ಪುತ್ತೂರು ಉಪನೋಂದಣಿ ಕಚೇರಿ ಸ್ಥಳಾಂತರ 


Team Udayavani, Dec 2, 2018, 10:04 AM IST

2-december-1.gif

ಪುತ್ತೂರು: ಸೋಮವಾರದಿಂದ ಪುತ್ತೂರು ಉಪನೋಂದಣಿ ಕಚೇರಿ ಮಿನಿ ವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಲಿದೆ. 120 ವರ್ಷಗಳಿಂದ ಆಶ್ರಯ ಪಡೆದಿದ್ದ ಕಟ್ಟಡವನ್ನು ನೋಂದಣಿ ಇಲಾಖೆ ಕೊನೆಗೂ ಬಿಟ್ಟು ತೆರಳುತ್ತಿದೆ.

ಸುಮಾರು 150ಕ್ಕೂ ಹೆಚ್ಚು ವರ್ಷಗಳಿಂದ ಪುತ್ತೂರು ತಾಲೂಕಿನಲ್ಲಿ ಕಾರ್ಯಾ ಚರಿಸುತ್ತಿರುವ ಉಪ ನೋಂದಣಿ ಕಚೇರಿ ಈಗ ಮತ್ತೊಂದು ಮಗ್ಗುಲು ಬದಲಿಸುತ್ತಿದೆ. 1865ರಲ್ಲಿ ಉಪ್ಪಿನಂಗಡಿಯಲ್ಲಿ ಆರಂಭವಾದ ಈ ಕಚೇರಿ, 1883ರಲ್ಲಿ ಪುತ್ತೂರಿಗೆ ಸ್ಥಳಾಂತರ ಗೊಂಡಿತ್ತು. ಇದೀಗ ತನ್ನ ಕಟ್ಟಡದಿಂದ ಪುತ್ತೂರು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತಿದೆ. ಶನಿವಾರ ಹೆಚ್ಚಿನೆಲ್ಲ ದಾಖಲೆ, ಕಂಪ್ಯೂಟರ್‌, ಇತರ ಸೊತ್ತುಗಳನ್ನು ಸೌಧಕ್ಕೆ ಶಿಫ್ಟ್‌ ಮಾಡಲಾಗಿದೆ.

ಉಪನೋಂದಣಿ ಕಚೇರಿ ಇತಿಹಾಸ
1865ರ ಡಿ. 23ರಂದು ಪುತ್ತೂರು ಉಪನೋಂದಣಿ ಕಚೇರಿಗೆ ಗೆಜೆಟ್‌ ನೋಟಿಫಿಕೇಷನ್‌ ಆಗಿತ್ತು. ಆದರೆ ಇದಕ್ಕೆ ಮೊದಲೇ ಅಂದರೆ 1865ರ ಜ. 1ರಂದು ಕಚೇರಿ ಅಸ್ತಿತ್ವಕ್ಕೆ ಬಂದಿತ್ತು ಎನ್ನುತ್ತದೆ ದಾಖಲೆಗಳು. ಆದರೆ ಆಗ ಕಚೇರಿ ಇದ್ದದ್ದು ಉಪ್ಪಿನಂಗಡಿಯಲ್ಲಿ. ತಾಲೂಕು ಕೇಂದ್ರವೂ ಉಪ್ಪಿನಂಗಡಿಯೇ ಆಗಿತ್ತು. ನೆರೆ ನೀರು ಪೇಟೆಗೆ ನುಗ್ಗಿ, ದಾಖಲೆಗಳು ಕೊಚ್ಚಿ ಹೋಗುವ ಭೀತಿ ಎದುರಾಯಿತು. ಆಗ ಉಪನೋಂದಣಿ ಕಚೇರಿಯನ್ನು ಅನಿವಾರ್ಯವಾಗಿ ಪುತ್ತೂರಿಗೆ ಸ್ಥಳಾಂತರ ಮಾಡಲಾಯಿತು.  ಕಾಲಾಂತರದಲ್ಲಿ ತಾಲೂಕು ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲಾಯಿತು. ಆದರೆ ಈ ಪಟ್ಟಿಯಲ್ಲಿ ಮೊದಲಿಗೆ ಪುತ್ತೂರಿಗೆ ಸ್ಥಳಾಂತರವಾದ ಸರಕಾರಿ ಕಚೇರಿ ಉಪನೋಂದಣಿ ಇಲಾಖೆ.

1883ರ ಜು. 30ರಂದು ಉಪ್ಪಿನಂಗಡಿಯಲ್ಲಿದ್ದ ಉಪನೋಂದಣಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುತ್ತದೆ. ಆದರೆ ಈ ಕಚೇರಿಗೆ ಇಷ್ಟರವರೆಗೆ ಆಶ್ರಯ ನೀಡಿದ್ದ ಕಟ್ಟಡ ಸಿಕ್ಕಿದ್ದು 1887ರಲ್ಲಿ. ಅಂದರೆ ಇಲ್ಲಿಗೆ ಸರಿಸುಮಾರು 120 ವರ್ಷಗಳ ಕಾಲ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯ ಕಟ್ಟಡದಲ್ಲಿ ಉಪನೋಂದಣಿ ಕಚೇರಿ ಕೆಲಸ ಕಾರ್ಯ ನಡೆಸಿದೆ.

ಶತಪ್ರಯತ್ನದ ಬಳಿಕ ಶಿಫ್ಟ್‌!
ಪುತ್ತೂರು ಉಪನೋಂದಣಿ ಕಚೇರಿಯಲ್ಲಿ ಮಿನಿ ವಿಧಾನಸೌಧಕ್ಕೆ ಶಿಫ್ಟ್‌ ಮಾಡಬೇಕೆನ್ನುವ ನೆಲೆಯಲ್ಲಿ ಸಾಕಷ್ಟು ಪ್ರಯತ್ನ ನಡೆದು ಹೋಗಿವೆ. ಇಬ್ರಾಹಿಂ ಜಿಲ್ಲಾಧಿಕಾರಿ ಹಾಗೂ ಡಾ| ರಾಜೇಂದ್ರ ಕೆ.ವಿ. ಅವರು ಎಸಿ ಆಗಿದ್ದಾಗ ಒಂದೇ ದಿನದಲ್ಲಿ ನೋಂದಣಿ ಇಲಾಖೆಯ ಹೆಸರಿನಲ್ಲಿದ್ದ ಆರ್‌ಟಿಸಿಯನ್ನು ಪಕ್ಕದಲ್ಲೇ ಇದ್ದ ಸರಕಾರಿ ಆಸ್ಪತ್ರೆ ಹೆಸರಿಗೆ ವರ್ಗಾಯಿಸಲಾಗಿತ್ತು. 

ಈ ನಡುವೆ ಮಿನಿ ವಿಧಾನಸೌಧಕ್ಕೆ ಅಗತ್ಯವಾಗಿ ಬೇಕಾಗಿರುವ ಲಿಫ್ಟ್‌ನ ವ್ಯವಸ್ಥೆಯನ್ನು ಮಾಡಲಾಗಿತ್ತು. ಶಿಫ್ಟ್‌ಗೆ ಶತಪ್ರಯತ್ನ ನಡೆಸಿದರೂ, ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಶಾಸಕ ಸಂಜೀವ ಮಠಂದೂರು ಅವರು ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾವಿಸಿದ್ದರು. ಪರಿಣಾಮವೋ ಎನ್ನುವಂತೆ, ಪ್ರಸ್ತುತ ಉಪನೋಂದಣಿ ಕಚೇರಿಯನ್ನು ಮಿನಿ ವಿಧಾನಸೌಧಕ್ಕೆ ಸ್ಥಳಾಂತರಿಸುವಂತೆ ಆದೇಶ ಹೊರಬಿದ್ದಿದೆ. ಇದೀಗ ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲ ಇಲಾಖೆಗಳು ಒಂದೇ ಸೂರಿನಡಿ ಬರಬೇಕೆನ್ನುವ ಕಲ್ಪನೆಗೆ ಜೀವ ಬಂದಂತಾಗಿದೆ.

ರಜಾದಿನದ ಬಳಕೆ
ಶನಿವಾರ ಮಧ್ಯಾಹ್ನ 12 ಗಂಟೆ ವರೆಗೆ ಮಾತ್ರ ಮಿನಿ ವಿಧಾನಸೌಧ ಕಾರ್ಯಾಚರಿಸುತ್ತದೆ. ಇದನ್ನೇ ಬಳಸಿಕೊಂಡ ಅಧಿಕಾರಿಗಳು, ಸಾರ್ವಜನಿಕರಿಗೆ ತೊಂದರೆ ಆಗಬಾರದೆನ್ನುವ ನೆಲೆಯಲ್ಲಿ ಸ್ಥಳಾಂತರ ಕೆಲಸ ಮುಗಿಸಿದ್ದಾರೆ. ಅಧಿಕಾರಿಗಳೇ ಮುಂದೆ ನಿಂತು, ಸಿಬಂದಿಯ ಸಹಕಾರ ದಿಂದ ಎಲ್ಲ ದಾಖಲೆ, ಸೊತ್ತುಗಳನ್ನು ಮಿನಿ ವಿಧಾನಸೌಧದ ಮೊದಲನೇ ಮಹಡಿಗೆ ಶಿಫ್ಟ್‌ ಮಾಡಿದ್ದಾರೆ. ರವಿವಾರ ಸೌಧದಲ್ಲಿ ಕಚೇರಿ ಒಳಗಿನ ಜೋಡಣೆ ಕೆಲಸ ನಡೆ ಯಲಿದೆ. ಎಲ್ಲ ಕೆಲಸ ಕಾರ್ಯಗಳು ಮುಗಿದರೆ ಸೋಮವಾರ ಬೆಳಗ್ಗೆ ಸಾರ್ವ ಜನಿಕರನ್ನು ಉಪನೋಂದಣಿ ಕಚೇರಿ ಮಿನಿ ವಿಧಾನಸೌಧದಲ್ಲಿ ಸ್ವಾಗತಿಸಲಿದೆ.

ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.