ರೈತರಿಗೆ ಶೀಘ್ರ ಸಾಲ ತೀರುವಳಿ ಪತ್ರ


Team Udayavani, Dec 3, 2018, 11:14 AM IST

m5-raitarige.jpg

ಕೆ.ಆರ್‌.ನಗರ: ರಾಜ್ಯದಲ್ಲಿ ಪ್ರತಿ ತಿಂಗಳಿಗೊಮ್ಮೆ ರೈತರ ಸಭೆ ಕರೆದು, ಸಾಲ ತೀರಿಸುವುದು ಮತ್ತು ಬೆಳೆ ಬಗ್ಗೆ ಸಲಹೆ ಸಹಕಾರವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೇಳಲಿದ್ದಾರೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್‌ ಹೇಳಿದರು.

ತಾಲೂಕಿನ ಕರ್ತಾಳು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ನಡೆಸಿದ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳಿಂದ ಜನತೆಯ ದೊಡ್ಡ ಮಟ್ಟದ ಸಮಸ್ಯೆಗಳನ್ನು ಸುಲಭವಾಗಿ ಬಗೆ ಹರಿಸಲು ಸಾಧ್ಯವಾಗಿದೆ. ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸುವುದರಿಂದ ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಬಳಿ ಅಲೆದಾಡುವುದು ತಪ್ಪಿದಂತಾಗಿದೆ ಎಂದು ಹೇಳಿದರು.   

ಸತತ ಮೂರು ಬಾರಿ ಆಯ್ಕೆ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗಾಗಲೇ ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದಾರೆ, ಮುಂದಿನ ಅಧಿವೇಶನ ಪ್ರಾರಂಭವಾಗುವುದರೊಳಗೆ ರೈತರಿಗೆ ಅದರ ತೀರುವಳಿ ಪತ್ರ ವಿತರಿಸಲಾಗುವುದು. ಕೆ.ಆರ್‌.ನಗರ ಕ್ಷೇತ್ರದಲ್ಲಿ ಸತತ ಮೂರು ಬಾರಿ ಶಾಸಕನ್ನಾಗಿ ಆಯ್ಕೆ ಮಾಡಿರಲಿಲ್ಲ. ಆದರೆ, ತನ್ನ ಪ್ರಾಮಾಣಿಕತೆಯನ್ನು ಮೆಚ್ಚಿ ಮೂರನೇ ಬಾರಿ ಆಯ್ಕೆ ಮಾಡಿ ಸಚಿವನಾಗಲು ಕಾರಣರಾಗಿದ್ದೀರಿ.

ಈ ತಾಲೂಕಿನ ಅಭಿವೃದ್ಧಿ ಮಾಡುವ ಮೂಲಕ ತಮ್ಮಗಳ ಋಣ ತೀರಿಸುತ್ತೇನೆ ಎಂದು ಭರವಸೆ ನೀಡಿದರು. ಈ ಭಾಗದಲ್ಲಿ 6 ಕೋಟಿ ರೂ.ನಲ್ಲಿ ಕೆಇಬಿ ಉಪಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿಗಳು ಮಂಜೂರಾತಿ ನೀಡಿದ್ದಾರೆ. ಹನಸೋಗೆ ಪಶು ವೈದ್ಯ ಆಸ್ಪತ್ರೆಗೆ 32 ಲಕ್ಷ ರೂ., ಈಗಾಗಲೇ ತಾಲೂಕಿನಲ್ಲಿ ಹಲವು ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಉಳಿದ ರಸ್ತೆ ಅಭಿವೃದ್ಧಿಗೆ ಶೀಘ್ರ ಗಮನ ಹರಿಸಲಾಗುವುದು ಎಂದು ಹೇಳಿದರು.

ಗೋವಿಂದಶೆಟ್ಟಿ ಮನೆಯಲ್ಲಿ ವಾಸ್ತವ್ಯ: ಸಚಿವರು ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಲ್ಲದೆ, ಸ್ಥಳದಲ್ಲೇ ಕುಂದುಕೊರತೆ ಬಗೆ ಹರಿಸಲು ಮುಂದಾದರು.

ನಂತರ ಆಗಮಿಸಿದ್ದ ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೂ ಊಟದ ವ್ಯವಸ್ಥೆ ಒದಗಿಸಲಾಗಿತ್ತು. ಸಹ ಪಕ್ತಿಯಲ್ಲಿಯೇ ಗ್ರಾಮದ ಜನತೆಯೊಂದಿಗೆ ಕುಳಿತು ಸಚಿವ ಸಾ.ರಾ.ಮಹೇಶ್‌ ಊಟ ಸವಿದರು. ನಂತರ ಕುಂಬಾರ ಸಮಾಜದ ಗೋವಿಂದಶೆಟ್ಟಿ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದರು.

ಕಾರ್ಯಕ್ರಮದಲ್ಲಿ ಜಂಟಿ ನಿರ್ದೇಶಕ ಮಹಂತೇಶ್‌, ಉಪವಿಭಾಗಾಧಿಕಾರಿ ನಿತಿನ್‌, ತಹಶೀಲ್ದಾರ್‌ ಪ್ರಶಾಂತ್‌, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಬಿಂದ್ಯಾ, ಎಎಸ್‌ಪಿ ಅರುಣಾಂಗ್ಯೂ ಗಿರಿ, ಪಿಡಿಎಲ್‌ಆರ್‌ ರಮ್ಯಾ, ಸಿಡಿಪಿಒ ಸುಮಿತ್ರ, ಬಿಇಒ ರಾಜು, ಅಬಕಾರಿ ನಿರೀಕ್ಷಕಿ ಎಚ್‌.ಡಿ.ರಮ್ಯಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್‌,

ಇಒ ಲಕ್ಷ್ಮೀಮೋಹನ್‌, ಪಿಡಬ್ಲೂಡಿ ಎಂಜಿನಿಯರ್‌ ಟಿ.ಡಿ.ಪ್ರಸಾದ್‌, ವಲಯ ಅರಣ್ಯಾಧಿಕಾರಿ ಕುಮಾರ್‌, ಹಾರಂಗಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಚಂದ್ರಶೇಖರ್‌, ಸಹಾಯಕ ಎಂಜಿನಿಯರ್‌ಗಳಾದ ಎಸ್‌.ಪ್ರಕಾಶ್‌, ಅಭಿಲಾಶ್‌, ಕಿರಣ್‌, ಇಲಾಖೆ ಸಹಾಯಕ ನಿರ್ದೇಶಕ ರಂಗರಾಜನ್‌, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ, ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನಸೋಗೆ ನಾಗರಾಜು ಇದ್ದರು.

ಟಾಪ್ ನ್ಯೂಸ್

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.