13 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನಕ್ಕೆ ಆಯ್ಕೆ
Team Udayavani, Dec 2, 2018, 11:09 AM IST
ಕಲಬುರಗಿ: ಸಾಫ್ಟವೇರ್ ಕ್ಷೇತ್ರದ ಪ್ರಮುಖ ಕಂಪನಿ ಎಂಫ್ ಸಿಸ್ ಶರಣಬಸವ ವಿವಿ ಆವರಣದಲ್ಲಿ ನಡೆಸಿದ ಕ್ಯಾಂಪಸ್
ಸಂದರ್ಶನದಲ್ಲಿ ನಗರದ ಅಪ್ಪಾ ಇನ್ಸಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ 13 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಅಸೋಷಿಯೇಟ್ ಸಾಫ್ಟವೇರ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಒಂಭತ್ತು ಬಾಲಕಿಯರು ಹಾಗೂ ನಾಲ್ವರು ಬಾಲಕರು ಸೇರಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿ ವರ್ಷ ಆರಂಭಿಕ 2.80 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಬೆಂಗಳೂರಿನ ಎಂಫ್ಸಿಸ್ ಕಂಪನಿ ತಂಡವು ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಅಪ್ಪಾ ಇನ್ಸಿಟ್ಯೂಟ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜು, ಬೀದರನ ಲಿಂಗರಾಜಪ್ಪ ಇಂಜಿನಿಯರಿಂಗ್ ಕಾಲೇಜು, ಯಾದಗಿರಿ ಜಿಲ್ಲೆಯ ಸುರಪುರದ ವೀರಪ್ಪ
ನಿಷ್ಟಿ ಇಂಜಿನಿಯರಿಂಗ್ ಕಾಲೇಜಿನ ಮತ್ತು ದೊಡ್ಡಪ್ಪ ಅಪ್ಪ ಇನ್ಸಟ್ಯೂಟ್ ಆಫ್ ಮಾಸ್ಟರ್ ಆಫ್ ಕಂಪ್ಯೂಟರ್ ಅಫ್ಲಿಕೇಷನ್ನ 324ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದರು.
ಆಯ್ಕೆಯಾದ ವಿದ್ಯಾರ್ಥಿಗಳು ಬೆಂಗಳೂರಿನ ಎಂಫಸಿಸ್ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಏಳನೇ ಸೆಮಿಸ್ಟರನ ವಿದ್ಯಾರ್ಥಿಗಳು ಯಶಸ್ವಿಯಾಗಿ ಕ್ಯಾಂಪನ್ ಸಂದರ್ಶನ ಎದುರಿಸಿದ್ದು ಅದರಲ್ಲಿ ಅಪ್ಪಾ ಇನ್ಸಿಟ್ಯೂಟ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮೇಘನಾ ಬಂಡಿ, ಮಹಿಮಾ ಚಿಲ್ಲಾಪುರ, ಪ್ರೇಮಸಾಗರ, ತೋಟೆಂದ್ರ ಮಠಪತಿ, ಶ್ರದ್ಧಾ ನೀಲಶೆಟ್ಟಿ, ಅಕ್ಷತಾ, ಅಂಜಲಿ ವಿಜಾಪುರೆ, ಸೌಮ್ಯ ರಾಜಗಿರಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸರ್ವೋತ್ತಮ ಕುಲಕರ್ಣಿ, ರಕ್ಷಿತ, ಸಭಾ, ಕೃಷ್ಣ ಮಹೇಂದ್ರಕರ್, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮೀನಾಕುಮಾರಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಹಾಗೂ ಕಾಲೇಜಿಗೆ ಕೀರ್ತಿ ತರಲು ಕಾರಣರಾದ
ಬೋಧಕ ಸಿಬ್ಬಂದಿಗಳನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಾ ಧಿಪತಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪರಮ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಕುಲಪತಿ ಡಾ| ನಿರಂಜನ ನಿಷ್ಟಿ, ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ, ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಡೀನ್ ಪ್ರೊ| ಲಕ್ಷ್ಮೀ ಮಾಕಾ, ಪ್ಲೇಸ್ಮೆಂಟ್ ಸೆಲನ ಶಿವುಕುಮಾರ ಕಾಗಿ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು