ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧವಾದರೆ ಸ್ವತ್ಛ ಭಾರತ ಯಶಸ್ವಿ


Team Udayavani, Dec 2, 2018, 3:51 PM IST

dvg.jpg

ದಾವಣಗೆರೆ: ಸಂಪೂರ್ಣವಾಗಿ ಪ್ಲಾಸ್ಟಿಕ್‌ ನಿಷೇಧ ಆದಾಗ ಮಾತ್ರ ಸ್ವತ್ಛ ಭಾರತದ ಪರಿಕಲ್ಪನೆ ಯಶಸ್ವಿಯಾಗಲು ಸಾಧ್ಯ ಎಂದು ಪಾಲಿಕೆ ಉಪಮೇಯರ್‌ ಕೆ. ಚಮನ್‌ಸಾಬ್‌ ಹೇಳಿದರು.

ಶನಿವಾರ, ಪಿ.ಜೆ ಬಡಾವಣೆಯ ಎಸ್‌ .ಎ.ಜೆ.ಬಿ. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ (ಶಿವಮೊಗ್ಗ, ಮಂಗಳೂರು), ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಸ್ವತ್ಛ ಭಾರತ (ನಗರ) ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಸ್ವತ್ಛ ಭಾರತ ಪರಿಕಲ್ಪನೆ ಬಗ್ಗೆ ಕನಸು ಕಂಡವರು. ಅದೇ ರೀತಿ ಕೇಂದ್ರ ಸರ್ಕಾರ ಸ್ವತ್ಛತೆ ಕುರಿತು ಜನರಿಗೆ ಜಾಗೃತಿ ಮೂಡಿಸಲು ಸ್ವತ್ಛ ಭಾರತ ಅಭಿಯಾನಕ್ಕೆ ಹೆಚ್ಚಿನ ಆದ್ಯತೆ ನೀಡಿ, ಪ್ರೋತ್ಸಾಹಿಸುತ್ತಿದೆ. ಆದರೆ ಈ ಅಭಿಯಾನ ಯಶಸ್ವಿಯಾಗಲು ಮೊದಲು ದೇಶ ಪ್ಲಾಸ್ಟಿಕ್‌ ಮುಕ್ತ ಆಗಬೇಕಿದೆ ಎಂದರು.

ದಾವಣಗೆರೆ ನಗರದಲ್ಲಿ ಪ್ರತಿನಿತ್ಯ ಸಾವಿರ 150 ಟನ್‌ ಕಸ ಉತ್ಪತ್ತಿ ಆಗುತ್ತಿದೆ. ಕಸ ವಿಲೇವಾರಿಗಾಗಿ 150 ಟಾಟಾ ಏಸ್‌ ವಾಹನ, 15 ಟ್ರ್ಯಾಕ್ಟರ್‌, 4 ಲಾರಿಗಳು ಇವೆ. ಆದರೂ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಸcತ್ಛತೆ ನಿರ್ವಹಣೆ ಮಾಡುವುದು ಮಹಾನಗರಪಾಲಿಕೆಗೆ ದೊಡ್ಡ ಸವಾಲಾಗಿದೆ ಎಂದು ಹೇಳಿದರು.

ಯಾರು ಏನೇ ಮಾಡಿದರೂ ಕೂಡ ಸ್ವತ್ಛತೆ ಆಗಲ್ಲ. ಈ ಬಗ್ಗೆ ಅರಿವು ಪ್ರತಿಯೊಬ್ಬರಲ್ಲಿ ಬರಬೇಕು. ನಮ್ಮ ಮನೆಗಳನ್ನು ಹೇಗೆ ಸ್ವತ್ಛತೆಯಿಂದ ಕಾಪಾಡಿಕೊಳ್ಳುತ್ತೇವೆಯೋ ಅದೇ ರೀತಿ ತಮ್ಮ ಬಡಾವಣೆ, ನಗರ ಸ್ವತ್ಛವಾಗಿಟ್ಟುಕೊಳ್ಳಲು ಪ್ರತಿಯೊಬ್ಬರೂ ಮುಂದಾದಲ್ಲಿ ಮಾತ್ರ ಈ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.
 
ಸಮಾಜ ಸೇವಕ ಟಿ.ಎಸ್‌. ಮಹಾದೇವಸ್ವಾಮಿ ಮಾತನಾಡಿ, ಪ್ಲಾಸ್ಟಿಕ್‌ ನಿರ್ಮೂಲನೆ ಸರ್ಕಾರದಿಂದಲೇ ಸಾಧ್ಯವಿಲ್ಲ. ವಿದ್ಯಾವಂತರಾದ ನಾವೇ ಅವಿದ್ಯಾವಂತರಂತೆ ನಡೆದುಕೊಂಡರೇ ಹೇಗೆ? ಮೊದಲು ವಿದ್ಯಾವಂತರು ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್‌ ಬ್ಯಾಗ್‌ ಬಳಕೆ ಬಿಡಬೇಕು. ಪರಿಸರಕ್ಕೆ ಪೂರಕವಾದ ಬ್ಯಾಗ್‌ಗಳನ್ನು ಬಳಕೆ ಮಾಡಿ ಇತರರಿಗೂ ಪ್ರೇರಣೆ ಆಗಬೇಕು ಎಂದು ಹೇಳಿದರು.

ಸ್ವತ್ಛ ಭಾರತ ಸಂಯೋಜಕಿ ಡಾ| ಶಾಂತಭಟ್‌ ಮಾತನಾಡಿ, ಸ್ವತ್ಛತೆ ಕಾರ್ಯ ಕೇವಲ ಒಂದು ದಿನಕ್ಕೆ ಸಿಮೀತ ಆಗಬಾರದು. ನಿತ್ಯವೂ ನಡೆಯಬೇಕು. ಮನುಷ್ಯ ಗೊಬ್ಬರಕ್ಕಾಗಿ ಅಲೆದಾಡದೇ ತಮ್ಮ ಮನೆಯಲ್ಲೇ ದೊರೆಯುವ ಶೇ. 80ರಷ್ಟು ಹಸಿಕಸ ಹಾಗೂ ರಸ್ತೆ, ಅಂಗಳದಲ್ಲಿ ಸಿಗುವ ಒಣ ಕಸ ಬೇರ್ಪಡಿಸಿ ಸೂಕ್ತ ರೀತಿಯಲ್ಲಿ ಸಂಸ್ಕರಿಸಿ, ಸಾವಯವ ಗೊಬ್ಬರ ತಯಾರಿಸಿಕೊಳ್ಳಬಹುದು
ಎಂದು ಸಲಹೆ ನೀಡಿದರು.ಈ ರೀತಿ ತಯಾರಿಸಿದ ಗೊಬ್ಬರವನ್ನು ಮನೆ ಅಂಗಳದ ಗಿಡ-ಮರಗಳಿಗೆ, ತಾರಸಿ ತೋಟಕ್ಕೆ ನೀಡಿದರೆ ಭೂಮಿಯು ಸಮೃದ್ಧವಾಗುತ್ತದೆ. ಜೊತೆಗೆ ಹಸಿರೀಕರಣದಿಂದ ಶುದ್ಧ ಗಾಳಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಕ್ಷೇತ್ರ ಜನಸಂಪರ್ಕ ಪ್ರಚಾರಾಧಿಕಾರಿ ಜಿ. ತುಕರಾಮಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಾಲಿಕೆ ಉಪ ಆಯುಕ್ತ
ರವೀಂದ್ರ ಬಿ. ಮಲ್ಲಾಪುರ, ಕಾಲೇಜು ಪ್ರಾಂಶುಪಾಲ ಎಸ್‌. ಪ್ರದೀಪ್‌ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.