ಸುರಂಗ,ಮೇಲ್ಸೆತುವೆ ನಿರ್ಮಾಣಕ್ಕೆ 6 ತಿಂಗಳಲ್ಲಿ ಅನುಮತಿ: ಗಡ್ಕರಿ
Team Udayavani, Dec 2, 2018, 6:00 AM IST
ಹಾಸನ: ರಾಜ್ಯದ ಕರಾವಳಿಗೆ ಸಂಪರ್ಕ ಕೊಂಡಿಯಾಗಿರುವ ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿ-75ರ ಶಿರಾಡಿಘಾಟಿನಲ್ಲಿ 23.63 ಕಿ.ಮೀ. ಸುರಂಗ ಮತ್ತು ಮೇಲ್ಸೆತುವೆ ನಿರ್ಮಾಣದ 10 ಸಾವಿರ ಕೋಟಿ ರೂ. ಯೋಜನೆಯ ಡಿಪಿಆರ್ ಅಂತಿಮ ಹಂತದಲ್ಲಿದೆ. ಇನ್ನು 6 ತಿಂಗಳಲ್ಲಿ ಈ ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾವೇರಿ ವಿವಾದಕ್ಕೆ ನದಿ ಜೋಡಣೆಯೇ ಮದ್ದು. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆಯ 80 ಸಾವಿರ ಕೋಟಿ ರೂ.ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವೆ 60 ರಿಂದ 70 ಟಿಎಂಸಿ ನೀರಿಗಾಗಿ ವಿವಾದವಿದೆ.
ಗೋದಾವರಿಯಲ್ಲಿ 500 ಟಿಎಂಸಿಗೂ ಹೆಚ್ಚು ನೀರು ವ್ಯರ್ಥವಾಗುತ್ತಿದೆ. ಅದನ್ನು ಕಾವೇರಿ ನದಿಗೆ ಹರಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಗೋದಾವರಿಯಿಂದ ಕೃಷ್ಣಾ ನದಿಗೆ, ಕೃಷ್ಣೆಯಿಂದ ಪೆನ್ನಾರ್ ನದಿಗೆ, ಪೆನ್ನಾರ್ನಿಂದ ಕಾವೇರಿ ನದಿ ಜೋಡಣೆ ಮಾಡುವುದರಿಂದ 450 ಟಿಎಂಸಿ ನೀರು ಪಡೆದುಕೊಳ್ಳಲು ಸಾಧ್ಯವಿದೆ. ಆಗ ತಮಿಳುನಾಡಿನ ಭಾಗಕ್ಕೂ ನೀರು ಲಭ್ಯವಾಗಲಿದೆ. ಇದರಿಂದ ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ವಿವಾದ ಬಗೆಹರಿಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್