ಕನಕರ ತತ್ವಗಳು ಬದುಕಿಗೆ ದಾರಿದೀಪ 


Team Udayavani, Dec 6, 2018, 4:56 PM IST

6-december-19.gif

ಧಾರವಾಡ: ಕನಕದಾಸರ ಜನನ, ಬದುಕು, ಬರಹ ಮತ್ತು ನೀಡಿದ ನೀತಿ, ತತ್ವಗಳು ಸಮಾಜದ ನೆಮ್ಮದಿಯ ಬದುಕಿಗೆ ದಾರಿದೀಪವಾಗಿವೆ ಎಂದು ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರು ಹೇಳಿದರು. ನಗರದ ಆಲೂರು ವೆಂಕಟರಾವ್‌ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ದಾಸ ಶ್ರೇಷ್ಠರಾದ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹೀಗಾಗಿ ಕನಕದಾಸರಂತಹ ಶ್ರೇಷ್ಠ ಸಂತರ ಬದುಕು, ಬರಹ, ಗೀತೆಗಳು ಇಂದಿನ ಪೀಳಿಗೆಗೆ ಮಟ್ಟುವಂತೆ ಪಠ್ಯ-ಪುಸ್ತಕಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಪವಾಡ ಪುರುಷ, ನಿಸ್ವಾರ್ಥ ಬದುಕಿನ ಸಮಾಜ ಸುಧಾರಕ ಕನಕದಾಸರ ಜಯಂತಿ ಆಚರಣೆ ಸಮಾಜದಲ್ಲಿ ಸಂತ ಪರಂಪರೆ ಬೆಳೆಸುವುದಾಗಿದೆ. ಸಂತ ಕನಕದಾಸರಂತಹ ಶ್ರೇಷ್ಠರು ನೀಡಿರುವ ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯಗಳನ್ನು ಗೌರವಿಸಿ ಮುಂದುವರಿಸೋಣ ಎಂದು ತಿಳಿಸಿದರು.

ಕನಕದಾಸರ ಜೀವನ ಹಾಗೂ ಚಿಂತನೆಗಳ ಕುರಿತು ಬಸವರಾಜ ಪಾಟೀಲ ಮಾತನಾಡಿ, ಈ ನಾಡಿನಲ್ಲಿ ಸಾಮರಸ್ಯ, ಸಮಾನತೆ, ವ್ಯಕ್ತಿ ಮೌಲ್ಯ ಸಾರಿ ಜೀವನದುದ್ದಕ್ಕೂ ಹೋರಾಡಿದ ಇಬ್ಬರು ಶ್ರೇಷ್ಠರಾದ ಬಸವಣ್ಣ ಮತ್ತು ಕನಕದಾಸರು ಗುರಿ ಒಂದೇ ಆಗಿದ್ದರೂ ಕ್ರಮಿಸಿದ ದಾರಿ ಭಿನ್ನವಾಗಿತ್ತು ಎಂದರು.

ತಳ ಸಮುದಾಯದಿಂದ ಹುಟ್ಟಿ ಬಂದ ಕನಕದಾಸರು ಸಮಾಜದಲ್ಲಿ ಸಮಾನತೆ, ಸಾಮರಸ್ಯ ತರಲು ಏಕಾಂಗಿಯಾಗಿ ಹೋರಾಡಿದರು. ಅದ್ಭುತವಾದ ಜೀವನ ಮೌಲ್ಯಗಳನ್ನು ಸಾರಿದ ಶ್ರೇಷ್ಠ ಧ್ವನಿಯಾಗಿ ಕನಕದಾಸರು ಇತಿಹಾಸದಲ್ಲಿ ದಾಖಲಾಗಿದ್ದಾರೆ. ಬಸವಣ್ಣನವರು ಮೇಲ್ವರ್ಗದಲ್ಲಿ ಹುಟ್ಟಿ, ಶರಣರೊಂದಿಗೆ ಸಮಾಜದ ಸಾಮರಸ್ಯ, ವ್ಯಕ್ತಿ ಸ್ವಾತಂತ್ರ್ಯ ಕಾಯಕ ಮಹತ್ವ ಸಾರಲು ಶ್ರಮಿಸಿದರೂ ಕನಕದಾಸರ ಮನೋಭಾವ ಮತ್ತು ಏಕಾಂಗಿ ಹೋರಾಟ ನಮಗೆ ವಿಭಿನ್ನವಾಗಿ ಕಾಣುತ್ತದೆ ಎಂದರು.

ತಹಶೀಲ್ದಾರ್‌ ಪ್ರಕಾಶ ಕುದರಿ, ಹಿರಿಯ ಅಧಿಕಾರಿಗಳಾದ ಮುನಿರಾಜು, ಬಸವರಾಜ ವರವಟ್ಟಿ, ಆರ್‌.ಎಸ್‌. ಮುಳ್ಳೂರ ಮತ್ತು ಹಿರಿಯ ಮುಖಂಡರಾದ ಯಲ್ಲಮ್ಮ ನಾಯ್ಕರ್‌, ಡಾ| ಲೋಹಿತ್‌ ನಾಯ್ಕರ್‌, ನಾಗರಾಜ ಗುರಿಕಾರ, ದೇವರಾಜ ಕಂಬಳಿ, ಪ್ರಕಾಶ ಉಡಕೇರಿ, ರಾಜಶ್ರೀ ಸಾಲಗಟ್ಟಿ ಸೇರಿದಂತೆ ಹಲವರು ಇದ್ದರು. ಎಸ್‌.ಕೆ. ರಂಗಣ್ಣವರ ಸ್ವಾಗತಿಸಿದರು. ಆರತಿ ದೇವಶಿಖಾಮಣಿ ನಿರೂಪಿಸಿದರು. ಡಾ| ಲೋಹಿತ್‌ ನಾಯ್ಕರ್‌ ವಂದಿಸಿದರು.

ಬಹುಮಾನ ವಿತರಣೆ
ನ.13ರಂದು ನಡೆದ ಜಿಲ್ಲಾಮಟ್ಟದ ಕನಕದಾಸರ ಜಯಂತಿ ಸಮಾರಂಭದಲ್ಲಿ ಜಿಲ್ಲಾಮಟ್ಟದ ಕನಕ ಸಾಹಿತ್ಯ ಲೋಕ ಪ್ರಬಂಧ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಾದ ಯರಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವನಿತಾ ಶಿ. ಹಿರೇಮಠ, ಹುಬ್ಬಳ್ಳಿ ನೇಕಾರ ನಗರದ ಸರ್ಕಾರಿ ಪ್ರೌಢಶಾಲೆಯ ಜ್ಯೋತಿ ಬಸವರಾಜ ಶಿರೋಳ, ಉಪ್ಪಿನಬೆಟಗೇರಿಯ ಎಸ್‌ಜೆವಿ ಪ್ರೌಢಶಾಲೆಯ ಗಂಗೋತ್ರಿ ವಿರೂಪಾಕ್ಷಪ್ಪ ಯಾವಗಲ್‌, ಕುಂದಗೋಳದ ಸದ್ಗುರು ಶಿವಾನಂದ ಬಾಲಿಕಾ ಪ್ರೌಢಶಾಲೆಯ ಶ್ರೀದೇವಿತಿ. ಹಳೇಮನಿ, ಕಲಘಟಗಿ ಚಳಮಟ್ಟಿ ಸರ್ಕಾರಿ ಪ್ರೌಢಶಾಲೆಯ ಶಿಲ್ಪಾ. ನಿ. ಮೋರೆ ಅವರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.