ಕುಂದಾಪುರ: ಸರ್ವಿಸ್‌ ರಸ್ತೆ ಪಕ್ಕ ಪಾದಚಾರಿ ರಸ್ತೆಯೇ ಇಲ್ಲ!


Team Udayavani, Dec 5, 2018, 1:05 AM IST

service-road-4-12.jpg

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಸಂಚಾರ ಬದಲಿ ವ್ಯವಸ್ಥೆಯನ್ನು ಸರ್ವಿಸ್‌ ರಸ್ತೆಯಲ್ಲಿ ಮಾಡಿದ್ದರೂ ಪಾದಚಾರಿಗಳ ಓಡಾಟಕ್ಕೆ ಯಾವುದೇ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಇದರಿಂದಾಗಿ ನಿತ್ಯ ಪ್ರಯಾಣದವರು, ವಿವಿಧ ಕಚೇರಿಗಳಿಗೆ ಹೋಗುವವರು ಸಂಕಷ್ಟಕ್ಕೆ ಈಡಾಗಿದ್ದಾರೆ.

ಬದಲಾದ ದಾರಿ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ  ಪ್ರಮುಖ ವಾಹನಗಳು ಓಡಾಟ ನಡೆಸಲು ಕಾಮಗಾರಿಯ ನೆಪವೊಡ್ಡಿ ತಡೆ ಒಡ್ಡಲಾಗಿದೆ. ಇದರಿಂದಾಗಿ ಎರಡೂ ಕಡೆಗಳಲ್ಲಿ ಸರ್ವಿಸ್‌ ರಸ್ತೆಯಲ್ಲಿ ಘನ ವಾಹನಗಳ ಓಡಾಟ ನಡೆಯುತ್ತಿದೆ. ಕೋಟೇಶ್ವರ ಕಡೆಯಿಂದ ಬರುವ ವಾಹನಗಳು ವಿನಾಯಕ ಥಿಯೇಟರ್‌ ಸಮೀಪ ಸರ್ವಿಸ್‌ ರಸ್ತೆಯನ್ನು ಪ್ರವೇಶಿಸಿ ಕುಂದಾಪುರದ ಶಾಸ್ತ್ರಿ ಸರ್ಕಲ್‌ವರೆಗೆ ಆಗಮಿಸುತ್ತವೆ. ಅದೇ ರೀತಿ ಕುಂದಾಪುರ ಕಡೆಯಿಂದ ಹೋಗುವ ವಾಹನಗಳು ಬೊಬ್ಬರ್ಯನ ಕಟ್ಟೆ ಸಮೀಪ ಸರ್ವಿಸ್‌ ರಸ್ತೆಯಲ್ಲಿ  ಕೆಎಸ್‌ಆರ್‌ಟಿಸಿ ಡಿಪೋವನ್ನು ದಾಟಿ ಬಸ್ರೂರು ಮೂರುಕೈ ರಸ್ತೆಯನ್ನು  ಹಾದು ವಿನಾಯಕ ಥಿಯೇಟರ್‌ನಲ್ಲಿ ಮುಖ್ಯ ರಸ್ತೆಯನ್ನು ಸೇರಿಕೊಳ್ಳುತ್ತವೆ.

ಕಚೇರಿಗಳು
ರಸ್ತೆಯ ಎರಡೂ  ಭಾಗದಲ್ಲಿ ಮೆಸ್ಕಾಂ, ಕೆ.ಪಿ.ಟಿ.ಸಿ.ಎಲ್‌., ಎಲ್‌.ಐ.ಸಿ. ಕಚೇರಿ, ಗ್ರಂಥಾಲಯ, ಲೋಕೋಪಯೋಗಿ ಇಲಾಖೆ ಕಚೇರಿ, ಬೊಬ್ಬರ್ಯನ ಕಟ್ಟೆ ಸೇರಿದಂತೆ ಜನ ನಿತ್ಯ ಉಪಯೋಗಿಸುವಂತಹ ಅನೇಕ ಪ್ರದೇಶಗಳು, ಮೈದಾನಗಳು ಇವೆ. ಶಾಲೆಯೂ ಇದೆ. ಆದರೆ ನಡೆದಾಡಲು ಅಸಾಧ್ಯವಾದಂತಹ ಪರಿಸ್ಥಿತಿ ಇದೆ. ನಿತ್ಯವೂ ಓಡಾಟ ಮಾಡುವ ನಗರ ನಿವಾಸಿಗಳಿಗೆ ಇದರಿಂದಾಗಿ ತೊಂದರೆಯಾಗಿದೆ. ಬಸ್‌ ನಿಲುಗಡೆ ಎಲ್ಲೆಲ್ಲೋ ಆಗುವ ಕಾರಣ ಸೂಕ್ತ ಸ್ಥಳಕ್ಕೆ ಓಡಾಟಕ್ಕೆ ಬಸ್‌ ಹಿಡಿಯಲು ಈ ರಸ್ತೆಯನ್ನು ಬಳಸುವುದು ಅನಿವಾರ್ಯ. ಈ ಬಗ್ಗೆ ತುರ್ತು ಗಮನ ಹರಿಸುವ ಆವಶ್ಯಕತೆ ಇದೆ.

ಫ‌ುಟ್‌ಪಾತ್‌ ಇರಬೇಕಾದ ಸ್ಥಳದಲ್ಲಿ ಕಾಮಗಾರಿ ಸರಕು
ಶಾಸ್ತ್ರಿ ಸರ್ಕಲ್‌ನಿಂದ ವಿನಾಯಕ ಥಿಯೇಟರ್‌ವರೆಗೆ ಎರಡೂ ಸರ್ವಿಸ್‌ ರಸ್ತೆಗಳಲ್ಲಿ ಪಾದಚಾರಿಗಳಿಗೆ ನಡೆದಾಡಲು ವ್ಯವಸ್ಥೆ ಇಲ್ಲ. ಪಾದಚಾರಿ ರಸ್ತೆ ಇದ್ದರೂ ಕೂಡ ಅದರಲ್ಲಿ ಕಾಮಗಾರಿಗಾಗಿ ತಂದಿಟ್ಟ ಇಟ್ಟಿಗೆಗಳು, ಕೆಲವೊಂದು ಅಂಗಡಿಗಳ ವಸ್ತುಗಳು, ಅಲ್ಲಲ್ಲಿ ಅಡ್ಡರಸ್ತೆಗಳು ಇರುವ ಕಾರಣ ನಡೆದಾಡಲು ಕಷ್ಟಪಡುವಂತಾಗಿದೆ. ಕಾಮಗಾರಿಯ ನೆಪದಲ್ಲಿ ಅಲ್ಲಲ್ಲಿ ಫುಟ್‌ಪಾತ್‌ ಮೇಲೆ ಮಣ್ಣಿನ ರಾಶಿಯನ್ನು ಹಾಕಲಾಗಿದೆ. ಕೆಲವೆಡೆ ಫುಟ್‌ಪಾತ್‌ ಇಲ್ಲವೇ ಇಲ್ಲ ಇಂತಹ ಸ್ಥಿತಿಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ದೂರಪ್ರಯಾಣದ ಘನ ವಾಹನಗಳು ಅತಿವೇಗದಿಂದ ಈ ರಸ್ತೆಯಲ್ಲಿ ಚಲಿಸುವ ಕಾರಣ ಓಡಾಟ ನಡೆಸಲು ಜನ ಪರದಾಡುತ್ತಿದ್ದಾರೆ. ಅಂತೆಯೇ ಸಿಟಿ ಬಸ್‌ಗಳು ಜನರನ್ನು ಹತ್ತಿ ಇಳಿಸಲು ಕೂಡ ಈ ರಸ್ತೆಯಲ್ಲಿ ತತ್ಕಾಲದ ನಿಲುಗಡೆ ಕೊಡುವ ಕಾರಣ ವಾಹನಗಳ ಓಡಾಟಕ್ಕೆ ತೊಂದರೆಯಾಗುವುದರ ಜತೆಗೆ ಪಾದಚಾರಿಗಳೂ ಸಂಕಷ್ಟ ಪಡುವಂತಾಗಿದೆ.

ನಡೆದಾಡಲೂ ಕಷ್ಟವಾಗಿದೆ
ಪಾದಚಾರಿ ರಸ್ತೆಯಲ್ಲಿ ಹಲವೆಡೆ ತಡೆ ಇರುವುದರಿಂದ, ಕೆಲವೆಡೆ ಪಾದಚಾರಿ ರಸ್ತೆಯೇ ಇಲ್ಲದ ಕಾರಣ ಕಚೇರಿಗಳಿಗೆ ಹೋಗಲು ಕೂಡ ಕಷ್ಟವಾಗುತ್ತಿದೆ.
– ಸತೀಶ್‌ ಶೆಟ್ಟಿ, ಮಾಜಿ ಸದಸ್ಯರು, ಪುರಸಭೆ 

ಟಾಪ್ ನ್ಯೂಸ್

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.