ಅಮೃತಸರ ರೈಲು ದುರಂತ: ನವಜೋತ್ ಸಿಧು, ಪತ್ನಿಗೆ ಕ್ಲೀನ್ ಚಿಟ್
Team Udayavani, Dec 6, 2018, 11:49 AM IST
ಹೊಸದಿಲ್ಲಿ : ಪಂಜಾಬ್ ಸಚಿವ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮತ್ತು ಅವರ ಪತ್ನಿ ನವಜೋತ್ ಕೌರ್ ಸಿಧು ಅವರಿಗೆ ಅಮೃತಸರ ರೈಲು ದುರಂತದ ಪ್ರಕರಣದಲ್ಲಿ ಇಂದು ಗುರುವಾರ ಕ್ಲೀನ್ ಚಿಟ್ ನೀಡಲಾಯಿತು.
ಕಳೆದ ಅಕ್ಟೋಬರ್ 19ರಂದು ಈ ರೈಲು ದುರಂತ ಸಂಭವಿಸಿತ್ತು, 60 ಮಂದಿ ಮೃತಪಟ್ಟು ಇತರ 70 ಮಂದಿ ಗಾಯಗೊಂಡಿದ್ದರು. ಅಂದು ಜನರು ರೈಲು ಹಳಿಯ ಮೇಲೆ ನಿಂತು ರಾವಣ ಪ್ರತಿಕೃತಿ ದಹನವನ್ನು ವೀಕ್ಷಿಸುತ್ತಿದ್ದರು.
ರೈಲು ದುರಂತ ಘಟಿಸಿದ್ದ ವೇಳೆ ನವಜೋತ್ ಸಿಂಗ್ ಸಿಧು ಅವರ ಪತ್ನಿ ಕೂಡ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ದುರಂತದ ಬಗ್ಗೆ ಜಾಲಂಧರ ವಿಭಾಗೀಯ ಆಯುಕ್ತ ಬಿ ಪುರುಷಾರ್ಥ ಅವರಿಂದ ನ್ಯಾಯಾಂಗ ತನಿಖೆ ನಡೆದಿತ್ತು.
ಇವರ 300 ಪುಟಗಳ ತನಿಖಾ ವರದಿಯಲ್ಲಿ ಸಿಧು ಮತ್ತು ಅವರ ಪತ್ನಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ