ವಿದ್ಯುತ್‌ ಉಳಿತಾಯಕ್ಕೆ ಬಂತು ಸಾಫ್ಟ್ವೇರ್‌


Team Udayavani, Dec 2, 2018, 11:55 AM IST

vidyut.jpg

ಬೆಂಗಳೂರು: ಬೃಹತ್‌ ಕಂಪೆನಿಗಳಲ್ಲಿ ಅನಗತ್ಯವಾಗಿ ವಿದ್ಯುತ್‌ ವ್ಯರ್ಥವಾಗುವುದು, ಶಾರ್ಟ್‌ ಸರ್ಕ್ನೂಟ್‌ನಂತಹ ಅವಘಡಗಳು ಹಾಗೂ ಡೇಟಾ ಸಂರಕ್ಷಣೆಯನ್ನು ಕೈಗೊಳ್ಳಲು ವಿಗ್ಯಾನ್‌ಲಾಬ್ಸ್, ಎಪಿಎಂ ಪ್ಲಸ್‌ ಎಂಬ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದೆ. 

ನೂರಕ್ಕೂ ಹೆಚ್ಚಿನ ಕಂಪ್ಯೂಟರ್‌ಗಳಿರುವ ಕಂಪೆನಿಯಲ್ಲಿ ಹೆಚ್ಚಿನ ಸಮಯ ಕಂಪ್ಯೂಟರ್‌ಗಳು ಬಳಕೆಯಲ್ಲಿರುತ್ತವೆ. ಜತೆಗೆ ಸಿಬ್ಬಂದಿಗಳು ಊಟ-ತಿಂಡಿ, ಕಾಫಿ-ಟೀ ಹೀಗೆ ವಿರಾಮ ಪಡೆದಾಗಲೂ ಕಂಪ್ಯೂಟರ್‌ಗಳಿಗೆ ವಿದ್ಯುತ್‌ ಪೂರೈಕೆಯಾಗುತ್ತಿರುತ್ತದೆ. ಇದರಿಂದಾಗಿ ಕಂಪೆನಿಗಳಿಗೆ ಹೆಚ್ಚಿನ ವಿದ್ಯುತ್‌ ಬಿಲ್‌ ಬರುತ್ತದೆ. ಆ ಹಿನ್ನೆಲೆಯಲ್ಲಿ ಅನಗತ್ಯವಾಗಿ ವಿದ್ಯುತ್‌ ಬಳಕೆಯಾಗುವುದನ್ನು ಈ ಸಾಫ್ಟ್ವೇರ್‌ ತಡೆಯಲಿದೆ. 

ನೂರಾಕ್ಕೂ ಹೆಚ್ಚಿನ ಕಂಪ್ಯೂಟರ್‌ಗಳಿರುವ ಕಂಪೆನಿಯಲ್ಲಿ ಮೊದಲಿಗೆ ಪ್ರಾಯೋಗಿಕವಾಗಿ ಸಾಫ್ಟ್ವೇರ್‌ನ್ನು ಅಳವಡಿಕೆ ಮಾಡಲಾಗುತ್ತದೆ. ಈ ವೇಳೆ ಪ್ರತಿಯೊಂದು ಕಂಪ್ಯೂಟರ್‌ ಎಷ್ಟು ವಿದ್ಯುತ್‌ ಬಳಕೆ ಮಾಡುತ್ತಿದೆ ಎಂಬುದು ತಿಳಿಯಲಿದೆ. ನಂತರದಲ್ಲಿ ಪ್ರತಿಯೊಂದು ಕಂಪ್ಯೂಟರ್‌ನ ಐಪಿ ವಿಳಾಸದ ಆಧಾರದ ಮೇಲೆ ಯುನಿಕ್‌ ಸಂಖ್ಯೆಯನ್ನು ನೀಡಿ, ತಮ್ಮ ಸಾಫ್ಟ್ವೇರ್‌ ಅಳವಡಿಕೆ ಮಾಡಲಾಗುತ್ತದೆ. 

ಸಾಫ್ಟ್ವೇರ್‌ನಲ್ಲಿ ಕೆಲವೊಂದು ವಿಶೇಷ ಅಂಶಗಳನ್ನು ಅಳವಡಿಸಿರುವುದರಿಂದಾಗಿ ಇಂತಿಷ್ಟು ನಿಮಿಷಗಳು ಕಂಪ್ಯೂಟರ್‌ ಬಳಕೆಯಾಗದಂತಹ ಸಂದರ್ಭದಲ್ಲಿ ಕಂಪ್ಯೂಟರ್‌ಗೆ ರವಾನೆಯಾಗುತ್ತಿರುವ ವಿದ್ಯುತ್‌ ಸ್ಥಗಿತಗೊಳಿಸುತ್ತದೆ. ಸಿಬ್ಬಂದಿ ಬಂದ ಕುಳಿತು ಮೌಸ್‌ ಅಥವಾ ಕೀ ಬೋರ್ಡ್‌ ಕೀ ಒತ್ತಿದ ಕೆಲವೇ ಸೆಕೆಂಡುಗಳಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ವಿಗ್ಯಾನ್‌ಲಾಬ್ಸ್ ಸಂಸ್ಥೆಯ ಮಾರುಕಟ್ಟೆ ಕಾರ್ಯನಿರ್ವಾಹಕ ಗೌರವ್‌ ಆರ್‌. ಕಪೂರ್‌ ಮಾಹಿತಿ ನೀಡಿದರು. 

ಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ವಿದೇಶ ಹಾಗೂ ದೇಶದ ಪ್ರಮುಖ ಸಂಸ್ಥೆಗಳಲ್ಲಿ ಈ ಸಾಫ್ಟ್ವೇರ್‌ ಅಳವಡಿಸಿದೆ. ಅದರಂತೆ ವಿಶ್ವದಾದ್ಯಂತ ಸಾಫ್ಟ್ವೇರ್‌ ಅಳವಡಿಸಿರುವ 52 ಲಕ್ಷ ಕಂಪ್ಯೂಟರ್‌ಗಳಿಂದಾಗಿ 1049.82 ಗಿಗಾ ವ್ಯಾಟ್‌ ವಿದ್ಯುತ್‌ ಉಳಿತಾಯ ಮಾಡಲಾಗಿದ್ದು, ಇಷ್ಟು ಪ್ರಮಾಣದ ವಿದ್ಯುತ್‌ನ್ನು ಇಡೀ ಮೈಸೂರಿಗೆ ಒಂದು ವರ್ಷ ಪೂರೈಕೆ ಮಾಡಬಹುದಾಗಿತ್ತು ಎಂದು ಹೇಳಿದರು. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.