ಮಾರ್ಚ್ ಅಂತ್ಯಕ್ಕೆ ಗಂಗಾವತಿಗೆ ರೈಲು
Team Udayavani, Dec 7, 2018, 3:36 PM IST
ಗಂಗಾವತಿ: ಬಹುದಿನಗಳ ಕನಸಾಗಿರುವ ಗಂಗಾವತಿವರೆಗಿನ ರೈಲ್ವೆ ಮಾರ್ಗದಲ್ಲಿ 2019ರ ಮಾರ್ಚ್ ಅಂತ್ಯದ ವೇಳೆ ರೈಲು ಓಡಿಸಲು ರೈಲ್ವೆ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಗುರುವಾರ ನೈರುತ್ಯ ರೈಲ್ವೆ ವಲಯದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಅಧಿಕಾರಿಗಳ ತಂಡ ಗಂಗಾವತಿ ರೈಲ್ವೆ ನಿಲ್ದಾಣ ಹಾಗೂ ವಸತಿ ಗೃಹಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗಂಗಾವತಿಯಿಂದ ಚಿಕ್ಕಬೆಣಕಲ್ಲವರೆಗೆ ರೈಲ್ವೆ ಮಾರ್ಗದ ಮೇಲೆ ಪರೀಕ್ಷಾರ್ಥ ಗಾಡಿಯ ಮೇಲೆ ಅಧಿಕಾರಿಗಳು ತೆರಳಿ ಗುಣಮಟ್ಟ ಪರಿಶೀಲನೆ ನಡೆಸಿದರು. ಭೇಟಿಯ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಸಸಿಗಳನ್ನು ನೆಡಲಾಯಿತು. ಗುತ್ತಿಗೆದಾರರಿಂದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಮುಖ್ಯ ಅಭಿಯಂತರ ರಾಮಗೋಪಾಲ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಹಾಗೂ ನಾಗರೀಕ ಹಿತರಕ್ಷಣಾ ವೇದಿಕೆ ಸಂಚಾಲಕ ವಿ.ಪಿ. ಗುಪ್ತಾ ಮಾತನಾಡಿ, ಈಗಾಗಲೇ ಗಂಗಾವತಿ ರೈಲ್ವೆ ನಿಲ್ದಾಣದವರೆಗೆ ರೈಲು ಸಂಚಾರ ಮಾಡಬೇಕಿತ್ತು. ರೈಲ್ವೆ ಹಳಿಯ ಕೊರತೆಯಿಂದ ಮಾರ್ಗದ ಕಾಮಗಾರಿ ವಿಳಂಬವಾಗಿದೆ. ದೇಶದಲ್ಲಿ ರೈಲ್ವೆ ಅಪಘಾತ ಹಾಗೂ ಮಾರ್ಗ ಪರಿವರ್ತನೆ ಹಿನ್ನೆಲೆಯಲ್ಲಿ ಹಳಿ ಕೊರತೆಯಾಗಿದೆ. ಈಗಾಗಲೇ ಗಂಗಾವತಿ ತನಕ ಹಳೆಯ ಹಳಿಗಳ ಜೋಡಣೆಯಾಗಿದ್ದು, ಫೆಬ್ರುವರಿ ವೇಳೆ ನೂತನ ಹಳಿ ಜೋಡಣೆ ಮಾಡಿ ಮಾರ್ಚ್ ಅಂತ್ಯದ ವೇಳೆಗೆ ಗಂಗಾವತಿಯಿಂದ ರೈಲು ಸಂಚಾರ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಗಂಗಾವತಿಯಿಂದ ಗೋವಾ ಹಾಗೂ ಹೈದ್ರಾಬಾದ್ ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ರೈಲು ಓಡಿಸುವಂತೆ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಂಸದರಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ