ಅಗಸನಹಳ್ಳಿಯಲ್ಲಿ ಶುದ್ಧ ನೀರಿನ ಘಟಕ ಉದ್ಘಾಟನೆ
Team Udayavani, Dec 7, 2018, 3:49 PM IST
ಬ್ಯಾಡಗಿ: ಪಟ್ಟಣಕ್ಕೆ ಒಟ್ಟು 29 ಕೋಟಿ ವೆಚ್ಚದ ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಶೀಘ್ರದಲ್ಲಿಯೇ ಪಟ್ಟಣದ ಪ್ರತಿಯೊಬ್ಬ ಸಾರ್ವಜನಿಕರಿಗೂ ದಿನದ 24 ಗಂಟೆಯೂ ಶಾಶ್ವತ ಕುಡಿಯುವ ನೀರು ಒದಗಿಸಲಾಗುವುದು ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದರು.
ಗುರುವಾರ ಪಟ್ಟಣದ ಅಗಸನಹಳ್ಳಿಯಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಇಲಾಖೆ ಹಾಗೂ ಪುರಸಭೆ ಆಶ್ರಯದಲ್ಲಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಒಳಚರಂಡಿ ಕಾಮಗಾರಿ ಜೊತೆಯಲ್ಲಿಯೇ ನಿರಂತರ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ಕೇವಲ 30 ಸಾವಿರ ಜನಸಂಖ್ಯೆ ಹೊಂದಿರುವ ಬ್ಯಾಡಗಿ ಪಟ್ಟಣಕ್ಕೆ ಇಂತಹದ್ದೊಂದು ಯೋಜನೆ ಅನುಷ್ಠಾನಗೊಳ್ಳುತ್ತಿರುವುದು ನಮ್ಮೆಲ್ಲರ ಪುಣ್ಯವೆಂದರು.
ಕಲುಷಿತ ನೀರಿಗೆ ಜಲಜೀವಿಗಳೇ ನಲುಗಿ ಹೋಗಿದ್ದು, ನಮ್ಮಂತಹ ಸಾಮಾನ್ಯ ಮನುಷ್ಯರ ಗತಿಯೇನು ? ರೋಗಕ್ಕೆ ಅಂಜಿಕೊಂಡಿರುವ ಮನುಷ್ಯ ಅನಿವಾರ್ಯವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳ ಮೊರೆ ಹೋಗಬೇಕಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಸರ್ಕಾರದ ಮಟ್ಟಿಗೆ ಹೆಮ್ಮೆಯ ವಿಷಯ. ಆದರೆ, ಅವುಗಳ ನಿರ್ವಹಣೆಯಿಲ್ಲದೇ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದರು.
ಈ ಮೊದಲು ಎಲ್ಲ ಕಡೆಗಳಲ್ಲಿಯೂ ನೀರು ಸೇದುವ ಬಾವಿಗಳಲ್ಲಿ ನೀರು ಸಿಗುತ್ತಿತ್ತು. ಇಲ್ಲಿಯೂ ಸಹ ಸೋಸಿದ ನೀರು ಸಾರ್ವಜನಿಕರಿಗೆ ಸಿಗುತ್ತಿತ್ತು, ಬಳಿಕ ಪರಿಚಿತವಾದ ಕೊಳವೆಬಾವಿಗಳಲ್ಲಿಯೂ ಸುಮಾರು 150 ರಿಂದ 200 ಅಡಿ ಆಳದಲ್ಲಿ ನೀರು ಲಭ್ಯವಿತ್ತು. ಅಂತರ್ಜಲ ಕುಸಿತದ ಪರಿಣಾಮವಾಗಿ ಇಂದು 800 ಅಡಿ ಆಳಕ್ಕೆ ಕೊರೆದರೂ ನೀರು ಸಿಗುತ್ತಿಲ್ಲ. ಹೀಗಾಗಿ ನೀರಿನ ಸದ್ಭಳಕೆ ಬಗ್ಗೆ ಸಾಮೂಹಿಕ ಹೊಣೆಗಾರಿಕೆ ತೋರುವಂತೆ ಮನವಿ ಮಾಡಿದರು.
ಸಾಮಾನ್ಯವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಸಾರ್ವಜನಿಕರ ನಿರ್ಲಕ್ಷ್ಯಕ್ಕೆ ಒಳಗಾಗಿ ಸ್ಥಗಿತಗೊಂಡ ಉದಾಹರಣೆಗಳಿವೆ. ಅಲ್ಲದೇ ಕೆಲವರು ಅದರಲ್ಲಿ ಹಾಕಬೇಕಾದ 2 ರೂ. ಬದಲಾಗಿ ಅದೇ ಮಾದರಿಯ ರಟ್ಟಿನ ಕಾಯನ್ ಗಳನ್ನು ಹಾಕುತ್ತಿರುವುದು ಕಂಡು ಬಂದಿದ್ದು, ಇಂತಹ ಕೃತ್ಯವೆಸಗದೇ ಸಾರ್ವಜನಿಕರು ಇದು ನಿಮ್ಮ ಆಸ್ತಿ ಎಂದು ಭಾವಿಸಿ ಘಟಕದ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ವೇದಿಕೆಯಲ್ಲಿ ಪುರಸಭೆ ಉಪಾಧ್ಯಕ್ಷೆ ದಾಕ್ಷಾಯಣಮ್ಮ ಪಾಟೀಲ, ಸದಸ್ಯರಾದ ಮುರಿಗೆಪ್ಪ ಶೆಟ್ಟರ, ಯಲ್ಲಮ್ಮ ದಾವಣಗೇರಿ, ಮುಖ್ಯಾ ಧಿಕಾರಿ ವಿ.ಎಂ. ಪೂಜಾರ ಜಿಪಂ ಮಾಜಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಎಪಿಎಂಸಿ ಮಾಜಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಬಿಎಲ್ ಬಿಸಿ ಸದಸ್ಯ ಸುರೇಶ ಯತ್ನಳ್ಳಿ, ಸುರೇಶ ಅಸಾದಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ