ಸಜಂಕಬೆಟ್ಟು ಬಳಿ ಕಿರುಹೊಳೆಗೆ ಸೇತುವೆಯೇ ಸುಲಭ ಪರಿಹಾರ


Team Udayavani, Dec 5, 2018, 10:13 AM IST

5-december-1.gif

ಪುಂಜಾಲಕಟ್ಟೆ: ಬಂಟ್ವಾಳ ತಾ|ನ ವಾಮದಪದವು ಪರಿಸರದಿಂದ ಬೆಳ್ತಂಗಡಿ ತಾಲೂಕಿನ ವೇಣೂರನ್ನು ಸಂಪರ್ಕಿಸಲು ಜನತೆ ಸುತ್ತು ಬಳಸು ದಾರಿಯನ್ನು ಅವಲಂಬಿಸುತ್ತಿದ್ದು, ಈ ಸಮಸ್ಯೆಗೆ ಸೇತುವೆ ನಿರ್ಮಾಣಗೊಳ್ಳುವುದು ಪರಿಹಾರವಾಗಿದೆ. ಈ ತಾ|ಗಳ ಗಡಿಭಾಗದಲ್ಲಿರುವ ಅಜ್ಜಿಬೆಟ್ಟು ಗ್ರಾಮದ ಸಜಂಕಬೆಟ್ಟು ಬಳಿ ಕಿರುಹೊಳೆಗೆ ಸೇತುವೆ ನಿರ್ಮಾಣಗೊಂಡಲ್ಲಿ ಗ್ರಾಮಸ್ಥರಿಗೆ ಪ್ರಯೋಜನವಾಗಲಿದೆ. ಸೇತುವೆ ನಿರ್ಮಾಣಕ್ಕೆ ಹಸಿರು ನಿಶಾನೆ ದೊರಕಿದ್ದು, ಅನುದಾನ ಮಂಜೂರುಗೊಂಡಿದೆ.

ಬೆಳ್ತಂಗಡಿ ಕಡೆಯಿಂದ ಬರುವ ಬಜಿರೆ ಕಿರುಹೊಳೆ ಪುಚ್ಚೆಮೊಗರು ಬಳಿ ಫಲ್ಗುಣಿ ನದಿಯನ್ನು ಸೇರುತ್ತದೆ. ಕಿರುಹೊಳೆ ಬೆಳ್ತಂಗಡಿ ತಾ|ನ ಗುಂಡೂರಿ, ಬಂಟ್ವಾಳ ತಾ|ನ ಅಜ್ಜಿಬೆಟ್ಟು ಗ್ರಾಮದ ಸಜಂಕಬೆಟ್ಟು ಬಳಿ 2 ತಾ|ಗಳನ್ನು ಪ್ರತ್ಯೇಕಿಸುತ್ತದೆ. ವೇಣೂರು ಪರಿಸರದ ಜನರಿಗೂ ವಾಮದಪದವಿಗೆ ಇದು ಸನಿಹದ ದಾರಿ. ಹೊಳೆ ಬದಿಯಿಂದ ನೇರಳ್‌ಪಲ್ಕೆ, ತುಂಬೆಲಕ್ಕಿವರೆಗೆ 2 ಕಿ.ಮೀ. ಕಚ್ಛಾ ರಸ್ತೆ ಇದ್ದು, ಬಳಿಕ ಡಾಮರು ರಸ್ತೆಯಿದೆ.

ಕೃಷಿ ಅವಲಂಬಿತರು
ವಾಮದಪದವು ಪರಿಸರದ ಹೆಚ್ಚಿನ ಜನರು ಕೃಷಿ ಅವಲಂಬಿತರು. ಭತ್ತ, ಅಡಿಕೆ, ತೆಂಗು ಮುಂತಾದ ವಾಣಿಜ್ಯ ಬೆಳೆಗಳನ್ನು ಬೆಳೆಸುತ್ತಾರೆ. ಅಗತ್ಯ ಕಾರ್ಯಗಳಿಗೆ ವೇಣೂರನ್ನು ಬಳಸುತ್ತಿ ರುವ ಈ ಜನರು ತಮ್ಮ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಕೃಷಿ ಸಂಬಂಧಿತ ವಸ್ತುಗಳನ್ನು ಸಾಗಿಸಲು ವೇಣೂರಿಗೆ ತೆರಳಬೇಕಾದರೆ ಪ್ರಯಾಸಪಡುತ್ತಾರೆ. ವೇಣೂರು ಸಂತೆ ಪ್ರಸಿದ್ಧವಾಗಿದ್ದು, ಗೋಮಟೇಶ್ವರ ಮೂರ್ತಿಯಿಂದಾಗಿ ಪ್ರೇಕ್ಷಣೀಯ ಸ್ಥಳವಾಗಿದೆ. ಆದರೆ ವಾಮದಪದವಿನಿಂದ ವೇಣೂರಿಗೆ ಕೆಲವೇ ಕೆಲವು ಖಾಸಗಿ ಬಸ್‌ ಸರ್ವೀಸ್‌ ಇದೆ. ಸಾಮಾನು ಸರಂಜಾಮು ಸಾಗಿಸಲು ವಾಹನಗಳಿಗೆ ದುಪ್ಪಟ್ಟು ಬೆಲೆ ತೆರಬೇಕಾಗುತ್ತದೆ. ವಾಮದಪದವಿನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ, ಸರಕಾರಿ ಪ್ರಥಮದರ್ಜೆ ಕಾಲೇಜು ಮುಂತಾದ ಸವಲತ್ತುಗಳಿಗಾಗಿ ವೇಣೂರಿನಿಂದ ವಾಮದ ಪದವಿಗೆ ಬರುತ್ತಾರೆ. ಇವರಿಗೆ ವಾಮದ ಪದವು ಹೊರತುಪಡಿಸಿ ಈ ಸೌಲಭ್ಯಗಳಿಗೆ ಮೂಡುಬಿದಿರೆಗೆ ಹೋಗಬೇಕಾಗುತ್ತದೆ.

ಬೇಸಗೆಯಲ್ಲಿ ತಾತ್ಕಾಲಿಕ ಸೇತುವೆ ಬೇಸಗೆ ಕಾಲದಲ್ಲಿ ಹೊಳೆಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಗುಂಡೂರಿಯಲ್ಲಿ ನೀರಿಗೆ ತಾತ್ಕಾಲಿಕ ಅಣೆಕಟ್ಟು ಕಟ್ಟುತ್ತಾರೆ. ಆದರೂ ಸಜಂಕಬೆಟ್ಟುವಿನ ಗ್ರಾಮಸ್ಥರು ಮರಳು, ಮಣ್ಣು ಹಾಕಿ ತಾತ್ಕಾಲಿಕ ಸೇತುವೆ ನಿರ್ಮಿಸಿ ವೇಣೂರು ಸಂಪರ್ಕಕ್ಕೆ ದಾರಿ ನಿರ್ಮಿಸುತ್ತಾರೆ. ಕಿರುಹೊಳೆಯ ಎರಡೂ ಬದಿಯ ರಸ್ತೆಗಳನ್ನು ಎರಡೂ ತಾಲೂಕಿನ ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಸರಿಪಡಿಸುತ್ತಾರೆ. ಸ್ಥಳೀಯ ಸಜಂಕಬೆಟ್ಟುವಿನ ಕೃಷಿಕ ಮಹಾಲಿಂಗ ಶರ್ಮ ಅವರು ಸೇತುವೆಗೆ ನಿರ್ಮಾಣ ಕಾರ್ಯಕ್ಕೆ ತನ್ನ ನೂರರಷ್ಟು ಅಡಿಕೆ ಮರಗಳನ್ನು ತೆಗೆಯುವ ಭರವಸೆ ನೀಡಿದ್ದಾರೆ. ಇಲ್ಲಿ ಸೇತುವೆ ನಿರ್ಮಾಣವಾದಲ್ಲಿ ಹೆಚ್ಚಿನ ಸೌಲಭ್ಯಗಳು ದೊರೆತು ಜನರ ಪ್ರಯಾಣ ಹಾಗೂ ಸರಕು ಸಾಗಾಟ ಸುಗಮವಾಗಲಿದೆ.

15 ಕಿ.ಮೀ. ಕ್ರಮಿಸಬೇಕಾಗಿದೆ 
ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಪ್ರದೇಶಗಳಾದ ಅಜ್ಜಿಬೆಟ್ಟು, ಪಿಲಿಮೊಗರು, ದಂಡೆಗೋಳಿ, ಕೊಡಂಬೆಟ್ಟು, ಚೆನ್ನೈತ್ತೋಡಿ, ಸಮೀಪದ ವಗ್ಗ, ಪಂಜಿಕಲ್ಲು ಮೊದಲಾದ ಊರವರಿಗೆ ವೇಣೂರಿಗೆ ತೆರಳಲು ಪಾಂಗಲ್ಪಾಡಿಯಿಂದ ಅಜ್ಜಿಬೆಟ್ಟು, ಕೊರಗಟ್ಟೆ ರಸ್ತೆಯಾಗಿ ಸಜಂಕಬೆಟ್ಟುವಿನಿಂದ ಕೇವಲ 5 ಕಿ.ಮೀ. ಮಾತ್ರ ದೂರವಿದೆ. ಆದರೆ ಸಜೆಂಕಬೆಟ್ಟು ಬಳಿ ಕಿರುಹೊಳೆಗೆ ಸೇತುವೆಯಿಲ್ಲದೆ ಹೊಳೆಯ ಇನ್ನೊಂದು ಬದಿಗೆ ಹೋಗಲು ಅಸಾಧ್ಯವಾಗಿದೆ. ಆದುದರಿಂದ ಈ ಎಲ್ಲ ಪ್ರದೇಶದ ಜನರು ವೇಣೂರಿಗೆ ಹೋಗಲು ನೇರಳಕಟ್ಟೆ-ನಯನಾಡು ರಸ್ತೆಯಾಗಿ ಸುಮಾರು 15 ಕಿ.ಮೀ. ದೂರ ಕ್ರಮಿಸಬೇಕಾಗಿರುವುದು ಅನಿವಾರ್ಯವಾಗಿದೆ.

1.5 ಕೋ. ರೂ. ಅನುಮೋದನೆ
ಚೆನ್ನೈತ್ತೋಡಿ ಗ್ರಾಮ ಪಂಚಾಯತ್‌ ಈ ಬಗ್ಗೆ ಹಲವು ವರ್ಷಗಳಿಂದ ಸಂಬಂಧಿತ ಇಲಾಖೆಗೆ ಮನವಿ ಮಾಡುತ್ತಲೇ ಬಂದಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅಧಿಕಾರಾವಧಿ ಯಲ್ಲಿ ಅವರ ಮುತುವರ್ಜಿಯಿಂದ ಸೇತುವೆ ನಿರ್ಮಾಣಕ್ಕೆ 1.5 ಕೋ. ರೂ. ಅನುಮೋದನೆ ದೊರಕಿದೆ. ಸೇತುವೆ ನಿರ್ಮಾಣಕ್ಕೆ ಸುಮಾರು 3 ಕೋ.ರೂ. ಅಂದಾಜು ವೆಚ್ಚವಾಗಲಿದ್ದು, ಹೆಚ್ಚಿನ ಅನುದಾನ ಮಂಜೂರಾತಿಗೆ ಬಿ. ರಮಾನಾಥ ರೈ ಅವರು ಲೋಕೋಪಯೋಗಿ ಸಚಿವ ರೇವಣ್ಣ ಅವರಲ್ಲಿ ಮನವಿ ಮಾಡಿದ್ದಾರೆ.
– ಯತೀಶ್‌ ಶೆಟ್ಟಿ,
ಅಧ್ಯಕ್ಷರು, ಚೆನ್ನೈತ್ತೋಡಿ ಗ್ರಾ.ಪಂ.

ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.