ಉದ್ಯಾನ ಸ್ವಚ್ಛತೆಗೆ ಯುವಕರ ಆಸಕ್ತಿ 


Team Udayavani, Dec 3, 2018, 4:11 PM IST

3-december-15.gif

ಗದಗ: ಕ್ಲೀನ್‌ ಸಿಟಿಗಳನ್ನಾಗಿ ಪರಿವರ್ತಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾಕಷ್ಟು ಹಣ ಖರ್ಚು ಮಾಡುತ್ತಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಸಾಕಾರಗೊಳ್ಳುತ್ತಿಲ್ಲ. ಇನ್ನು ಉದ್ಯಾನಗಳ ಸ್ವಚ್ಛತೆ ಹಾಗೂ ಅಭಿವೃದ್ಧಿ ವಿಚಾರದಲ್ಲಿ ನಗರಸಭೆಯತ್ತ ಬೊಟ್ಟು ಮಾಡುವವರೇ ಹೆಚ್ಚು. ಆದರೆ, ಹುಡ್ಕೋ ಕಾಲೋನಿಯ ಸಮಾನ ಮನಸ್ಕರರು ‘ಸ್ನೇಹ ಬಳಗ’ದ ಹೆಸರಲ್ಲಿ ಪ್ರತೀ ರವಿವಾರ ಒಂದೊಂದು ಉದ್ಯಾನದ ಸ್ವಚ್ಛತೆಗೆ ಧುಮುಕಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಅಭಿವೃದ್ಧಿ ವಂಚಿತ ಹಾಗೂ ಸ್ಥಳೀಯರ ಅಸಡ್ಡೆಯಿಂದಾಗಿ ತ್ಯಾಜ್ಯವಿಲೇವಾರಿ ಕೇಂದ್ರಗಳಾಗಿ ಮಾರ್ಪಟ್ಟಿವೆ. ಇದರಿಂದ ಇಲ್ಲಿನ ವಾರ್ಡ್‌ ನಂ. 33ರ ವ್ಯಾಪ್ತಿಯಲ್ಲಿರುವ ಉದ್ಯಾನಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಈ ವಾರ್ಡ್‌ವೊಂದರಲ್ಲೇ ಸಣ್ಣದು-ದೊಡ್ಡದು ಸೇರಿ 30ಕ್ಕೂ ಹೆಚ್ಚು ಉದ್ಯಾನಗಳಿವೆ. ಕೆಲ ಉದ್ಯಾನಗಳಿಗೆ ಫೆನ್ಸಿಂಗ್‌, ಫ್ಲೆàವರ್ ಫುಟ್‌ಪಾತ್‌, ಒಂದೆರಡು ಸಿಮೆಂಟ್‌ ಆಸನಗಳನ್ನು ಅಳವಡಿಸಿದ್ದು ಬಿಟ್ಟರೆ ಬಹುತೇಕ ಬಯಲು ಪ್ರದೇಶ. ಮುಳ್ಳುಕಂಟಿ ಬೆಳೆದಿದ್ದು, ಜನರು ಉದ್ಯಾನಗಳತ್ತ ಸುಳಿಯದಂತಾಗಿದ್ದಾರೆ.

ಸ್ವಚ್ಛತೆಗೆ ಧುಮುಕಿದ ಸ್ನೇಹ ಬಳಗ: ಇಲ್ಲಿನ ಉದ್ಯಾನಗಳು ಮತ್ತು ದೇವಸ್ಥಾನ ಆವರಣಗಳನ್ನು ಸ್ವಚ್ಛಗೊಳಿಸುವಂತೆ ಹಲವು ಬಾರಿ ನಗರಸಭೆಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದರೆ, ಉದ್ಯಾನಗಳನ್ನು ಸ್ವಚ್ಛಗೊಳಿಸಿ, ಹಸಿರಿನಿಂದ ಕಂಗೊಳಿಸುವಂತೆ ಮಾಡಬೇಕೆಂದು ಯುವಕರು ಉದ್ದೇಶಿಸಿದ್ದರು.

‘ಬಾಬು ಎನ್‌ ಶಿದ್ಲಿಂಗ್‌ ಸ್ನೇಹ ಬಳಗ’ ಎಂಬ ಗುಂಪಿನ ಹೆಸರಲ್ಲಿ ಒಗ್ಗೂಡಿರುವ ಸರಕಾರಿ ಹಾಗೂ ಖಾಸಗಿ ನೌಕರರು, ವಿದ್ಯಾರ್ಥಿಗಳು ಸೇರಿದಂತೆ 20ರಿಂದ 30 ಜನರು ಸಲಿಕೆ, ಪಿಕಾಸಿ, ಬುಟ್ಟಿಗಳನ್ನು ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಧುಮುಕ್ಕುತ್ತಿದ್ದಾರೆ. ಪ್ರತೀ ರವಿವಾರ ಒಂದೊಂದು ಉದ್ಯಾನ, ದೇವಸ್ಥಾನಗಳನ್ನು ಆಯ್ದುಕೊಂಡು ಬೆಳಗ್ಗೆ 7 ರಿಂದ 10ರ ವರೆಗೆ ಸುಮಾರು 3 ಗಂಟೆಗಳ ಕಾಲ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಯುವಕರೊಂದಿಗೆ ಸ್ಥಳೀಯರು ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸುತ್ತಿದ್ದಾರೆ.

ಕಳೆದ ನ. 25ರಿಂದ ಉದ್ಯಾನ ಮತ್ತು ದೇವಸ್ಥಾನಗಳ ಸ್ವಚ್ಛತಾ ಕಾರ್ಯ ಆರಂಭಿಸಿರುವ ಸ್ನೇಹ ಬಳಗದ ಸದಸ್ಯರು, ನ. 25ರಂದು ಪಂಚಮುಖೀ ದೇವಸ್ಥಾನ, ಡಿ. 2ರಂದು ಕೇಶವ ನಗರದ ಬನ್ನಿಮಹಾಂಕಾಳಿ ದೇವಸ್ಥಾನ ಹಾಗೂ ಶಿವಾಜಿ ಉದ್ಯಾನವನ್ನು ಶುಚಿಗೊಳಿಸಿದ್ದಾರೆ. ವಾಯು ವಿಹಾರಿಗಳ ಅನುಕೂಲಕ್ಕಾಗಿ ಉದ್ಯಾನದಲ್ಲಿ ಬೆಳೆದು ನಿಂತಿರುವ ಬೇಲಿ ಗಿಡಗಳು, ಕಳೆ ಹಾಗೂ ರಾಶಿ ರಾಶಿ ಕಸ, ಕಟ್ಟಡಗಳ ತ್ಯಾಜ್ಯವನ್ನೂ ತೆರವುಗೊಳಿಸುತ್ತಿದ್ದಾರೆ. ನೀರಿನ ಲಭ್ಯತೆಯಿರುವ ಉದ್ಯಾನಗಳಲ್ಲಿ ಸಸಿ ನೆಟ್ಟು, ಅವುಗಳನ್ನು ನಿರ್ವಹಣೆ ಮಾಡುವಂತೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವುದು ವಿಶೇಷ.

ಹಸಿರೀಕರಣಕ್ಕೆ ಒತ್ತು: ಸ್ನೇಹ ಬಳಗದ ಸದಸ್ಯರು ನಿಸ್ವಾರ್ಥವಾಗಿ ಕಳೆದ ಎರಡು ವರ್ಷಗಳಿಂದ ಅವಳಿ ನಗರದ ವಿವಿಧೆಡೆ ಮರಗಿಡಗಳನ್ನು ಬೆಳೆಸುತ್ತಿದ್ದಾರೆ. ಶಹಪುರ ಪೇಟೆಯ ಐತಿಹಾಸಿಕ ಬಾವಿ, ಬೆಟಗೇರಿ ಸ್ಮಶಾನದ ಕಾಂಪೌಂಡ್‌, ಗಾಂಧಿ  ವೃತ್ತ, ಸ್ಟೇಷರ್‌ ರೋಡ್‌ನ‌ ಸಾರ್ವಜನಿಕ ಶೌಚಾಲಯ ಮತ್ತು ಮೂತ್ರಾಲಯಗಳಿಗೆ ರೇಖಾಚಿತ್ರಗಳ ಬಿಡಿಸಿ, ಜನಾಕರ್ಷಿಸುವಂತೆ ಮಾಡಿದ್ದಾರೆ. ಅದರ ಮುಂದುವರಿದ ಭಾಗವಾಗಿ ಉದ್ಯಾನಗಳ ಸ್ವಚ್ಛತೆ ಕೈಗೊಂಡಿದ್ದೇವೆ ಎಂಬುದು ಸ್ನೇಹ ಬಳಗದ ಸದಸ್ಯರ ಮಾತು.

ಇನ್ನು, ಸ್ನೇಹ ಬಳಗದ ಕಾರ್ಯಕ್ಕೆ ಡಿ. 2ರಂದು ನಗರಸಭೆಯೂ ಕೈಜೋಡಿಸಿದೆ. ಸ್ನೇಹ ಬಳಗದ ಕಾರ್ಯಕ್ಕೆ ನೆರವಾಗುವಂತೆ ಜೆಸಿಬಿ, ಪೌರ ಕಾರ್ಮಿಕರನ್ನೂ ಕಳುಹಿಸಿದೆ. ಒಟ್ಟಾರೆ, ಸಾರ್ವಜನಿಕರ ಸಹಭಾಗಿತ್ವವಿದ್ದರೆ ಯಾವುದೇ ಕೆಲಸ ಕಷ್ಟಸಾಧ್ಯವಲ್ಲ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ವಾರ್ಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು, ವರ್ತಕರು ಸೇರಿದಂತೆ ಪ್ರತಿಷ್ಠಿತರು ವಾಸಿಸುತ್ತಿದ್ದಾರೆ. ಬಡಾವಣೆಯಲ್ಲಿ 35ಕ್ಕೂ ಹೆಚ್ಚು ಉದ್ಯಾನಗಳಿದ್ದರೂ ಅಭಿವೃದ್ಧಿ ಕಂಡಿಲ್ಲ. ಕನಿಷ್ಠಪಕ್ಷ ಸ್ವಚ್ಛಗೊಳಿಸುವುದರಿಂದ ವಾಯುವಿಹಾರಿಗಳಿಗೆ ಅನುಕೂಲವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಉದ್ಯಾನಗಳಿಗೆ ನೀರಿನ ಸಂಪರ್ಕ ಒದಗಿಸಿದರೆ, ಸ್ಥಳೀಯರ ನೆರವಿನಿಂದ ಗಿಡಗಳು ಬೆಳೆಸುವುದಕ್ಕೂ ನಾವು ಸಿದ್ಧರಿದ್ದೇವೆ.
 ಬಾಬು ಎನ್‌. ಸಿದ್ಲಿಂಗ್‌, ಸ್ನೇಹ ಬಳಗದ ಪ್ರಮುಖ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.