ಸರಕಾರಿ ಸಮಾರಂಭಗಳಲ್ಲಿ ನೀರಿನ ಪ್ಲಾಸ್ಟಿಕ್‌ ಬಾಟಲಿ ನಿಷೇಧ


Team Udayavani, Dec 2, 2018, 2:08 PM IST

bottle.jpg

ಉಡುಪಿ: ಸರಕಾರಿ ಪ್ರಾಯೋಜಿತ ಸಭೆ, ಸಮಾರಂಭ ಮತ್ತು ಸರಕಾರಿ ಕಚೇರಿಗಳಲ್ಲಿ ಏಕಕಾಲಿಕ ಬಳಕೆ (ಸಿಂಗಲ್‌ಯೂಸ್‌) ನೀರಿನ ಪ್ಲಾಸ್ಟಿಕ್‌ ಬಾಟಲಿಗಳ ಬಳಕೆ/ ಸರಬರಾಜು ನಿಷೇಧಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

ಪ್ಲಾಸ್ಟಿಕ್‌ನ ಕ್ಯಾರಿಬ್ಯಾಗ್‌, ತಟ್ಟೆ, ಲೋಟ, ಚಮಚ ಮತ್ತು ಊಟದ ಮೇಜಿನ ಮೇಲೆ ಹರಡುವ ಹಾಳೆಗಳು ಮತ್ತಿತರ ವಸ್ತುಗಳ ತಯಾರಿಕೆ, ಮಾರಾಟ, ದಾಸ್ತಾನು ಮತ್ತು ಉಪಯೋಗವನ್ನು ಈ ಹಿಂದೆಯೇ ನಿಷೇಧಿಸಿದ್ದರೂ ಅದು ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ಅನ್ವಯಿಸುತ್ತಿರಲಿಲ್ಲ.

ಇದರಿಂದಾಗಿ ಪ್ಲಾಸ್ಟಿಕ್‌ ಬಾಟಲಿಗಳನ್ನು ಯಥೇತ್ಛವಾಗಿ ಬಳಸಿ ಎಲ್ಲೆಂದರಲ್ಲಿ ಎಸೆದು ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ. ಅಲ್ಲದೆ ಬಾಟಲಿ ನೀರು ಅಲ್ಪ ಪ್ರಮಾಣದಲ್ಲಿ ಬಳಕೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ವ್ಯರ್ಥವಾಗುತ್ತಿದೆ. ಇದನ್ನು ಖರೀದಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ದುಬಾರಿ ಖರ್ಚು ಕೂಡ ಆಗುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತತ್‌ಕ್ಷಣದಿಂದ ಜಾರಿ
ರಾಜ್ಯಾದ್ಯಂತ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ
ಸರಕಾರದಿಂದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳಲ್ಲಿ ತತ್‌ಕ್ಷಣದಿಂದ ಇಂತಹ ಬಾಟಲಿಗಳ ಬಳಕೆ, ಸರಬರಾಜು ನಿಷೇಧಿಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರನ್ನು ಸಂದರ್ಭಾನುಸಾರ  ಶುಚಿತ್ವ ರೀತಿಯಲ್ಲಿ ಗ್ಲಾಸ್‌, ಸ್ಟೀಲ್‌, ಪೇಪರ್‌ ಮತ್ತಿತರ ಪ್ಲಾಸ್ಟಿಕ್‌ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳ‌ಬೇಕು ಎಂದು ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜಕೀಯ)ಯ ಸರಕಾರದ ಅಧೀನ ಕಾರ್ಯದರ್ಶಿ ಕೆ.ಎಸ್‌. ರೋಹಿಣಿ ಆದೇಶ ಹೊರಡಿಸಿದ್ದಾರೆ.

ನೀರಿನ ವ್ಯವಸ್ಥೆ ಹೇಗೆ?
ಸರಕಾರಿ ಸಂಸ್ಥೆಗಳಲ್ಲಿ ಎಲ್ಲೆಲ್ಲಿ ಯಾವ ರೀತಿಯಲ್ಲಿ ನೀರು ವಿತರಿಸಬಹುದು ಎಂಬುದನ್ನು ಕೂಡ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 
– ಕಾರ್ಯಕ್ರಮಗಳಲ್ಲಿ 20 ಲೀಟರ್‌ ಅಥವಾ ಅದಕ್ಕೂ ಹೆಚ್ಚಿನ ಸಾಮರ್ಥ್ಯದ ಕ್ಯಾನ್‌ಗಳಲ್ಲಿ ಶುದ್ಧೀಕರಿಸಿದ  ನೀರನ್ನು ಇಡಬೇಕು. 

– ಕಚೇರಿಗಳಲ್ಲಿ  ಸಭೆ-ಸಮಾರಂಭ ಏರ್ಪಡುವ ಕೊಠಡಿಗಳಲ್ಲಿ ಕೇಂದ್ರ ಸರಕಾರದ ಜಾಲತಾಣ http://gem.gov.inನಲ್ಲಿ ಅನುಮೋದಿಸಲ್ಪಟ್ಟಿರುವ ಅಥವಾ ರಾಜ್ಯ ಸರಕಾರದ ಅಂಗೀಕೃತ ಸಂಸ್ಥೆಗಳಿಂದ ಖರೀದಿಸಿ ಆರ್‌ಒ ಮತ್ತು ನೀರು ಶುದ್ಧೀಕರಣ ಘಟಕ ಸ್ಥಾಪಿಸಿ ಪ್ಲಾಸ್ಟಿಕ್‌ ಅಲ್ಲದ ಲೋಟಗಳನ್ನಿಡಬೇಕು.

-ಎಲ್ಲ  ಸರಕಾರಿ ಹಾಗೂ ಸರಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳ ಕಚೇರಿಗಳಲ್ಲಿ  ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕೇಂದ್ರ ಸರಕಾರದ ಜಾಲತಾಣ http://gem.gov.inನಲ್ಲಿ ಅನುಮೋದಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ ಅಥವಾ ಯಾವುದಾದರೂ ಉತ್ತಮ ಆರ್‌ಒ ಶುದ್ಧ ನೀರಿನ ಘಟಕಗಳನ್ನು ವ್ಯವಸ್ಥಾಪನೆಗೊಳಿಸಬೇಕು.

ಪಂಚಾಯತ್‌ಗಳಿಗೆ ನಿರ್ದೇಶನ
ಪ್ಲಾಸ್ಟಿಕ್‌ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಿಗೂ ನಿರ್ದೇಶನ ನೀಡಲಾಗಿದೆ. ಇದೀಗ ಪ್ಲಾಸ್ಟಿಕ್‌ ನೀರಿನ ಬಾಟಲಿಗಳ ನಿಷೇಧವೂ ಜಾರಿಗೆ ಬರಲಿದೆ. ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಇಲ್ಲದೆ ನಡೆಯುವ ಮದುವೆಗಳಿಗೆ “ಗ್ರೀನ್‌ ಮ್ಯಾರೇಜ್‌’ ಪ್ರಮಾಣಪತ್ರವನ್ನು ಕೂಡ ನೀಡುತ್ತಿದ್ದೇವೆ.
– ಶ್ರೀನಿವಾಸ ರಾವ್‌, ಮುಖ್ಯ ಯೋಜನಾಧಿಕಾರಿ, ಜಿ.ಪಂ. 

ಸರಕಾರಿ ಕಚೇರಿ, ಸಮಾರಂಭಗಳಿಗೆ ಮಾತ್ರ ಸೀಮಿತವಾಗದೆ ಖಾಸಗಿ ಸಮಾರಂಭಗಳಲ್ಲಿಯೂ ನೀರಿನ ಬಾಟಲಿ ಸಹಿತ ಪ್ಲಾಸ್ಟಿಕ್‌ ಬಳಕೆ ನಿಷೇಧ ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಒಮ್ಮೆ ನಿಂತಿದ್ದ ಪ್ಲಾಸ್ಟಿಕ್‌ ಚೀಲಗಳ ಮಾರಾಟ ಮತ್ತೆ ಆರಂಭವಾಗಿದೆ. ಸಣ್ಣ ಅಂಗಡಿಗಳಿಗೆ ದಂಡದ ಭಯವಿದೆ. ಆದರೆ ದೊಡ್ಡ ಅಂಗಡಿಗಳಲ್ಲಿ ಬೇಕಾಬಿಟ್ಟಿಯಾಗಿ ನೀಡಲಾಗುತ್ತಿದೆ.
– ಸುಮಿತ್‌, ರೇಷ್ಮಾ ಶೆಟ್ಟಿ, ಜಿ.ಪಂ. ಸದಸ್ಯರು

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.