ಹತ್ಯೆ:ಅಪ್ರಾಪ್ತರ ಮೇಲೆ ಎಫ್ಐಆರ್
Team Udayavani, Dec 6, 2018, 6:00 AM IST
ಬುಲಂದ್ಶಹರ್/ಲಕ್ನೋ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪೊಲೀಸ್ ಇನ್ಸೆಫೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರ ಹೆಸರನ್ನು ಎಫ್ಐಆರ್ನಲ್ಲಿ ದಾಖಲಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಪೊಲೀಸರ ಕ್ರಮವನ್ನು ಘಟನೆ ನಡೆದ ನಯಾ ಬನ್ಸ್ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಒಬ್ಟಾತ ಗ್ರಾಮದಲ್ಲಿ ವಾಸ ಮಾಡು ತ್ತಿಲ್ಲ. ಮತ್ತೂಬ್ಬ ಹಿಂಸಾಚಾರ ನಡೆದ ದಿನ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಎಂದು ಹೇಳಿದ್ದಾರೆ. ಹೀಗಾಗಿ ಅವರ ಹೆಸರನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇನ್ಸೆಫೆಕ್ಟರ್ ಸುಬೋಧ್ರ ಕುಟುಂಬ ಸದಸ್ಯರನ್ನು ಲಕ್ನೋಗೆ ಕರೆಯಿಸಿಕೊಂಡು ಗುರುವಾರ ಸಾಂತ್ವನ ಹೇಳಲಿದ್ದಾರೆ. ಇದೇ ಘಟನೆಯ ರೂವಾರಿ ಎಂಬ ಆರೋಪಕ್ಕೆ ಗುರಿಯಾಗಿರುವ ಭಜರಂಗ ದಳ ನಾಯಕ ಯೋಗೇಶ್ ರಾಜ್ ತನ್ನದೇನೂ ತಪ್ಪಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋ ಬಿಡುಗಡೆಯಾಗಿದೆ. ಈ ನಡುವೆ ಬುಲಂದ್ಶಹರ್ ಘಟನೆ ಬಾಬರಿ ಮಸೀದಿ ಧ್ವಂಸ ಘಟನೆ ವಾರ್ಷಿಕ ದಿನ ಸಮೀಪಿಸುತ್ತಿರು ವಂತೆಯೇ ನಡೆದ ಸಂಚು ಆಗಿರಬಹುದೆಂದು ಡಿಜಿಪಿ ಓ.ಪಿ.ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ