡದಲ್ಲಿ ಮಾತನಾಡುವುದು ಕಲಿಯಿರಿ. ಸರ್ಕಾರ ನಡೆಸುವ ನೀವೇ ಕನ್ನಡದ ಬಗ್ಗೆ ಕಡೆಗಣನೆ ಮಾಡಿದರೆ ಹೇಗೆ
ಎಂದು ತರಾಟೆಗೆ ತೆಗೆದುಕೊಂಡರು.
ಆಕರ್ಷಕ ವೇಷಭೂಷಣ: ಬಹುತೇಕ ಮಕ್ಕಳು ಹಾಕಿಕೊಂಡು ಬಂದಿದ್ದ ಬಟ್ಟೆಗಳು ರಾಜಕಾರಣಿಗಳನ್ನು ಮೀರಿಸುವಂತಿದ್ದವು. ಅದರಲ್ಲೂ ಕೆಲ ಪ್ರಸಿದ್ಧ ನಾಯಕರನ್ನು ಹೋಲುವ ಶೈಲಿಯಲ್ಲೇ ಅನೇಕ ಮಕ್ಕಳು ಕಾಣುತ್ತಿದ್ದರು. ಇನ್ನು ವಿದ್ಯಾರ್ಥಿನಿಯರು ಖಾದಿ, ಕಾಟನ್ ಸೀರೆಗಳಲ್ಲಿ ಗಮನ ಸೆಳೆದರೆ ವಿದ್ಯಾರ್ಥಿಗಳು ಪಂಚೆ, ಜುಬ್ಟಾ ಹಾಕಿದ್ದರು. ಗಾಂಧಿಟೋಪಿ, ರುಮಾಲು ಸುತ್ತಿದ್ದ ಹುಡುಗರು ಗಮನ ಸೆಳೆದರು.
ಎಲ್ಲ ವಿದ್ಯಾರ್ಥಿಗಳಿಗೂ ಒಂದೊಂದು ಸಂಖ್ಯೆ ನೀಡಲಾಗಿತ್ತು. ಅಲ್ಲದೇ, ಒಬ್ಬರಿಗೆ ಒಂದೇ ಪ್ರಶ್ನೆ ಮತ್ತು ಉತ್ತರ ನೀಡಲು ಅಕವಾಶ ನೀಡಲಾಗಿತ್ತು. ತೀರ್ಪುಗಾರರು ಮಕ್ಕಳಿಗೆ ಅಂಕ ನೀಡುತ್ತಿದ್ದರು. ಕೊನೆಯಲ್ಲಿ ಆಯೋಜಕರು ಇಲ್ಲಿ ಆಯ್ಕೆಯಾದ ಮಕ್ಕಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ