ಶೋಷಣೆ ರಹಿತ ಸಮಾಜ ನಿರ್ಮಾಣ ಅಗತ್ಯ


Team Udayavani, Dec 6, 2018, 4:14 PM IST

bell-1.jpg

ಬಳ್ಳಾರಿ: ದೇಶದಲ್ಲಿ ಅನೇಕ ಜನ ಸಂತರು ಸಮಾಜಕ್ಕಾಗಿ ಮತ್ತು ಸಮಾಜದ ಏಳ್ಗೆಗಾಗಿ ತಮ್ಮ ಜೀವನ ಸವೆಸಿದ್ದಾರೆ. ಅಂತಹವರಲ್ಲಿ ಅಗ್ರ ಪಂಕ್ತಿಯಲ್ಲಿರುವವರು ಕನಕದಾಸರು ಎಂದು ಸಂಸದ ವಿ.ಎಸ್‌.ಉಗ್ರಪ್ಪ ಅಭಿಪ್ರಾಯಪಟ್ಟರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಸಂತಶ್ರೇಷ್ಠ ಭಕ್ತ ಕನಕದಾಸ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕನಕದಾಸರು ದಾಸರ ಪದ ಮತ್ತು ಭಕ್ತಿ ಪಂಥದ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಯ ಬಗ್ಗೆ ಮಾತಾಡುವವರು, ಕನಕ ಮತ್ತು ವಾಲ್ಮೀಕಿ, ಬಸವಣ್ಣ, ಗಾಂಧಿ, ಬುದ್ಧ, ಅಂಬೇಡ್ಕರ್‌ ವಿಚಾರಗಳನ್ನು ಅರ್ಥ ಮಾಡಿಕೊಳ್ಳಬೇಕು. ಹುಟ್ಟು ಸಾವಿನ ಮಧ್ಯೆ ಜಾತೀಯತೆ ಬೇಡ. ಮನುಷ್ಯರಂತೆ ಬದುಕಿದರೆ ಸಾಕು. ಜಾತಿ ರಹಿತ, ವರ್ಗರಹಿತ, ಶೋಷಣೆ ರಹಿತ ಸಮಾಜ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.

ಶಾಸಕ ಸೋಮಶೇಖರ ರೆಡ್ಡಿ ಮಾತನಾಡಿ, ಬಳ್ಳಾರಿಯಲ್ಲಿ ಕನಕಭವನ, ಕನಕ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಸಹಕರಿಸುವುದಾಗಿ ತಿಳಿಸಿದರು. ಕುಡಿತಿನಿ ಬಿಟಿಪಿಎಸ್‌ನ ಕಾರ್ಯನಿರ್ವಾಹಕ ಎಂಜಿನಿಯರ್‌ ಲಿಂಗದಹಳ್ಳಿ ಹಾಲಪ್ಪ ಉಪನ್ಯಾಸ ನೀಡಿದರು. ಕವಿತಾ ಗಂಗೂರು ಮತ್ತು ಸಂಗಡಿಗರು ಕನಕದಾಸರ ಕೀರ್ತನೆಗಳನ್ನು ಪ್ರಸ್ತುತಪಡಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಮಹಾನಗರ ಪಾಲಿಕೆ ಮೇಯರ್‌ ಆರ್‌.ಸುಶೀಲಾ ಬಾಯಿ, ಎಸಿ ರಮೇಶ್‌ ಕೋನರೆಡ್ಡಿ, ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎರ್ರೆಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ ಸದಸ್ಯರಾದ ಕೆರೆಕೋಡಪ್ಪ, ಬೆಣಕಲ್ಲು ಬಸವರಾಜ್‌, ಮಲ್ಲನಗೌಡ, ಶ್ರೀನಿವಾಸ್‌ ಮೋತ್ಕರ್‌ ಮತ್ತಿತರರು ಇದ್ದರು.

ಅದ್ಧೂರಿ ಮೆರವಣಿಗೆ ಕಾರ್ಯಕ್ರಮಕ್ಕೂ ಮುನ್ನ ಸಂತಶ್ರೇಷ್ಠ ಭಕ್ತ ಕನಕದಾಸ ಜಯಂತಿ ನಿಮಿತ್ತ ನಗರದಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ನಗರದ ಅಗ್ನಿಶಾಮಕ ದಳದ ಕಚೇರಿ ಬಳಿಯ ಕನಕದಾಸ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಚಾಲನೆ ನೀಡಿದರು. ನಂತರ ಅಲ್ಲಿಂದ ಆರಂಭವಾದ ಬೃಹತ್‌ ಭಾವಚಿತ್ರದ ಮೆರವಣಿಗೆಯು ದುರ್ಗಮ್ಮ ಗುಡಿ ಮಾರ್ಗವಾಗಿ ಗಡಗಿ ಚನ್ನಪ್ಪ ವೃತ್ತದ ಮುಖಾಂತರ ಬೆಂಗಳೂರು ರಸ್ತೆ- ತೇರು ಬೀದಿ ಮಾರ್ಗವಾಗಿ ಎಚ್‌.ಆರ್‌.ಗವಿಯಪ್ಪ ವೃತ್ತದ ಮೂಲಕ ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಿತು. ವಿವಿಧ ಕಲಾತಂಡಗಳು ಮೆರವಣಿಗೆಗೆ ವಿಶೇಷ ಮೆರಗು ನೀಡಿದವು.

ಟಾಪ್ ನ್ಯೂಸ್

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.