ಸಾಧಾರಣ ಮೊತ್ತಕ್ಕೆ ಸೌರಾಷ್ಟ್ರ ಕುಸಿತ


Team Udayavani, Dec 7, 2018, 6:00 AM IST

ban07121813medn.jpg

ರಾಜ್‌ಕೋಟ್‌: ಆತಿಥೇಯ ಸೌರಾಷ್ಟ್ರ ವಿರುದ್ಧ ಮೊದಲ್ಗೊಂಡ ರಣಜಿ ಮುಖಾಮುಖೀಯಲ್ಲಿ ಕರ್ನಾಟಕ ಮೊದಲ ದಿನವೇ ಹಿಡಿತ ಸಾಧಿಸಿದೆ. ಜೈದೇವ್‌ ಶಾ ಪಡೆ 9 ವಿಕೆಟಿಗೆ 288 ರನ್‌ ಗಳಿಸಿ ಮೊದಲ ದಿನದಾಟ ಮುಗಿಸಿದೆ.

ಜಗದೀಶ್‌ ಸುಚಿತ್‌ (104ಕ್ಕೆ 5) ಹಾಗೂ ಪವನ್‌ ದೇಶಪಾಂಡೆ (78ಕ್ಕೆ 3) ಅವರ ದಾಳಿಗೆ ಸಿಲುಕಿ ಸೌರಾಷ್ಟ್ರ ಒದ್ದಾಡಿತು. ಕಮಲೇಶ್‌ ಮಕ್ವಾನ (31) ಹಾಗೂ ಯುವರಾಜ್‌ ಚೂಡಾಸಮ (9) ಶುಕ್ರವಾರಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಜೈದೇವ್‌ ಏಕಾಂಗಿ ಹೋರಾಟ
ಸೌರಾಷ್ಟ್ರ ಪರ ನಾಯಕ ಜೈದೇವ್‌ ಶಾ ಏಕಾಂಗಿಯಾಗಿ ಬ್ಯಾಟಿಂಗ್‌ ಹೋರಾಟ ನಡೆಸಿ 97 ರನ್‌ ಹೊಡೆದರು. 159 ಎಸೆತ ಎದುರಿಸಿದ ಶಾ 9 ಬೌಂಡರಿ, 3 ಸಿಕ್ಸರ್‌ ಸಿಡಿಸಿ ಸೌರಾಷ್ಟ್ರ ತಂಡದ ಬಾದ್‌ಶಾ ಎನಿಸಿದರು. ತಂಡದ ಮೊತ್ತ 250 ರನ್‌ ಆಗಿದ್ದಾಗ ದೇಶಪಾಂಡೆ ಎಸೆತದಲ್ಲಿ ಸಮರ್ಥ್ಗೆ ಕ್ಯಾಚ್‌ ನೀಡಿದ ಶಾ ಕೇವಲ 3 ರನ್ನಿನಿಂದ ಶತಕ ತಪ್ಪಿಸಿಕೊಂಡರು.ಮೊದಲು ಬ್ಯಾಟಿಂಗಿಗೆ ಇಳಿದ ಸೌರಾಷ್ಟ್ರಕ್ಕೆ ಆರಂಭಿಕರಾದ ಹಾರ್ವಿಕ್‌ ದೇಸಾಯಿ (26) ಹಾಗೂ ಸ್ನೆಲ್‌ ಪಟೇಲ್‌ (22) 30 ರನ್‌ ಜತೆಯಾಟ ನಿಭಾಯಿಸಿದರು. ಈ ವೇಳೆ ದಾಳಿಗಿಳಿದ ಸುಚಿತ್‌ ತಮ್ಮ ಸ್ಪಿನ್‌ ಕೈಚಳಕದಿಂದ ವಿಕೆಟ್‌ ಬೇಟೆ ಆರಂಭಿಸಿದರು.

ಅನಂತರ ಕ್ರೀಸ್‌ ಇಳಿದ ಅವಿ ಬರೋಟ್‌ ಖಾತೆ ತೆರೆಯುವ ಮೊದಲೇ ಸುಚಿತ್‌ ಬೌಲಿಂಗ್‌ನಲ್ಲಿ ಬಿ.ಆರ್‌. ಶರತ್‌ ನಡೆಸಿದ ಅದ್ಭುತ ಸ್ಟಂಪ್‌ಗೆ ಬಲಿಯಾದರು. ಅರ್ಪಿತ್‌ ವಸವಾಡ  (38 ರನ್‌) ತಂಡಕ್ಕೆ ಸ್ವಲ್ಪ ಮಟ್ಟಿನ ಚೇತರಿಕೆ ನೀಡಿದರು. ಮೊತ್ತವನ್ನು 70ರ ತನಕ ವಿಸ್ತರಿಸಿದರು. ಈ ವೇಳೆ ಸುಚಿತ್‌ ಎಸೆತವನ್ನು ಅಂದಾಜಿಸಲಾಗದೆ ಶರತ್‌ಗೆ ಕ್ಯಾಚ್‌ ನೀಡಿದ ಹಾರ್ವಿಕ್‌ ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದರು.

ಬಳಿಕ ಬಂದ ಶೆಲ್ಡನ್‌ ಜಾಕ್ಸನ್‌ (4) ಅವರನ್ನೂ ಸುಚಿತ್‌ ಬೇಗನೆ ಔಟ್‌ ಮಾಡಿದರು. ಸ್ಕೋರ್‌ 119 ರನ್‌ ಆಗಿದ್ದಾಗ ಪವನ್‌ ಎಸೆತದಲ್ಲಿ ವಿನಯ್‌ ಕುಮಾರ್‌ಗೆ ಕ್ಯಾಚ್‌ ನೀಡಿದ ಅರ್ಪಿತ್‌ ಐದನೆಯವರಾಗಿ  ಔಟಾದರು. 119 ರನ್ನಿಗೆ ಅಗ್ರ 5 ವಿಕೆಟ್‌ ಕಳೆದುಕೊಂಡಿದ್ದ ಸೌರಾಷ್ಟ್ರ ತೀವ್ರ ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ  ಜೈದೇವ್‌ ಶಾ ಕಪ್ತಾನನ ಆಟವಾಡಿ ತಂಡದ ರಕ್ಷಣೆಗೆ ನಿಂತರು. ಕೆಳ ಕ್ರಮಾಂಕದಲ್ಲಿ ಪ್ರೇರಕ್‌ ಮಂಕಡ್‌ (37) ಗಮನಾರ್ಹ ಬ್ಯಾಟಿಂಗ್‌ ನಡೆಸಿದರು.

ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-9 ವಿಕೆಟಿಗೆ 288 (ಶಾ 97, ವಸವಾಡ 38, ಮಂಕಡ್‌ 37, ಮಕ್ವಾನಾ ಬ್ಯಾಟಿಂಗ್‌ 31, ಹಾರ್ವಿಕ್‌ 26, ಪಟೇಲ್‌ 22, ಸುಚಿತ್‌ 104ಕ್ಕೆ 5, ದೇಶಪಾಂಡೆ 78ಕ್ಕೆ 3).

ಜೈದೇವ್‌ ಶಾ ಕ್ರಿಕೆಟ್‌ ವಿದಾಯ
ಸೌರಾಷ್ಟ್ರ ರಣಜಿ ತಂಡದ ನಾಯಕ ಜೈದೇವ್‌ ಶಾ ಕರ್ನಾಟಕ ವಿರುದ್ಧದ ಪಂದ್ಯದ ಬಳಿಕ ಎಲ್ಲ ಮಾದರಿಯ ಕ್ರಿಕೆಟಿಗೆ ವಿದಾಯ ಘೋಷಿಸಲು ತೀರ್ಮಾನಿಸಿದ್ದಾರೆ.

ಬಿಸಿಸಿಐ ಮಾಜಿ ಕಾರ್ಯದರ್ಶಿ ನಿರಂಜನ್‌ ಶಾ ಅವರ ಮಗನಾಗಿರುವ ಜೈದೇವ್‌ ಸೌರಾಷ್ಟ್ರ ಪರ 111 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದಾರೆ. ಇದು ರಣಜಿ ನಾಯಕತ್ವದ ದಾಖಲೆಯಾಗಿದೆ.

ಜೈದೇವ್‌ ಶಾ ನೇತೃತ್ವದಲ್ಲಿ ಸೌರಾಷ್ಟ್ರ ತಂಡ 2007-08ರ ರಣಜಿ ಟ್ರೋಫಿ ಚಾಂಪಿಯನ್‌ ಆಗಿತ್ತು. ಈ ಯಶಸ್ಸಿನಿಂದ ಅವರಿಗೆ ಇಸ್ರೇಲ್‌ಗೆ ಚುಟುಕ ಪ್ರವಾಸ ಕೈಗೊಂಡ ಭಾರತ “ಎ’ ತಂಡದ ನಾಯಕತ್ವ ಒಲಿದಿತ್ತು. 2002-03ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾಪರ್ಣೆ ಮಾಡಿದ ಶಾ ಒಟ್ಟು 119 ಪಂದ್ಯಗಳನ್ನು ಆಡಿದ್ದು, 29. 67ರ ಸರಾಸರಿಯಲ್ಲಿ 5252 ರನ್‌ ಗಳಿಸಿದ್ದಾರೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.