ಆಸರೆ ಮನೆ ರೇಪ್ ಕೇಸ್: ಬೃಜೇಶ್ ಠಾಕೂರ್ಗೆ ಜೈಲಲ್ಲಿ ಚಿತ್ರಹಿಂಸೆ
Team Udayavani, Dec 6, 2018, 7:01 PM IST
ಹೊಸದಿಲ್ಲಿ : ಪಟಿಯಾಲಾ ಜೈಲು ಅಧಿಕಾರಿಗಳು ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು ಗುರುವಾರ ಮುಜಫರಪುರ ಆಸರೆ ಮನೆ ಅತ್ಯಾಚಾರ ಪ್ರಕರಣದ ಮುಖ್ಯ ಆರೋಪಿ ಬೃಜೇಶ್ ಠಾಕೂರ್ ನನ್ನು ತತ್ಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಆದೇಶಿಸಿತು.
‘ನನ್ನಿಂದ ಹಣ ಸುಲಿಗೆ ಮಾಡುವುದಕ್ಕಾಗಿ ಪಟಿಯಾಲಾ ಜೈಲು ಸುಪರಿಂಟೆಂಡೆಂಟ್ ನನಗೆ ಚಿತ್ರಹಿಂಸೆ ಕೊಟ್ಟಿದ್ದಾರೆ’ ಎಂದು ಠಾಕೂರ್ ಹೇಳಿಕೊಂಡ ಕಾರಣ ಸುಪ್ರೀಂ ಕೋರ್ಟ್ ಆತನ ತುರ್ತು ವೈದ್ಯಕೀಯ ಪರೀಕ್ಷೆಯನ್ನು ಆದೇಶಿಸಿತು.
‘ಸೇವಾ ಸಂಕಲ್ಪ ಏವಂ ವಿಕಾಸ್ ಸಮಿತಿ’ ಎಂಬ ಎನ್ಜಿಓ ಸಂಸ್ಥೆಯ ಮಾಲಕನಾಗಿರುವ ಠಾಕೂರ್, ಮುಜಫರಪುರದಲ್ಲಿ ಆಸರೆ ಮನೆ ನಡೆಸುತ್ತಿದ್ದು ಅಲ್ಲಿ 34 ಅನಾಥ ಹುಡುಗಿಯರಿಗೆ ಮಾದಕ ದ್ರವ್ಯ ತಿನ್ನಿಸಿ, ಚಿತ್ರಹಿಂಸೆ ನೀಡಿ, ಅನೇಕ ತಿಂಗಳ ಕಾಲ ಅವರ ಮೇಲೆ ಅತ್ಯಾಚಾರ ನಡೆಸಲಾಗಿರುವುದು ಈ ಹಿಂದೆ ವರದಿಯಾಗಿತ್ತು.
ಸಿಬಿಐ ಕೋರಿಕೆ ಪ್ರಕಾರ ಬೃಜೇಶ್ ಠಾಕೂರ್ನನ್ನು ಕಳೆದ ಅ.11ರಂದು ಖುದಿರಾಮ್ ಬೋಸ್ ಕೇಂದ್ರ ಬಂಧೀಖಾನೆಯಿಂದ ಭಾಗಲ್ಪುರ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ