ಬಿಜೆಪಿಯ 2ನೇ ಹಂತದ ಹೋರಾಟ ಶುರು


Team Udayavani, Dec 4, 2018, 11:42 AM IST

sabarimala-temple-800.jpg

ತಿರುವನಂತಪುರ: ಶಬರಿಮಲೆ ದೇಗುಲ ವಿಚಾರದಲ್ಲಿ ಕೇರಳದಲ್ಲಿನ ಎಲ್‌.ಡಿ.ಎಫ್. ಸರಕಾರಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, 2ನೇ ಹಂತದ ಹೋರಾಟವಾಗಿ ಕೇರಳ ವಿಧಾನಸಭೆ ಎದುರು ಸರಣಿ ಉಪವಾಸ ಮತ್ತು ಪ್ರತಿಭಟನೆಯನ್ನು ಆರಂಭಿಸಿದೆ. ಸೋಮವಾರ ಪಕ್ಷದ ನಾಯಕಿ ಸರೋಜ್‌ ಪಾಂಡೆ ಇದಕ್ಕೆ ಚಾಲನೆ ನೀಡಿದ್ದು, ಬಿಜೆಪಿ ನಾಯಕ ಎ.ಎನ್‌.ರಾಧಾಕೃಷ್ಣನ್‌ ನೇತೃತ್ವದಲ್ಲಿ ನಿರಶನ ಶುರುವಾಗಿದೆ. 14 ಜಿಲ್ಲೆಗಳ ನಾಯಕರು ಮತ್ತು ಕಾರ್ಯಕರ್ತರೂ ಇದರಲ್ಲಿ ಭಾಗಿಯಾಗಿದ್ದಾರೆ.

ತಿರುವನಂತಪುರದಲ್ಲಿ ನಿರಶನಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಸಂಸದೆ ಸರೋಜ್‌ ಪಾಂಡೆ, ಶಬರಿಮಲೆ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾವಿಸುತ್ತೇವೆ. ಚರ್ಚೆಗೆ ದಾರಿ ಯಾವತ್ತೂ ಮುಕ್ತವಾಗಿರಬೇಕು ಎಂದಿದ್ದಾರೆ. ಕೇರಳ ಸರಕಾರ ಶಬರಿಮಲೆ ವಿಚಾರವನ್ನು ಸಮರ್ಥವಾಗಿ ನಿಭಾಯಿಸಲಿಲ್ಲ ಎಂದೂ ದೂರಿದ್ದಾರೆ.

ಕೇರಳ ಬಿಜೆಪಿ ಅಧ್ಯಕ್ಷ ಪಿ.ಎಸ್‌.ಶ್ರೀಧರನ್‌ ಪಿಳ್ಳೆ ಮಾತನಾಡಿ ‘ಕೇರಳದಲ್ಲೀಗ ಅರಣ್ಯ ನ್ಯಾಯ ಪಾಲನೆಯಾಗುತ್ತಿದೆ. ಸಿಪಿಎಂನ ಸಂವಿಧಾನ ಪರಮೋಚ್ಚವಾದದ್ದಲ್ಲ. ಸಾರ್ವಕಾಲಿಕವಾಗಿ ಒಪ್ಪಿಕೊಂಡ ಭಾರತದ ಸಂವಿಧಾನವೇ ಶ್ರೇಷ್ಠವಾದದ್ದು’ ಎಂದರು. ಕೇರಳ ವಿಧಾನಸಭೆಯಲ್ಲಿಯೂ ಶಬರಿ ಮಲೆ ವಿವಾದ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನಡುವೆ ವಾಗ್ವಾದ ನಡೆದಿದೆ. ಕಲಾಪ ಆರಂಭವಾಗುತ್ತಲೇ ಯುಡಿಎಫ್ನ ಮೂವರು ಶಾಸಕರು ಸದನದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ  ಆರಂಭಿಸಿದರು.

ಶಾ ನಾಯಕರೇ?: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಚೆನ್ನಿತ್ತಲ ವಿರುದ್ಧ ಹರಿಹಾಯ್ದು “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆಯಂತೆ ಕಾಂಗ್ರೆಸ್‌ ನಾಯಕರು ವರ್ತಿಸುತ್ತಿದ್ದಾರೆ. ಅವರ ನಾಯಕ ರಾಹುಲ್‌ ಗಾಂಧಿಯೋ, ಅಮಿತ್‌ ಶಾ ಅವರೋ? ವಿಧಾನ ಸಭೆಯ ಹೊರಗೆ ಬಿಜೆಪಿ ನಾಯಕರು ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದಾಗಲೇ ಪ್ರತಿಪಕ್ಷ ಯುಡಿಎಫ್ ಶಾಸಕರು ಸದನದಲ್ಲಿ ನಿರಶನ ಘೋಷಿಸುತ್ತಾರೆ ಎಂದು ತಾವು ತಿಳಿದದ್ದು ಸರಿ ಎಂದಿದ್ದಾರೆ ಸಿಎಂ ಪಿಣರಾಯಿ. ಈ ಮಾತುಗಳಿಗೆ ವಿಪಕ್ಷ ಸದಸ್ಯರು ಕ್ರುದ್ಧಗೊಂಡು ಧರಣಿ ನಡೆಸಿ, ಬಳಿಕ ಸಭಾತ್ಯಾಗ ಮಾಡಿದರು.

ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ: ಪ್ರಹ್ಲಾದ ಜೋಶಿ
ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಶಿ, ಕೇರಳದಲ್ಲಿನ ಎಲ್‌ಡಿಎಫ್ ಸರಕಾರ‌ದಿಂದ ಶಬರಿಮಲೆಯ ಸಂಪ್ರದಾಯ ನಾಶವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಅಧ್ಯಯನ ಮಾಡಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾಗೆ ವರದಿ ಸಲ್ಲಿಸಲಿದ್ದೇವೆ ಎಂದಿದ್ದಾರೆ. ಬ್ರಿಟಿಷರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತೇ ಹೊರತು, ವಿವಿಧ ನಂಬಿಕೆಗಳನ್ನು ಹೊಂದಿದ ಭಕ್ತರ ವಿರುದ್ಧವಲ್ಲ ಎಂದಿದ್ದಾರೆ. ಜತೆಗೆ ಕೇಂದ್ರ ಸಚಿವ ಪೊನ್‌ ರಾಧಾಕೃಷ್ಣನ್‌ ಜತೆಗೆ ಐಪಿಎಸ್‌ ಅಧಿಕಾರಿ ಯತೀಶ್‌ ಚಂದ್ರ ಅನುಚಿತವಾಗಿ ವರ್ತಿಸಿದ್ದು ಖಂಡನೀಯ. ಅವರ ವಿರುದ್ಧ ಸಂಸತ್‌ನಲ್ಲಿ ಹಕ್ಕುಚ್ಯುತಿ ಮಂಡಿಸಲು ಸಚಿವರಿಗೆ ಮನವಿ ಮಾಡುವುದಾಗಿಯೂ ಹೇಳಿದ್ದಾರೆ. ಕೇರಳ ರಾಜ್ಯ ಸರಕಾರಇದೇ ರೀತಿಯ ಧೋರಣೆ ಅನುಸರಿಸುತ್ತಿದ್ದರೆ, ಅದನ್ನು ಕಿತ್ತು ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ ಎಂದೂ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.