ಲೈಂಗಿಕ ಕಿರುಕುಳ ಬಹಿರಂಗ;ಅಪ್ರಾಪ್ತ ವಯಸ್ಕಳಿಗೆ ಬೆಂಕಿ ಹಚ್ಚಿ ಕೊಲೆ!
Team Udayavani, Dec 3, 2018, 3:15 PM IST
ವಿಜಯಪುರ: ಬೆಚ್ಚಿ ಬೀಳುವ ಅಂತ್ಯಂತ ಕ್ರೂರ ಘಟನೆಯೊಂದರಲ್ಲಿ ಲೈಂಗಿಕ ಕಿರುಕುಳ ನೀಡಿದ್ದನ್ನು ಬಹಿರಂಗ ಪಡಿಸಿದ್ದಕ್ಕಾಗಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳನ್ನು ಬೆಂಕಿ ಹಚ್ಚಿ ಕೊಂದ ಘಟನೆ ನಡೆದಿದೆ.
ರತ್ನಾಪುರ ಗ್ರಾಮ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ರಾಕ್ಷಸೀ ಕೃತ್ಯ ನಡೆದಿದ್ದು, ವಿವಾಹಿತ ಮತ್ತು ಇನ್ನೋರ್ವ ಯುವಕ 14 ರ ಹರೆಯದ ಬಾಲಕಿಗೆ ನಿರಂತರವಾಗಿ ಕಿರುಕುಳ ನೀಡಿದ್ದರು, ಮಾತ್ರವಲ್ಲದೆ ಬಹಿರಂಗ ಪಡಿಸದಂತೆ ಬೆದರಿಕೆಯನ್ನೂ ಹಾಕಿದ್ದರು.
ಬಾಲಕಿ ಪೋಷಕರ ಬಳಿಕ ತನಗೆ ನಿರಂತರ 2 ತಿಂಗಳಿನಿಂದ ನೀಡುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದು, ಆ ಬಳಿಕ ಆಕ್ರೋಶಗೊಂಡ ಇಬ್ಬರು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಶಂಕರ ಹಿಪ್ಪರಕರ (24) ಮತ್ತು ಮೋಹನ್ ಎಡವೆ (19)ಎನ್ನುವರು ಕೃತ್ಯ ಎಸಗಿರುವ ಆರೋಪಿಗಳಾಗಿದ್ದು ಇಬ್ಬರನ್ನೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಕರ ವಿವಾಹಿತನಾಗಿದ್ದಾನೆ.
ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರಿದಿದೆ. ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ನಮ್ಮ ಮಗಳಿಗಾದ ರೀತಿಯಲ್ಲೇ ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು