ಸಮ್ಮೇಳನ ನಗರ ಸೌಂದರ್ಯಕ್ಕೆ 5 ಕೋಟಿ
Team Udayavani, Dec 3, 2018, 5:10 PM IST
ಧಾರವಾಡ: ನಗರದಲ್ಲಿ ಜ. 4,5 ಹಾಗೂ 6ರಂದು ನಡೆಯುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ನಗರ ಸೌಂದರ್ಯಕ್ಕೆ ಆದ್ಯತೆ ನೀಡಲಿದ್ದು, ಹೆಚ್ಚುವರಿಯಾಗಿ ಐದು ಕೋಟಿ ಅನುದಾನ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಕೃಷಿ ವಿವಿ ಆವರಣಕ್ಕೆ ರವಿವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮೇಳನ ಯಶಸ್ಸಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕಸಾಪ ಪದಾಧಿಕಾರಿಗಳು ಸಮನ್ವಯದಿಂದ ಸೂಕ್ಷ್ಮ ವಿಚಾರಗಳನ್ನು ಸಹ ಮುನೋ°ಟದಿಂದ ಆಲೋಚಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಶುಚಿತ್ವ, ಶೌಚಾಲಯ ನಿರ್ಮಾಣ, ನೀರು ಪೂರೈಕೆ, ವಿದ್ಯುದಲಂಕಾರ ಸಮರ್ಪಕವಾಗಿ ಇರಬೇಕು. ಗೃಹ ಕೈಗಾರಿಕೆಗಳು ಮತ್ತು ಸ್ವಸಹಾಯ ಸಂಘಗಳ ಉತ್ಪನ್ನಗಳ ಮಾರಾಟಕ್ಕೆ ಮಳಿಗೆ ನೀಡಬೇಕು. ಸಮ್ಮೇಳನ ಹಿನ್ನೆಲೆಯಲ್ಲಿ ಡಿ.25ರಿಂದ ಸ್ವಚ್ಛತಾ ಆಂದೋಲನ ಆರಂಭಿಸಬೇಕು ಎಂದು ಸೂಚಿಸಿದರು.
ಮುಖ್ಯ ವೇದಿಕೆ ನಿರ್ಮಾಣ ಸ್ಥಳ, ಮಾಧ್ಯಮ ಕೇಂದ್ರ, ಭೋಜನಾಂಗಣ, ಪುಸ್ತಕ, ವಸ್ತು ಪ್ರದರ್ಶನ ಮಳಿಗೆಗಳು, ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣ ಮತ್ತಿತರ ಸ್ಥಳಗಳಿಗೆ ಸಚಿವರು ಭೇಟಿ ನೀಡಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ವಿಧಾನ ಪರಿಷತ್ ಮಾಜಿ ಸದಸ್ಯ ವೀರಣ್ಣ ಮತ್ತಿಕಟ್ಟಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಸಿಇಒ ಡಾ| ಸತೀಶ ಬಿ.ಸಿ., ಹು-ಧಾ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ, ಎಸ್ಪಿ ಜಿ.ಸಂಗೀತಾ, ಅಪರ ಜಿಲ್ಲಾಕಾರಿ ಇಬ್ರಾಹಿಂ ಮೈಗೂರ, ಮಹಾನಗರ ಪಾಲಿಕೆ ಆಯುಕ್ತ ಶಕೀಲ್ ಅಹ್ಮದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !