ತೋತಾಪುರಿಯಲ್ಲಿ ಆದಿತಿ ಮುಸ್ಲಿಂ ಹುಡುಗಿ


Team Udayavani, Dec 4, 2018, 11:21 AM IST

aditi.jpg

ಜಗ್ಗೇಶ್‌ ಅಭಿನಯದ, ವಿಜಯ ಪ್ರಸಾದ್‌ ನಿರ್ದೇಶನದ “ತೋತಾಪುರಿ’ ಚಿತ್ರ ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತೇ ಇದೆ. ಈಗಾಗಲೇ ಸುಮಾರು 25 ದಿನಗಳ ಕಾಲ ಬನ್ನೂರಿನಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರೀಕರಣಕ್ಕೆ ಬ್ರೇಕ್‌ ನೀಡಿದ್ದ ಚಿತ್ರತಂಡ ಈಗ ಮತ್ತೆ ಚಿತ್ರೀಕರಣ ಆರಂಭಿಸಿದೆ. ನಿನ್ನೆಯಿಂದ ಬನ್ನೂರಿನಲ್ಲಿ ಚಿತ್ರೀಕರಣ ಆರಂಭವಾಗಿದ್ದು, ನಟ ಜಗ್ಗೇಶ್‌, ನಾಯಕಿ ಅದಿತಿ ಪ್ರಭುದೇವ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.

ಚಿತ್ರದಲ್ಲಿ ನಾಯಕಿ ಅದಿತಿಯ ಪಾತ್ರವೇನು, ಯಾವ ರೀತಿಯ ಪಾತ್ರವಿರಬಹುದು ಎಂಬ ಕುತೂಹಲ ಅನೇಕರಲ್ಲಿತ್ತು. ಅದಕ್ಕೆ ಕಾರಣ ನಿರ್ದೇಶಕ ವಿಜಯಪ್ರಸಾದ್‌ ಸಿನಿಮಾ. ವಿಜಯ ಪ್ರಸಾದ್‌ ಅವರ ಸಿನಿಮಾಗಳನ್ನು ನೋಡಿದರೆ ಅಲ್ಲಿ ನಾಯಕಿಗೆ ಸಾಕಷ್ಟು ವಿಭಿನ್ನ ಹಾಗೂ ಬೋಲ್ಡ್‌ ಪಾತ್ರಗಳನ್ನು ನೀಡುತ್ತಾ ಬಂದಿದ್ದಾರೆ. ಅದೇ ಕಾರಣದಿಂದ ಅದಿತಿ ಪಾತ್ರದ ಬಗ್ಗೆಯೂ ಕುತೂಹಲವಿತ್ತು. ಈಗ ಅದಿತಿ ಪಾತ್ರವೇನು ಎಂಬ ರಹಸ್ಯ ಬಯಲಾಗಿದೆ. 

“ತೋತಾಪುರಿ’ಯಲ್ಲಿ ಅದಿತಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಶಕೀಲಾ ಎಂಬ ಪಾತ್ರದಲ್ಲಿ ನಟಿಸುತ್ತಿದ್ದು, ಪಾತ್ರ ಸಖತ್‌ ಬೋಲ್ಡ್‌ ಆಗಿದೆಯಂತೆ. ಈಗಾಗಲೇ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಅದಿತಿ, ಸಹಜವಾಗಿಯೇ ಸಿನಿಮಾ ಬಗ್ಗೆ ಎಕ್ಸೆ„ಟ್‌ ಆಗಿದ್ದಾರೆ. ಇನ್ನು ಚಿತ್ರದಲ್ಲಿ ಜಗ್ಗೇಶ್‌ ಅವರ ಪಾತ್ರ ಹಾಗೂ ಗೆಟಪ್‌ ಕೂಡಾ ಭಿನ್ನವಾಗಿದ್ದು, ಮತ್ತೂಂದು ಯಶಸ್ಸು ಗಳಿಸುವ ನಿರೀಕ್ಷೆಯಲ್ಲಿದೆ ಚಿತ್ರತಂಡ.

ಈ ಚಿತ್ರವನ್ನು ಕೆ.ಎ.ಸುರೇಶ್‌ ನಿರ್ಮಿಸುತ್ತಿದ್ದಾರೆ. ಅಂದಹಾಗೆ, “ಧೈರ್ಯಂ’ ಚಿತ್ರದ ಮೂಲಕ ನಾಯಕಿಯಾದ ಅದಿತಿ ಸದ್ಯ “ಬಜಾರ್‌’ ಚಿತ್ರದ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇದಲ್ಲದೇ, ಚಿರಂಜೀವಿ ಸರ್ಜಾ ನಾಯಕರಾಗಿರುವ “ಸಿಂಗ’ ಚಿತ್ರಕ್ಕೂ ಅದಿತಿ ನಾಯಕಿ. ವಿಜಯ್‌ ಅವರ “ಕುಸ್ತಿ’ ಚಿತ್ರಕ್ಕೂ ಅದಿತಿ ನಾಯಕಿಯಾಗಿದ್ದರು.

ಆದರೆ, “ಕುಸ್ತಿ’ ಚಿತ್ರ ಬದಿಗೊತ್ತಿ ಚಿತ್ರತಂಡ ಹೊಸ ಚಿತ್ರ ಮಾಡುವುದಾಗಿ ಘೋಷಿಸಿದೆ. ಆ ಚಿತ್ರದಲ್ಲೂ ಅದಿತಿ ನಾಯಕಿಯಾಗಿರುತ್ತಾರೆಂಬುದನ್ನು ಕಾದು ನೋಡಬೇಕಿದೆ. ಇನ್ನು, “ಆಪರೇಷನ್‌ ನಕ್ಷತ್ರ’ ಚಿತ್ರದಲ್ಲೂ ಅದಿತಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನು, “ತೋತಾಪುರಿ’ ಚಿತ್ರತಂಡ ಬನ್ನೂರಿನಲ್ಲಿ ಚಿತ್ರೀಕರಣ ಮುಗಿಸಿ, ಮಡಿಕೇರಿ ಹಾಗೂ ಕೇರಳ ಕಡೆ ಪಯಣ ಬೆಳೆಸಲಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.