ರೆಸಾರ್ಟ್ ರಾಜಕಾರಣ ಮತ್ತೆ ಶುರು?;ಪ್ರಿಪ್ಲ್ಯಾನ್ ಮಾಡಿದ ಜಾರಕಿಹೊಳಿ
Team Udayavani, Dec 3, 2018, 2:07 PM IST
ಬೆಳಗಾವಿ: ಸಂಪುಟ ವಿಸ್ತರಣೆಗೆ ಕಸರತ್ತು ಆರಂಭವಾಗಿರುವ ವೇಳೆಯಲ್ಲೇ ಕಾಂಗ್ರೆಸ್ನ ಪ್ರಭಾವಿ ಶಾಸಕ ಸತೀಶ್ ಜಾರಕಿಹೊಳಿ ಅವರು ರೆಸಾರ್ಟ್ಗೆ ತೆರಳಿ ಆಬಳಿಕ ನೀಡಿರುವ ಹೇಳಿಕೆ ಮೈತ್ರಿ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ನಡುಕ ಹುಟ್ಟಿಸುವಂತಿದೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ‘ನಾನು ನಿನ್ನೆ ರೆಸಾರ್ಟ್ಗೆ ತೆರಳಿದ್ದು ನಿಜ. ಮದುವೆ ಮುಗಿಸಿ ಬರುವಾಗ ತೆರಳಿದ್ದೆ.ನಮ್ಮ ಶಾಸಕರನ್ನು ಒಯ್ಯಲಿಕ್ಕೆ, ಪಕ್ಷಾಂತರ ಮಾಡಲಿಕ್ಕೆ ಅಲ್ಲ. ಟೂರ್ ನಡೆಸಲು ಪ್ರಿಪ್ಲ್ಯಾನ್ ಮಾಡುವ ಸಲುವಾಗಿ ತೆರಳಿದ್ದೆ .ಮುಂದೆ ಉಪಯೋಗಕ್ಕೆ ಬರುತ್ತದೆ’ ಎಂದು ನಗುನಗುತ್ತಾ ಬಾಂಬ್ ಸಿಡಿಸಿದ್ದಾರೆ.
ಖಾನಾಪುರದ ಕಣಕುಂಬಿ ಗ್ರಾಮದಲ್ಲಿರುವ ಸಾತೇವಾರಿ ರೆಸಾರ್ಟ್ಗೆ ಜಾರಕಿಹೊಳಿ ಅವರು ತೆರಳಿರುವ ಪೋಟೋಗಳು ವೈರಲ್ ಆಗುವ ಮೂಲಕ ಹಲವು ಊಹಾಪೋಹಕ್ಕೆ ಕಾರಣವಾಗಿತ್ತು. ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗುತ್ತಾರೆ ಎನ್ನಲಾಗಿದೆ.
ಈಗಾಗಲೆ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಕುರಿತು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ಅಸಮಾಧಾನ ಹೊಂದಿರುವುದು ಬೆಳಕಿಗೆ ಬಂದಿದೆ.
ಜಾರಕಿಹೊಳಿ ಸಹೋದರರು ರಾಜಕೀಯದಲ್ಲಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವ ನಿರೀಕ್ಷೆ ರಾಜಕಾರಣದಲ್ಲಿ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ