ಬಂಡಾಯ ಸಾಹಿತ್ಯಕ್ಕಿಲ್ಲ ಚೌಕಟ್ಟಿನ ಹಂಗು: ದೇವೇಂದ್ರಪ್ಪ


Team Udayavani, Dec 3, 2018, 2:23 PM IST

ray-2.jpg

ರಾಯಚೂರು: ಆರಂಭದಲ್ಲಿ ದಲಿತ ಸಾಹಿತ್ಯಕ್ಕೆ ಸಾತ್ವಿಕ ನೆಲೆಗಟ್ಟಿಲ್ಲ ಎಂದು ಅನೇಕರು ಜರಿದರು. ಆದರೆ, ಬೇರೆ ಸಾಹಿತ್ಯದಂತೆ ಇದಕ್ಕೆ ಯಾವುದೇ ಚೌಕಟ್ಟು, ಗಡಿ ರೇಖೆಗಳಿಲ್ಲ ಎಂಬುದನ್ನು ಅರಿಯಬೇಕು ಎಂದು ಗಂಗಾವತಿ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ದೇವೇಂದ್ರಪ್ಪ ಜಾಜಿ ಹೇಳಿದರು.

ನಗರದ ರಂಗಮಂದಿರದಲ್ಲಿ ರವಿವಾರ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದ ಗೋಷ್ಠಿಯಲ್ಲಿ ದಲಿತ ಬಂಡಾಯ ಸಾಹಿತ್ಯ; ಸೈದ್ಧಾಂತಿಕ ನೆಲೆಗಟ್ಟು ಎಂಬ ವಿಷಯದ ಕುರಿತು ಅವರು ಮಾತನಾಡಿದರು. 

70ರ ದಶಕದಲ್ಲಿ ಹುಟ್ಟಿಕೊಂಡ ಬಂಡಾಯ ಸಾಹಿತ್ಯದ ಚಳವಳಿ ನಾನಾ ಆಯಾಮ ಪಡೆಯಿತು. ಆದರೆ, ಇದನ್ನು ಒಪ್ಪದ ವ್ಯವಸ್ಥೆ ಅದೊಂದು ಸಾಹಿತ್ಯವೇ ಅಲ್ಲ ಎನ್ನುವಂತೆ ಮಾಡಿತ್ತು. ಅದಕ್ಕೂ ಮುನ್ನ ನಾಡಿನ ಮೇರು ಸಾಹಿತಿಗಳು ಕುಲಭೇದದ ಬಗ್ಗೆ ಬರೆದಿದ್ದರು ಎಂಬುದನ್ನು ಅರಿಯಬೇಕು. ಹರಿಹರ, ರಾಘವಾಂಕ, ವಾಲ್ಮೀಕಿಯಂಥವರು ತಮ್ಮ ಕೃತಿಗಳಲ್ಲಿ ಕುಲಭೇದವನ್ನು ಪ್ರಶ್ನಿಸಿದ್ದಾರೆ ಎಂದು ವಿವರಿಸಿದರು.

ದಲಿತ ಬಂಡಾಯ ಸಾಹಿತ್ಯ ಸ್ಥಗಿತಗೊಂಡಿಲ್ಲ. ಇಂದಿಗೂ ಅನೇಕ ಸಾಹಿತಿಗಳು ತಮ್ಮೊಳಗಿನ ತುಮುಲಗಳನ್ನು ಬರಹಗಳಲ್ಲಿ ದಾಖಲಿಸುತ್ತಿದ್ದಾರೆ. ಸಾಫ್ಟವೇರ್‌ ಯುಗದಲ್ಲಿ ನಾಜೂಕಾದ ಶೋಷಣೆಗಳು ದಾಳಿ ಮಾಡುತ್ತಲೇ ಇವೆ. ಆದರೆ, ಬಂಡಾಯದ ಜತೆಗೆ ನಾವಿದ್ದೇವೆ ಎನ್ನುವವರ ಬಗ್ಗೆಯೂ ಜಾಗರೂಕತೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ದಲಿತ ಸಾಹಿತ್ಯ ಹಾಗೂ ಸಾಮಾಜಿಕ ತಲ್ಲಣಗಳ ಕುರಿತು ಮಾತನಾಡಿದ ದೇವೇಂದ್ರ ಹೆಗಡೆ, ಈಗ ನಮ್ಮೆದುರು ಸಂಕಲ್ಪಗಳೇ ಇಲ್ಲ ಎನ್ನುವ ತಲ್ಲಣ ಕಾಡುತ್ತಿದೆ. ಸಾಹಿತ್ಯದ ಬಗ್ಗೆ ಮಾತನಾಡಿ ಸುಮ್ಮನಾಗುತ್ತಿದ್ದೇವೆ. ಈಗ ಮನುವಾದ ಮತ್ತಷ್ಟು ಆಳಕ್ಕೆ ಬೇರು ಬಿಟ್ಟು ತಳದಿಂದ ಬೆಳೆಯುತ್ತಿದೆ. ನಮ್ಮ ಮನೆ ಪಕ್ಕದಲ್ಲಿ ಹಿಂದುತ್ವವಾದ ಬೆಳೆಯುತ್ತಿದ್ದರೆ ನಾವು ಮಾತ್ರ ನಮ್ಮ ವೈಚಾರಿಕೆ ನೆಲೆಗಟ್ಟಿನಲ್ಲಿ ಬೆಳೆಯದೆ ಹಿಂದುಳಿಯುತ್ತಿದ್ದೇವೆ ಎಂದು ವಿಷಾದಿಸಿದರು. ಆಶಯ ನುಡಿಗಳನ್ನಾಡಿದ ಪತ್ರಕರ್ತ ನಾಗತಿಹಳ್ಳಿ ನಾಗರಾಜ, ಈಗ ವ್ಯವಸ್ಥೆಯನ್ನು ಪ್ರಶ್ನಿಸಿದವರನ್ನು ನಗರ ನಕ್ಸಲ್‌ಗಳು ಎಂಬ ಹಣೆಪಟ್ಟಿ ಕಟ್ಟಲಾಗುತ್ತಿದೆ.

ದಲಿತರನ್ನು ನೇರವಾಗಿ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಸಮಾನತೆ ಬೇಕಾದರೆ ಸವಾಲು ಎದುರಿಸಲೇಬೇಕು. ಪ್ರಗತಿಪರರು ಕೂಡ ಕೋಮುವಾದಿಗಳ ಜತೆ ಕೈ ಜೋಡಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆತಂಕ ವ್ಯಕ್ತಪಡಿಸಿದರು. 

ಸಮಾಜವಾದ ಎಂದರೆ ದೇಶದ್ರೋಹ ಎನ್ನುವಂತಾಗಿದೆ. ಯುವಕರು ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಬೇಕು. ಕೇವಲ ಕಾಲಹರಣಕ್ಕೆ ಮಾತ್ರವಲ್ಲದೇ ನಮ್ಮತನ ಬಲಗೊಳ್ಳಲು ಬಳಸಿಕೊಳ್ಳಬೇಕು ಎಂದು ಹೇಳಿದರು.

ಹಿರಿಯ ಸಾಹಿತಿ ಅಲ್ಲಪ್ರಭು ಬೆಟ್ಟದೂರು ಅಧ್ಯಕ್ಷತೆ ವಹಿಸಿದ್ದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಮಸ್ಕಿ, ಸಾಹಿತಿ ವೀರ ಹನುಮಾನ, ಮಲ್ಲಿಕಾರ್ಜುನ ಶಿಖರಮಠ, ಎಂ.ಆರ್‌. ಭೇರಿ, ಚಾಂದಪಾಷಾ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.