ರಾಮಮಂದಿರ ನಿರ್ಮಾಣ ಉಡುಪಿ: ನಾಳೆ ಬೃಹತ್‌ ಜನಾಗ್ರಹ ಸಭೆ


Team Udayavani, Dec 1, 2018, 10:36 AM IST

ramamandir.jpg

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಬೇಕೆಂದು ಒತ್ತಾಯಿಸಿ ಡಿ.2ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್‌ ಪ್ರದೇಶದಲ್ಲಿ ಬೃಹತ್‌ ಜನಾಗ್ರಹ ಸಭೆ ಜರಗಲಿದೆ.

ಅಪರಾಹ್ನ 3 ಗಂಟೆಗೆ ಉಡುಪಿಯ ಜೋಡುಕಟ್ಟೆಯಿಂದ ಬೃಹತ್‌ ಮೆರವಣಿಗೆ ಹೊರಟು ಅಲಂಕಾರ್‌ ಟಾಕೀಸ್‌-ಕಿದಿಯೂರು ಹೊಟೇಲ್‌-ಸಿಟಿ ಬಸ್‌ ನಿಲ್ದಾಣ – ಕಲ್ಸಂಕ ಸರ್ಕಲ್‌ ಮಾರ್ಗವಾಗಿ ಶ್ರೀಕೃಷ್ಣ ಮಠದ ಆವರಣದವರೆಗೆ ಸಾಗಿಬರಲಿದೆ. ಮೆರವಣಿಗೆಯಲ್ಲಿ ಜಿಲ್ಲೆಯ 2,000ಕ್ಕೂ ಅಧಿಕ ಭಜನ ಮಂಡಳಿ ಸದಸ್ಯರು, ವಿವಿಧ ವೇಷಧಾರಿಗಳು ಸಾಗಿಬರಲಿದ್ದಾರೆ. 

ಸಂಜೆ 4 ಗಂಟೆಗೆ ರಾಜಾಂಗಣ ಪಾರ್ಕಿಂಗ್‌ ಪ್ರದೇಶದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಅಭಾವಿಪ ಪರಿಷತ್‌ ಸಹಕಾರ್ಯ ದರ್ಶಿ ರಾಘವಲು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿಹಿಂಪ ಮುಖಂಡ ಮಂಜುನಾಥ ಸ್ವಾಮಿ, ಪರ್ಯಾಯ ಶ್ರೀ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸೇರಿದಂತೆ ಮಠಾಧೀಶರು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 30,000 ಮಂದಿ ಸೇರುವ ನಿರೀಕ್ಷೆ ಇದೆ ಎಂದು ವಿಹಿಂಪ ಜಿಲ್ಲಾ ಕಾರ್ಯದರ್ಶಿ ಪ್ರಮೋದ್‌ ಮಂದಾರ್ತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್‌ ಮೆಂಡನ್‌, ಜಿಲ್ಲಾ ಸಹಸಂಚಾಲಕ ಸುಧೀರ್‌ ನಿಟ್ಟೆ, ಜಿಲ್ಲಾ ಸಾಪ್ತಾಹಿಕ್‌ ಪ್ರಮುಖ್‌ ಸುರೇಂದ್ರ ಕೋಟೇಶ್ವರ, ದುರ್ಗಾವಾಹಿನಿ ಜಿಲ್ಲಾ ಸಹಸಂಚಾಲಕಿ ಭಾಗ್ಯಶ್ರೀ ಐತಾಳ್‌ ಉಪಸ್ಥಿತರಿದ್ದರು.

ವಾಹನ ನಿಲುಗಡೆ ವ್ಯವಸ್ಥೆ
ಡಿ.2ರಂದು ಶ್ರೀಕೃಷ್ಣ ಮಠದ ಆವರಣದಲ್ಲಿ ನಡೆಯುವ ಜನಾಗ್ರಹ ಸಭೆಗೆ ಬರುವ ವಾಹನಗಳ ನಿಲುಗಡೆಗೆ ವಿವಿಧೆಡೆ ವ್ಯವಸ್ಥೆ ಮಾಡಲಾಗಿದೆ.

–  ಬೈಂದೂರು, ಕೊಲ್ಲೂರು, ಕುಂದಾಪುರ, ಬ್ರಹ್ಮಾವರ ಕಡೆಗಳಿಂದ ಬರುವ ಬಸ್‌ಗಳಿಗೆ ಬ್ರಹ್ಮಗಿರಿ ಸಮೀಪದ ಸೈಂಟ್‌ ಸಿಸಿಲಿ ಶಾಲಾ ಮೈದಾನ (50-60 ಬಸ್‌ಗಳು).

–  ಪಡುಬಿದ್ರಿ, ಕಾಪು ಕಡೆಗಳಿಂದ ಬರುವ ಕಾರು ಮತ್ತು ಬೈಕ್‌ಗಳಿಗೆ ಕ್ರಿಶ್ಚಿಯನ್‌ ಶಾಲಾ ಮೈದಾನ (500 ಬೈಕ್‌, 100 ಕಾರು)

–  ಕಾರ್ಕಳ, ಹೆಬ್ರಿ, ಹಿರಿಯಡಕ ಕಡೆಗಳಿಂದ ಬರುವ ಬಸ್‌ಗಳಿಗೆ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾಲ್‌ ಪಾರ್ಕಿಂಗ್‌ ಪ್ರದೇಶ (75 ಬಸ್ಸು )

–  ಮಲ್ಪೆ ಕಡೆಗಳಿಂದ ಬರುವ ಕಾರು ಮತ್ತು ಬೈಕ್‌ಗಳಿಗೆ ಅಜ್ಜರಕಾಡು ಜಿÇÉಾ ಆಸ್ಪತ್ರೆ ಬಳಿಯ ರೆಡ್‌ಕ್ರಾಸ್‌ ಕಚೇರಿ ಮೈದಾನ (500 ಬೈಕ್‌, 50 ಕಾರು)

ಈ ಮೇಲಿನ ಪಾರ್ಕಿಂಗ್‌ ಸ್ಥಳಗಳಲ್ಲಿ ಹೆಚ್ಚುವರಿಯಾಗುವ ಕಾರು, ಬೈಕ್‌, ಇತರ ಲಘುವಾಹನಗಳನ್ನು ಕೃಷ್ಣ ಮಠದ ಬಳಿಯ ಹೊಸ ವಿದ್ಯೋದಯ ಶಾಲೆ ಬಳಿಯ ಗ¨ªೆಯಲ್ಲಿ, ರಾಜಾಂಗಣದ ಹಿಂಬದಿ ಮೈದಾನದಲ್ಲಿ ಪಾರ್ಕಿಂಗ್‌ ಮಾಡಬೇಕು (1,000 ಬೈಕ್‌, 200 ಕಾರು). ಹೆಚ್ಚುವರಿ ಬಸ್‌ಗಳನ್ನು ಕಲ್ಸಂಕ ರಾಯಲ್‌ ಗಾರ್ಡನ್‌, ಬೀಡಿನಗುಡ್ಡೆ ಮೈದಾನದಲ್ಲಿ ನಿಲುಗಡೆ ಮಾಡಬೇಕು. ರಾಜಾಂಗಣ ಮತ್ತು ಗೀತಾಮಂದಿರ ಬಳಿ ವಿಐಪಿ ಪಾರ್ಕಿಂಗ್‌ ಅವಕಾಶ ವಿರುತ್ತದೆ. ಡಿ.2ರಂದು ಶ್ರೀಕೃಷ್ಣ ಮಠಕ್ಕೆ ಆಗಮಿಸುವವರು ವಾಹನಗಳನ್ನು ರಾಜಾಂಗಣ ಹಿಂಬದಿಯ ಖಾಲಿಗದ್ದೆಯಲ್ಲಿ ಪಾರ್ಕಿಂಗ್‌ ಮಾಡಬೇಕು ಎಂದು ಎಸ್‌ಪಿ ಕಚೇರಿ ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.