ಪ್ರತಿಭಟನೆಗೆ ತೆರಳಿದ್ದ ರೈತರ ಪರದಾಟ
Team Udayavani, Dec 4, 2018, 6:00 AM IST
ಬಳ್ಳಾರಿ: ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲು ದಿಲ್ಲಿಗೆ ತೆರಳಿದ್ದ ಜಿಲ್ಲೆಯ ರೈತರು ರೈಲು ತಪ್ಪಿಸಿಕೊಂಡು ವಾಪಸ್ ಬರಲು ಹಣವಿಲ್ಲದೆ ಕಾಶಿ (ವಾರಾಣಸಿ) ರೈಲು ನಿಲ್ದಾಣದಲ್ಲಿ ಅತಂತ್ರರಾಗಿ ಪರದಾಡುತ್ತಿದ್ದಾರೆ. ನ. 29, 30ರಂದು ನಡೆದ ಪ್ರತಿಭಟನೆಗಾಗಿ ಜಿಲ್ಲೆಯಿಂದ 30ಕ್ಕೂ ಹೆಚ್ಚು ರೈತರು ತೆರಳಿದ್ದರು. ಇದಕ್ಕಾಗಿ ಗದಗ-ಕಾಶಿ-ದಿಲ್ಲಿ ಮತ್ತು ದಿಲ್ಲಿ-ಕಾಶಿ-ಗದಗ ನಡುವೆ ಸಂಚರಿಸುವ ರೈಲಿನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಲಾಗಿತ್ತು. ಪ್ರತಿಭಟನೆ ಮುಗಿದ ಬಳಿಕ ರೈಲು ಹತ್ತಿ ಕಾಶಿಯಲ್ಲಿ ಬಂದಿಳಿದಿದ್ದರು. ಅಲ್ಲಿಂದ ಗದಗಕ್ಕೆ ತೆರಳಲು ಡಿ.1ರಂದು ಸಂಜೆ 6 ಗಂಟೆಗೆ ಆಗಮಿಸಬೇಕಿದ್ದ ರೈಲು ತಡವಾಗಲಿದೆ ಎಂಬ ಮಾಹಿತಿ ಪಡೆದ ರೈತರೆಲ್ಲರೂ ನಿಲ್ದಾಣದಿಂದ ಹೊರಬಂದು ಕಾಶಿ ವೀಕ್ಷಣೆಗೆ ತೆರಳಿದ್ದರು.
ಡಿ. 1ರಂದು ಸಂಜೆ 6 ಗಂಟೆಗೆ ಆಗಮಿಸಬೇಕಿದ್ದ ರೈಲು ಡಿ. 2ರಂದು ಬೆಳಗ್ಗಿನ ಜಾವ ಆಗಮಿಸಿದೆ. ಈ ವೇಳೆ ರೈತರು ರೈಲು ನಿಲ್ದಾಣಕ್ಕೆ ಆಗಮಿಸಿಲ್ಲದ ಕಾರಣ ಈ ರೈಲನ್ನೂ ತಪ್ಪಿಸಿಕೊಂಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸುವ ಶತಾಬ್ದಿ ಎಕ್ಸ್ ಪ್ರಸ್ ರೈಲನ್ನು ಸಹ ರೈತರು ತಪ್ಪಿಸಿಕೊಂಡಿದ್ದು, ಈಗ ಗದಗಕ್ಕೆ ಆಗಮಿಸುವ ರೈಲಿಗಾಗಿ ನಿಲ್ದಾಣದಲ್ಲೇ ಕಾದು ಕುಳಿತಿದ್ದಾರೆ. ಕಾಶಿಯಿಂದ ಬಸ್ ಅಥವಾ ಬೇರೆ ರೈಲಿನಲ್ಲಿ ಸಂಚರಿಸಲು ರೈತರ ಕೈಯಲ್ಲಿ ಹಣವಿಲ್ಲ. ಇದರಿಂದ ಕಾಶಿ ನಿಲ್ದಾಣದಲ್ಲಿರುವ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು