ಸತ್ಯಾಂಶ ಪತ್ತೆಗೆ “ಕೈ ಫ್ಯಾಕ್ಟ್ ಬಸ್ಟರ್”
Team Udayavani, Dec 4, 2018, 6:00 AM IST
ಬೆಂಗಳೂರು: ಬಿಜೆಪಿಯ ಸಾಮಾಜಿಕ ಜಾಲತಾಣದ “ವಾರ್ಗೇಮ್’ಗೆ ಪ್ರತಿಯಾಗಿ ಕಾಂಗ್ರೆಸ್ “ಫ್ಯಾಕ್ಟ್ ಬಸ್ಟರ್’ ಎಂಬ ಪ್ರತ್ಯಸ್ತ್ರವನ್ನು ರೂಪಿಸುತ್ತಿದೆ. ಕಾಂಗ್ರೆಸ್ ವಿರುದ್ಧ ಹರಿದಾಡುವ ಊಹಾಪೋಹಗಳು, ಸತ್ಯಕ್ಕೆ ದೂರವಾದ ಮಾಹಿತಿಗಳನ್ನು ಗುರುತಿಸಿ, ಇವುಗಳಿಗೆ ವಾಸ್ತವಾಂಶದ ಮೂಲಕ ತಿರುಗೇಟು ನೀಡಲು ಇದನ್ನು ತಯಾರಿಸಲಾಗಿದೆ. ಈ ಫ್ಯಾಕ್ಟ್ ಬಸ್ಟರ್ ತಂಡಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ ನೇತೃತ್ವ ವಹಿಸಿದ್ದಾರೆ.
ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಸೇರಿದಂತೆ ಕಾಂಗ್ರೆಸ್ ಬಗ್ಗೆ ಇಲ್ಲಸಲ್ಲದ ಸುದ್ದಿಗಳು, ವದಂತಿಗಳು, ತಿರುಚಿದ ಸುದ್ದಿಗಳನ್ನು ಬಿಜೆಪಿಯೇ ಹರಿದಾಡಿಸುತ್ತಿದೆ ಎಂಬ ಆರೋಪಗಳಿವೆ. ಇವುಗಳನ್ನು ಪತ್ತೆಗಾಗಿಯೇ ಕೆಪಿಸಿಸಿ ಮಾಧ್ಯಮ ಘಟಕ, ಸಾಮಾಜಿಕ ಜಾಲತಾಣ ವಿಭಾಗ ಮತ್ತು ಸಂಶೋಧನಾ ಘಟಕದ ಪದಾಧಿಕಾರಿಗಳನ್ನು ಸೇರಿಸಿ ಈ ತಂಡ ರಚಿಸಲಾಗಿದೆ.
ಸುಳ್ಳುಗಳ ಪತ್ತೆ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅಂತಿಮ ದರ್ಶನಕ್ಕೆ ನೆಹರು ಹೋಗಿರಲಿಲ್ಲ ಎಂದು ಇತ್ತೀಚೆಗೆ ಪ್ರಧಾನಿ ಹೇಳಿದ್ದರು. ಜತೆಗೆ ಸರ್ದಾರ್ ಪಟೇಲ್ ಅವರ ಅಂತ್ಯಸಂಸ್ಕಾರದಲ್ಲೂ ನೆಹರು ಪಾಲ್ಗೊಂಡಿರಲಿಲ್ಲ ಎಂದು ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಾಕಲಾಗಿತ್ತು. ಈ ಬಗ್ಗೆ ಎಐಸಿಸಿ ಹಾಗೂ ಕೆಪಿಸಿಸಿ ಸಂಶೋಧನಾ ಘಟಕ ತಕ್ಷಣ ಇತಿಹಾಸವನ್ನು ಹುಡುಕಿ ಸತ್ಯವನ್ನು ಪ್ರಕಟಿಸುವ ಕೆಲಸ ಮಾಡಿತ್ತು ಎಂದು ನಟರಾಜ್ ಗೌಡ ಹೇಳಿದ್ದರು.
ಪದಾಧಿಕಾರಿಗಳಿಂದ ಸ್ವಯಂಘೋಷಣೆ: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ವಿವಿಧ ಘಟಕಗಳಲ್ಲಿ ಕಾರ್ಯ ನಿರ್ವಹಿಸುವ ಪದಾಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ಯಾವುದೇ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡುವಂತಿಲ್ಲ, ಕೆಟ್ಟದಾಗಿ ಬಿಂಬಿಸುವಂತಿಲ್ಲ. ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸದಂತೆ ಪಕ್ಷದ ಎಲ್ಲ ವಿಭಾಗಗಳ ಪದಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಲಾಗಿದೆ. ಸುಳ್ಳು ಸಂದೇಶ ರವಾನಿಸಿದರೆ, ಬಿಜೆಪಿ ನಾಯಕರ ವಿರುದಟಛಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದರೆ ನಾವೇ ಹೊಣೆಗಾರರು ಎಂದು ಡಿಕ್ಲೇರೇಷನ್ ಬರೆಯಿಸಿಕೊಳ್ಳಲಾಗಿದೆ.
ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್ʼ ಸೀಸನ್ – 3 ಶೂಟ್ ಅರಂಭ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ