ರಾಮ ಮಂದಿರಕ್ಕಾಗಿ ಸಂತರ ಪ್ರಾರ್ಥನೆ
Team Udayavani, Dec 7, 2018, 6:00 AM IST
ಲಕ್ನೋ/ಅಯೋಧ್ಯೆ: ಬಾಬರಿ ಮಸೀದಿ ಧ್ವಂಸವಾಗಿ 26 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಾರ ಅಯೋಧ್ಯೆಯಲ್ಲಿ ಶೀಘ್ರವೇ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಆಶಯದೊಂದಿಗೆ ಸಾಧು ಸಂತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಎಚ್ಪಿ, ಬಜರಂಗ ದಳ ಮತ್ತು ಇತರ ಹಿಂದೂ ಸಂಘಟನೆಗಳು ನಿಯೋಜಿಸಿದಂತೆಯೇ ಶೌರ್ಯ ದಿನವನ್ನಾಗಿ ಆಚರಿಸಿ, ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿವೆ. ಇನ್ನೊಂದೆಡೆ ಮುಸ್ಲಿಂ ಸಂಘಟನೆಗಳು “ಕರಾಳ ದಿನ’ ವನ್ನಾಗಿ ಆಚರಿಸಿವೆ.
ಇದರ ಜತೆಗೆ ಶೀಘ್ರ ಮಂದಿರ ನಿರ್ಮಾಣವಾಗಲಿ ಎಂದು ಸಾಧು- ಸಂತರಿಂದ ವಿಶೇಷ ಪ್ರಾರ್ಥನೆಯನ್ನೂ ನಡೆಸಲಾಗಿದೆ. ನಾಕಾ ಹುನುಮಾನ್ ಗಾಹಿಯಲ್ಲಿ ವಿಶೇಷ ಆರತಿಯನ್ನೂ ಕೈಗೊಳ್ಳಲಾಗಿದೆ.ಅಯೋಧ್ಯೆಯಲ್ಲಿ ಮಾತ ನಾಡಿದ ದಿಗಂಬರ ಅಖಾಡಾದ ಮಹಾಂತ ಸುರೇಶ್ ದಾಸ್, ದೇಶದಲ್ಲಿ, ಜನರ ಕೋಟೇ ಅವುಗಳಿಗಿಂತ ಮೇಲ್ಪಟ್ಟದ್ದು ಎಂದಿದ್ದಾರೆ.
ಪಕ್ಷಗಳ ನಡುವೆ ಸಹಮತದಿಂದಲೇ ರಾಮ ಮಂದಿರ ನಿರ್ಮಾಣ ಆಗಬೇಕು. ಅದುವೇ ಬಿಜೆಪಿಯ ಆದ್ಯತೆ ಎಂದು ಉತ್ತರ ಪ್ರದೇಶ ಡಿಸಿಎಂ ಕೇಶವ ಮೌರ್ಯ ಹೇಳಿದ್ದಾರೆ. ಇದೇ ವೇಳೆ, ರಾಮಜನ್ಮಭೂಮಿ ವಿವಾದದ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಮಾತನಾಡಿ, ಮುಸ್ಲಿಂ ಸಮುದಾಯವು ಈ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದೆ. ಆದರೆ, ಯಾವುದೇ ಪ್ರತಿಭಟನೆ, ರೋಡ್ಶೋ ಕೈಗೊಂಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ