ತಾಲೂಕು ಕರವೇ ಕಾರ್ಯಕರ್ತರಿಂದ 1 ಲಕ್ಷ ನೆರವು


Team Udayavani, Dec 1, 2018, 12:38 PM IST

vij-3.jpg

ತಾಳಿಕೋಟೆ: ಮಗುವಿನ ಲೀವರ್‌ ನಲ್ಲಿ ಕಾಣಿಸಿಕೊಂಡ ದೋಷದಿಂದ ಅಘಾತಗೊಂಡು ಹಣ ಸಂಗ್ರಹಕ್ಕಾಗಿ ಅಲೆದಾಡುತ್ತಿರುವ ಕುಟುಂಬಕ್ಕೆ ನೆರವು ಒದಗಿಸಲು ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿ ಬೀದಿಯಲ್ಲಿ ಹಣ ಸಂಗ್ರಹಿಸಿ ಕಲ್ಲೂರ ಕುಟುಂಬಕ್ಕೆ 1 ಲಕ್ಷ ರೂ. ನೆರವು ಕಲ್ಪಿಸಿಕೊಟ್ಟಿದ್ದಾರೆ.

ಶುಕ್ರವಾರ ಉಪ ತಹಶೀಲ್ದಾರ್‌ ಚವ್ಹಾಣ, ಎಎಸ್‌ಐ ಕೆ.ಬಿ.ರಡ್ಡಿ ಅವರ ಸಮ್ಮುಖದಲ್ಲಿ ಕರವೇ ಕಾರ್ಯಕರ್ತರು ಸಂಗ್ರಹಿಸಿ¨ 1 ಲಕ್ಷ ರೂ. ಹಣವನ್ನು ಲೀವರ್‌ ಸಮಸ್ಯೆಗೊಳಗಾದ ಸುದರ್ಶನ ಕಲ್ಲೂರ ಅವರ ತಾಯಿ ರೇಣುಕಾ ಕಲ್ಲೂರ ಅವರಿಗೆ ಹಸ್ತಾಂತರಿಸಿದರು. ಈ ಸಮಯದಲ್ಲಿ ಕರವೇ ತಾಲೂಕಾ ಅಧ್ಯಕ್ಷ ನಿಸಾರ ಬೇಪಾರಿ ಮಾತನಾಡಿ, ಸುದರ್ಶನ ಕಲ್ಲೂರಗೆ ಲೀವರ್‌ನಲ್ಲಿ ಕಾಣಿಸಿಕೊಂಡಿರುವ ದೋಷದಿಂದ ಲೀವರ್‌ ಬದಲಾವಣೆ ಅವಶ್ಯಕವಾಗಿದೆ.

ತಾಯಿಯೇ ತನ್ನ ಜೀವವನ್ನು ಒತ್ತೆ ಇಟ್ಟು ಲೀವರ್‌ ನೀಡಲು ಮುಂದಾಗಿದ್ದರೂ ಈ ಬದಲಾವಣೆಗೆ ಸುಮಾರು 15ರಿಂದ 20 ಲಕ್ಷ ರೂ. ವೆಚ್ಚ ತಗಲುತ್ತದೆ ಎಂದು ವೈದ್ಯರು ಹೇಳಿದ್ದರಿಂದ ಹಣ ಹೊಂದಿಸುವ ಸಲುವಾಗಿ ಪಾಲಕರು ದಾನಿಗಳ ಮನೆ ಬಾಗಿಲಿಗೆ ತಿರುಗಾಡುತ್ತಿದ್ದರು.

ಅದರ ಜೊತೆಗೆ ಕರವೇ ಸಂಘಟನೆಯಿಂದ ಕೈಲಾದ ಮಟ್ಟಿಗೆ ಸಹಾಯ ನೀಡಬೇಕೆಂಬ ಉದ್ದೇಶದೊಂದಿಗೆ ಸಂಘಟನೆಯ
ಕಾರ್ಯಕರ್ತರೆಲ್ಲರೂ ಸೇರಿ ಬೀದಿ ಬೀದಿಯಲ್ಲಿ ಹಾಗೂ ಫುಟ್‌ಪಾಥ್‌ ವ್ಯಾಪಾರಸ್ಥರ ಬಳಿ ತೆರಳಿ ಅವರ ಕೈಲಾದ
ಸಹಾಯವನ್ನು ಅಪೇಕ್ಷಿಸಿದ್ದೇವು. 

ಅದರಂತೆ ಈಗ ದಾನಿಗಳಿಂದ 1 ಲಕ್ಷ ರೂ. ಸಂಗ್ರಹವಾಗಿದೆ. ಈ ಒಂದು ಸಂಘಟನೆ ಕಾರ್ಯಕ್ಕೆ ಸಹಕರಿಸಿದ ಸಾರ್ವಜನಿಕರಿಗೆ ಮತ್ತು ವ್ಯಾಪಾರಸ್ಥರಿಗೆ ಆಭಾರಿಯಾಗಿದ್ದೇವೆ ಎಂದರು.

ಕರವೇ ಸಂಘಟನೆ ತಾಲೂಕು ಉಪಾಧ್ಯಕ್ಷ ಜೈಭೀಮ ಮುತ್ತಗಿ, ಮಹಿಳಾ ಘಟಕದ ಶ್ವೇತಾ ಯರಗಲ್ಲ ಮಾತನಾಡಿ, ಬಡತನದಲ್ಲಿಯೇ ಬೆಂದು ಹೋಗಿದ್ದ ಕಲ್ಲೂರ ಕುಟುಂಬದ ಬಾಲಕನಿಗೆ ಲೀವರ್‌ನಲ್ಲಿ ಕಾಣಿಸಿಕೊಂಡಿದ್ದ ದೋಷ ದೇವರ ಸತ್ವ ಪರಿಕ್ಷೆ ಎಂಬುದಾಗಿದೆ. 

ಇಂತಹ ಬಡತನದಲ್ಲಿ ಬೆಂದು ಮಗನ ಬದುಕಿಗಾಗಿ ಅಲೆದಾಡುತ್ತಿರುವ ಕುಟುಂಬದ ಕುರಿತು ಪತ್ರಿಕೆಯಲ್ಲಿ ಮನಕುಲಕುವಂತಹ ವರದಿ ಪ್ರಕಟಿಸಿ ಎಲ್ಲರ ಕಣ್ತೆರಿಸುವಂತಹ ಕಾರ್ಯ ಮಾಡಿದೆ. ಮಾಧ್ಯಮಕ್ಕೂ ಹಾಗೂ ಸಹಕರಿಸಿದ ಎಲ್ಲ ವ್ಯಾಪಾರಸ್ಥರಿಗೆ ಕೃತಜ್ಞತೆ ಸಲ್ಲಿಸುವದಾಗಿ ತಿಳಿಸಿದರು.

ಉಪ ತಹಶೀಲ್ದಾರ್‌ ಚವ್ಹಾಣ ಮಾತನಾಡಿ, ಮಗನನ್ನು ಬದುಕಿಸಿಕೊಳ್ಳಲು ಅಲೆದಾಡುತ್ತಿರುವ ಕಲ್ಲೂರ ಕುಟುಂಬಕ್ಕೆ ನೆರವು ಒದಗಿಸುವ ಸಲುವಾಗಿ ಮಾನವೀಯತೆ ಆಧಾರದ ಮೇಲೆ ಕರವೇ ಕಾರ್ಯಕರ್ತರೆಲ್ಲರೂ ಬೀದಿ ಬೀದಿಯಲ್ಲಿ ದೇಣಿಗೆ ಸಂಗ್ರಹದ ಡಬ್ಬಿಯೊಂದಿಗೆ ಸಂಚರಿಸಿ ಹಣ ಸಂಗ್ರಹಿಸಲು ಮುಂದಾಗಿರುವದು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಕಾರ್ಯವಾಗಿದೆ ಎಂದರು.

ಕರವೇ ತಾಲೂಕು ಉಪಾಧ್ಯಕ್ಷ ಪ್ರಭು ಪಾಟೀಲ, ಅಬುಬಕರ ಲಾಹೋರಿ, ನಬಿ ಲಾಹೋರಿ, ಮಂಜು ಬಡಿಗೇರ, ನಾಗರಾಜ ಪತ್ತಾರ, ಬಾಷಾ ಕಿತ್ತೂರ, ಬಾಷಾ ಹುಣಸಗಿ, ನಬಿ ಮೇತ್ರಿ, ಪ್ರಭು ಅಣ್ಣೀಗೇರಿ, ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ತಳವಾರ, ಟಿಪ್ಪು ಕಾಳಗಿ, ಮನೋಜ ಹಂಚಾಟೆ, ಗಿರೀಶ ಕನಕರಡ್ಡಿ, ಮಡಿವಾಳ ಕೊಂಡಗೂಳಿ, ರಾಜು ಮೂಕಿಹಾಳ ಇದ್ದರು. 

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

1

Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್‌

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.