ಜಿಲ್ಲಾಡಳಿತ ವಿರುದ್ಧ ಜಿ.ಪಂ. ಸದಸ್ಯರ ಅಸಮಾಧಾನ


Team Udayavani, Dec 1, 2018, 1:40 AM IST

zp-udupi-30-11.jpg

ಉಡುಪಿ: ‘ಮರಳು ಕೊರತೆ, ಸ್ಥಳೀಯರಿಂದ ಟೋಲ್‌ ಸಂಗ್ರಹ ಸೇರಿದಂತೆ ಪ್ರಮುಖ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಉಡುಪಿ ಜಿ.ಪಂ.ನ ಆಡಳಿತರೂಢ ಬಿಜೆಪಿ ಸದಸ್ಯರು ಶುಕ್ರವಾರದಂದು ನಿಗದಿಯಾದ ಜಿ.ಪಂ. ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ್ದಾರೆ. ನಿಗದಿತ ಸದಸ್ಯರ ಸಂಖ್ಯೆ ಕೊರತೆಯಿಂದ ಅರ್ಧ ತಾಸು ವಿಳಂಬವಾಗಿ ಸಭೆ ಆರಂಭವಾಯಿತು. ಈ ವೇಳೆ ಕಾಂಗ್ರೆಸ್‌ ಸದಸ್ಯರು ‘ಸಾಸ್ತಾನ ಮತ್ತು ಪಡುಬಿದ್ರಿಯ ಟೋಲ್‌ಗೇಟ್‌ಗಳಲ್ಲಿ ಸ್ಥಳೀಯರಿಗೆ ಟೋಲ್‌ ವಿನಾಯಿತಿ ನೀಡಬೇಕೆಂದು ನಡೆಯುತ್ತಿರುವ ಪ್ರತಿಭಟನೆಯನ್ನು ಉಲ್ಲೇಖೀಸಿದರು. ಅಂತಿಮ ನಿರ್ಧಾರವೇನಾಗಿದೆ?’ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನವಯುಗ ಸಂಸ್ಥೆಯ ಅಧಿಕಾರಿ ‘ಸ್ಥಳೀಯರಿಗೆ ವಿನಾಯಿತಿ ಬಗ್ಗೆ ನಿರ್ಧಾರ ಆಗಿಲ್ಲ’ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ರೇಶ್ಮಾ ಶೆಟ್ಟಿ ಅವರು ‘ಈ ಹಿಂದಿನ ಸಭೆಯಲ್ಲಿ ಸ್ಥಳೀಯರಿಂದ ಟೋಲ್‌ ಸಂಗ್ರಹಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಸಂಗ್ರಹಿಸುತ್ತಿದ್ದಾರೆ’ ಎಂದರು. ಇದಕ್ಕೆ ಗೀತಾಂಜಲಿ ಸುವರ್ಣ, ಪ್ರತಾಪ್‌ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ ಮೊದಲಾದವರು ದನಿಗೂಡಿಸಿದರು. ‘ಟೋಲ್‌ ಸಂಗ್ರಹ ಕುರಿತಾಗಿ ಕಂಪೆನಿ ಮತ್ತು ಸರಕಾರದ ನಡುವೆ ನಡೆದಿರುವ ಒಪ್ಪಂದವೇನು?’ ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ ಎಂದು ವಿಪಕ್ಷದ ವಿಲ್ಸನ್‌ ರೋಡ್ರಿಗಸ್‌ ಹೇಳಿದರು.

ಟೋಲ್‌ ಹೆಚ್ಚಳ?
‘ಪಡುಬಿದ್ರಿ ಸೇರಿದಂತೆ ಕೆಲವು ಕಡೆ ಹೆದ್ದಾರಿಯ ಸೇತುವೆ ಹಾಗೂ ಇತರ ಕಾಮಗಾರಿಗಳು ಪೂರ್ಣಗೊಂಡಿಲ್ಲ’ ಎಂದು ಸದಸ್ಯರು ದೂರಿದರು. ಸದಸ್ಯರ ಪ್ರಶ್ನೆಗೆ ಪ್ರತಿಕ್ರಿಯಿಸಿದ ನವಯುಗ ಕಂಪೆನಿಯ ಅಧಿಕಾರಿಗಳು ‘ಕಾಮಗಾರಿ ಬಾಕಿ ಇರುವುದರಿಂದ ಈಗ ಟೋಲನ್ನು ನಿಗದಿತ ಮೊತ್ತಕ್ಕಿಂತ ಕಡಿಮೆ ಪ್ರಮಾಣದಲ್ಲಿ ವಸೂಲಿ ಮಾಡಲಾಗುತ್ತಿದೆ’ ಎಂದು ಹೇಳಿದರು. ಆಡಳಿತ ಪಕ್ಷದ ಪ್ರತಾಪ್‌ ಹೆಗ್ಡೆ ಮಾರಾಳಿ ಅವರು ‘ಜಿಲ್ಲೆಯಲ್ಲಿ ಮರಳಿನಿಂದಾಗಿ ಜನಸಾಮಾನ್ಯರಿಗೆ ತೀವ್ರ ತೊದರೆಯಾಗಿದೆ. ಟೋಲ್‌ ಸಮಸ್ಯೆಯನ್ನು ಕೂಡ ಪರಿಹರಿಸಿಲ್ಲ. ಇವೆರಡೂ ಕೂಡ ಇತ್ಯರ್ಥ ಆಗುವವರೆಗೆ ಜಿ.ಪಂ.ಸಭೆಯ ಅವಶ್ಯಕತೆ ಇದೆಯೇ?’ ಎಂದು ಪ್ರಶ್ನಿಸಿದರು.

ಈ ಸಂದರ್ಭ ಮಾತನಾಡಿದ ಕೆಲವು ಸದಸ್ಯರು ‘ಜಿಲ್ಲಾಧಿಕಾರಿಯವರು ಮರಳು ಸಮಸ್ಯೆ ಬಗೆಹರಿಸಲು ಕಾನೂನಿನ ನೆಪ ಹೇಳುತ್ತಾರೆ, ನೂರಾರು ಪೊಲೀಸರನ್ನು ನಿಯೋಜಿಸಿ ಟೋಲ್‌ ಸಂಗ್ರಹಿಸಲು ಅನುವು ಮಾಡಿಕೊಡುತ್ತಾರೆ. ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ನಮಗೂ ಗೌರವ ಕೊಡುತ್ತಿಲ್ಲ. ಜಿಲ್ಲಾಧಿಕಾರಿಯವರ ಅಸಹಕಾರದಿಂದ ಬೇಸತ್ತು ಸಭೆಯನ್ನು ಬಹಿಷ್ಕರಿಸುತ್ತಿದ್ದೇವೆ’ ಎಂದು ಹೇಳಿ ಒಬ್ಬೊಬ್ಬರೇ ಸಭೆಯಿಂದ ನಿರ್ಗಮಿಸಿದರು.


ಸುರೇಶ್‌ ಬಟವಾಡೆ, ರೋಹಿತ್‌, ರಾಘವೇಂದ್ರ ಕಾಂಚನ್‌ ಅವರು ಕೂಡ ಜಿಲ್ಲಾಧಿಕಾರಿಯವರನ್ನು ತರಾಟೆಗೆ ತೆಗೆದುಕೊಂಡು ಸಭೆಯಿಂದ ಹೊರನಡೆದರು. ಈ ಸಂದರ್ಭದಲ್ಲಿ ವಿಪಕ್ಷದ ಜನಾರ್ದನ ತೋನ್ಸೆ ಅವರು ‘ಮರಳು ಸಿಗಬೇಕು. ಸ್ಥಳೀಯರಿಂದ ಟೋಲ್‌ ಕೂಡ ಸಂಗ್ರಹ ಮಾಡಬಾರದು ಎಂಬುದು ನಮ್ಮ ನಿಲುವು ಕೂಡ ಆಗಿದೆ. ಆದರೆ ಜಿಲ್ಲಾಧಿಕಾರಿಯವರು ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿಲ್ಲ. ಅವರು ಅನುಷ್ಠಾನ ಮಾಡುವ ಅಧಿಕಾರ ಮಾತ್ರ ಹೊಂದಿದ್ದಾರೆ. ನಾವು ಕೇಂದ್ರ/ ರಾಜ್ಯ ಸರಕಾರ ಮಟ್ಟದಲ್ಲಿ ಒತ್ತಾಯಿಸಿ ದರೆ ಮಾತ್ರ ಪ್ರಯೋಜನವಾದೀತು. ಸಭೆ ಬಹಿಷ್ಕಾರದಿಂದ ಪ್ರಯೋಜನವಿಲ್ಲ’ ಎಂದರು. 

ಮನವೊಲಿಕೆ ವಿಫ‌ಲ
ಸಭೆಯಿಂದ ನಿರ್ಗಮಿಸಿದ ಸದಸ್ಯರನ್ನು ವಾಪಸ್ಸು ಕರೆತರಲು ಅಧ್ಯಕ್ಷ ದಿನಕರ ಬಾಬು ಅವರು ಸಭೆಯಿಂದ ಹೊರಬಂದು ಸದಸ್ಯರ ಜತೆ ಮಾತುಕತೆ ನಡೆಸಿದರಾದರೂ ಸದಸ್ಯರು ಒಪ್ಪಲಿಲ್ಲ. ಅನಂತರ ಸಭೆಯನ್ನು ಮುಂದೂಡಲಾಯಿತು. ‘ಸಚಿವರ ಸ್ಥಾನಮಾನ ಹೊಂದಿರುವ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಹ್ವಾನಿತರು. ಆದರೆ ಜಿ.ಪಂ. ಸಭೆಯ ಅವಧಿಯಲ್ಲಿಯೇ ಸಮಾರಂಭ ಇಟ್ಟುಕೊಂಡು ಜಿ.ಪಂ. ಅಧ್ಯಕ್ಷರನ್ನು ಕಡೆಗಣಿಲಾಗಿದೆ’ ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಹೇಳಿದರು. ಕೃಷಿ ಮತ್ತು ಕೈಗಾರಿಕೆ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ ಎಸ್‌. ಕೋಟ್ಯಾನ್‌, ಜಿ.ಪಂ. ಸಿಇಒ ಸಿಂಧು ರೂಪೇಶ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಮುಖ್ಯ ಲೆಕ್ಕಾಧಿಕಾರಿ ನಾಗೇಶ್‌ ರಾಯ್ಕರ್‌ ಉಪಸ್ಥಿತರಿದ್ದರು.

ಏಕಕಾಲದಲ್ಲಿ ಸಭೆ-ಸಮಾರಂಭ !
ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅವರು ಮಾತನಾಡಿ ‘ಜಿ.ಪಂ. ಸಾಮಾನ್ಯಸಭೆ ಇರುವ ದಿನದಂದೆ ಇದೇ ಕಟ್ಟಡದ ಇನ್ನೊಂದು ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಿಗದಿ ಮಾಡಲಾಗಿದೆ. ಅಧ್ಯಕ್ಷರು, ಸದಸ್ಯರು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಮಾಡಲಾಗಿದೆ. ಇದು ಜಿ.ಪಂ.ಗೆ ಮಾಡಿರುವ ಅವಮಾನ’ ಎಂದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.