ಇಂದು ಎಚ್‌.ಡಿ.ಕೋಟೆಯಲ್ಲಿ ಅಕ್ಷರ ಜಾತ್ರೆ


Team Udayavani, Dec 7, 2018, 4:55 PM IST

mys-1.jpg

ಎಚ್‌.ಡಿ.ಕೋಟೆ: ನಾಡು, ನುಡಿ, ಸಂಸ್ಕೃತಿಯ ಪ್ರತೀಕ ಎಂಬಂತಿರುವ ಗಡಿ ನಾಡು ವನಸಿರಿ ನಾಡು ಖ್ಯಾತಿಯ ಎಚ್‌.ಡಿ.ಕೋಟೆಯಲ್ಲಿ 4ನೇ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ ವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶುಕ್ರವಾರ ಹಾಗೂ ಶನಿವಾರ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಗಳು ಭರ ದಿಂದ ನಡೆದಿದ್ದು, ಈಗಾಗಲೇ ಪಟ್ಟಣದ ಮುಖ್ಯರಸ್ತೆಗಳು ಸೇರಿದಂತೆ ಹಲವು ಕಡೆ ಸ್ವಾಗತ ಕೋರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮ ನಡೆಯುವ ಅಂಬೇಡ್ಕರ್‌ ಭವನದ ಆವರಣದಲ್ಲಿ ಬೃಹತ್‌ಗಾತ್ರದ ಶಾಮಿಯಾನ ಹಾಕಲಾಗಿದೆ. ಮೆರವಣಿಗೆ ಹೊರಡುವ ಮುಖ್ಯ ರಸ್ತೆಗಳನ್ನು ಮಾವಿನ ತೋರಣ ಗಳಿಂದ ಶೃಂಗರಿಸಿದ್ದು, ಕಣ್ಮನ ಸೆಳೆಯುತ್ತಿದೆ.

ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಕವಿಗೋಷ್ಠಿ, ವಿಚಾರ ಗೋಷ್ಠಿ, ರೈತಗೋಷ್ಠಿ, ದಲಿತ ಚಿಂತನೆ ಇನ್ನಿತರ ಗೋಷ್ಠಿಗಳು ಜರುಗಲಿದ್ದು, ಸಾಹಿತಿ, ಸೃಜನಶೀಲ ಬರಹಗಾರ, ಪಕ್ಷಿತಜ್ಞ, ಸಾವಯವ ಕೃಷಿಕರು ಆದ ತಾಲೂಕಿನ ಬೀಚನಹಳ್ಳಿ ಕ್ಷೀರಸಾಗರ್‌ ಸಮ್ಮೇಳನಾಧ್ಯಕ್ಷರಾಗಿದ್ದಾರೆ. 

ಧ್ವಜಾರೋಹಣ: ಸಮ್ಮೇಳನ ನಡೆಯುವ ಅಂಬೇಡ್ಕರ್‌ ಭವನದ ಆವರಣದಲ್ಲಿ ಶಾಸಕ ಅನಿಲ್‌ ಚಿಕ್ಕಮಾದು ರಾಷ್ಟ್ರಧ್ವಜ ವನ್ನು, ತಹಶೀಲ್ದಾರ್‌ ಆರ್‌.ಮಂಜುನಾಥ್‌ ನಾಡ ಧ್ವಜವನ್ನು, ಕಸಾಪ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ ಪರಿಷತ್‌ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಸಮ್ಮೇಳನಾಧ್ಯಕ್ಷರ ಮೆರವಣಿಗೆ: ಮೆರವಣಿ ಗೆಗೆ ತಾಪಂ ಅಧ್ಯಕ್ಷೆ ಮಂಜುಳಾ ಚಾಲನೆ ನೀಡಲಿದ್ದು, ಪೂರ್ಣಕುಂಭ ಹಾಗೂ ಜಾನಪದ ಕಲಾತಂಡಗಳೊಂದಿಗೆ ಸಭಾಂಗಣದವರೆಗೆ ಮೆರವಣಿಗೆ ನಡೆಯ ಲಿದೆ. ನಾಡು, ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳು, ವೀರ ಗಾಸೆ, ಕಂಸಾಳೆ, ವೀರಭದ್ರ ಕುಣಿತ, ನಗಾರಿ, ಡೊಳ್ಳುಕುಣಿತ ಹಾಗೂ ತಾಲೂ ಕಿನ ವಿವಿಧ ಶಾಲಾಮಕ್ಕಳು ಬ್ಯಾಂಡ್‌ಗಳು ಮುಂತಾದ ಕಲಾತಂಡಗಳು ಭಾಗವಹಿಸಲಿವೆ.
 
ಉದ್ಘಾಟನಾ ಸಮಾರಂಭ: ಶುಕ್ರವಾರ ಬೆಳಗ್ಗೆ 11ಕ್ಕೆ ಸ್ವಾಗತ ನೃತ್ಯ, ನಾಡಗೀತೆ, ರೈತಗೀತೆ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್‌ ಉದ್ಘಾಟಿಸಲಿದ್ದು, ಶಾಸಕ ಅನಿಲ್‌ ಚಿಕ್ಕಮಾದು ಸ್ವಾಗತಿಸ ಲಿರುವ ಕಾರ್ಯ ಕ್ರಮದಲ್ಲಿ ಹಿರಿಯ ವಿದ್ವಾಂಸ ಪ್ರೋ. ಮಲೆಯೂರು ಗುರು ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ. ವೈ.ಡಿ.ರಾಜಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಳಿದ್ದು, ಸಂಸದ ಆರ್‌. ಧ್ರುವನಾರಾಯಣ್‌, ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ್‌ ಮತ್ತಿತರರ ಗಣ್ಯರು ಉಪಸ್ಥಿತರಿರುವ ಸಮಾರಂಭದಲ್ಲಿ ಸಾಹಿತಿ ಕ್ಷೀರಸಾಗರ್‌ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡಲಿದ್ದಾರೆ. 

ಕವಿಗೋಷ್ಠಿ: ಮಧ್ಯಾಹ್ನ 4.30ಕ್ಕೆ ಕವಿಗೋಷ್ಠಿ, ವಿಶೇಷ ಗೋಷ್ಠಿ ನೇರವೆರಲಿದ್ದು, ಡಿ.8ರ ಎರಡನೇ ದಿನವೂ ಗೋಷ್ಠಿಗಳು ನಡೆಯಲಿದ್ದು, ಸಂಜೆ 5ಗಂಟೆಗೆ ನಡೆವ ಸಮಾರೋಪದಲ್ಲಿ ಶಾಸಕ ಅನಿಲ್‌ ಅಧ್ಯಕ್ಷತೆ ವಹಿಸಲಿದ್ದು, ಕವಿ ಡಾ. ಟಿ.ಸಿ. ಪೂರ್ಣಿಮಾ ಸಮಾರೋಪ ಭಾಷಣ ಮಾಡಲಿದ್ದಾರೆ.
ವಿಚಾರಗೋಷ್ಠಿ: ಮಧ್ಯಾಹ್ನ 3ಕ್ಕೆ “ಹೆಗ್ಗಡ ದೇವನಕೋಟೆ ತಾಲೂಕು ದರ್ಶನ’ ಕುರಿತು ವಿಚಾರಗೋಷ್ಠಿ ಏರ್ಪಡಿಸ ಲಾಗಿದ್ದು, ಗೋಷ್ಠಿಯನ್ನು ಮೈಸೂರು ಸಾರ್ವಜನಿಕ ಗ್ರಂಥಾಲಯ ಉಪ ನಿರ್ದೇಶಕ ಡಾ. ಬಿ. ಮಂಜುನಾಥ್‌ ಉದ್ಘಾಟಿಸಲಿದ್ದು, ಉಪನ್ಯಾಸಕ ಎಂ.ಎನ್‌. ರವಿಶಂಕರ್‌ ತಾಲೂಕು ಸಂಸ್ಕೃತಿ ಸೊಬಗು ಮತ್ತು ಶಾಸನಗಳು ಎಂಬ ವಿಚಾರ ಮಂಡನೆ ಮಾಡಲಿದ್ದಾರೆ. 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.