ಏಕ ಸಂಸ್ಕೃತಿಗೆ ತಳ್ಳುವ ಒತ್ತಡ ವೃದ್ಧಿ 


Team Udayavani, Dec 7, 2018, 5:28 PM IST

7-december-20.gif

ಧಾರವಾಡ: ಇಂದು ದೇಶದಲ್ಲಿ ಏಕ ಸಂಸ್ಕೃತಿಯನ್ನು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ. ಆದರೆ, ನಮಗೆ ಬಹು ಸಂಸ್ಕೃತಿಯ ಸಮಾಜದ ಅಗತ್ಯವಿದೆ ಎಂದು ಜಗದ್ಗುರು ತೋಂಟದಾರ್ಯ ಶಾಖಾ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ವಿಶ್ವವಿದ್ಯಾಲಯದ ಡಾ| ಬಿ.ಆರ್‌. ಅಂಬೇಡ್ಕರ್‌ ವಿಭಾಗವು ಸುವರ್ಣ ಮಹೋತ್ಸವ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಾ| ಬಿ.ಆರ್‌. ಅಂಬೇಡ್ಕರ್‌ 62ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ನಾವು ಸಂಪ್ರದಾಯವಾದಿಗಳ ಕೈಗೊಂಬೆ ಆಗಿದ್ದು, ಏಕ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿದ್ದೇವೆ. ಹೀಗಾಗಿ ನಮಗೆ ಅಂಬೇಡ್ಕರ, ಬುದ್ಧ ಮತ್ತು ಬಸವ ಚಿಂತನೆಗಳು ಬೇಕಾಗಿವೆ. ದ್ರಾವಿಡ ಸಂಸ್ಕೃತಿಯನ್ನು ಮರುಸ್ಥಾಪಿಸಬೇಕಾದ ಸಂದರ್ಭ ಒದಗಿ ಬಂದಿದೆ ಎಂದರು.

ಸಮಾಜದಲ್ಲಿಂದು ದಲಿತರಿಗೆ ಸಂವಿಧಾನಾತ್ಮಕವಾಗಿ ಮಾತ್ರ ಗೌರವ ಕೊಡುತ್ತಿದ್ದಾರೆ ಹೊರತು ಮನಃಪೂರ್ವಕವಾಗಿ ಅಲ್ಲ. ಈ ದೇಶ ಉಳಿಯ ಬೇಕಾದರೆ ಶ್ರಮಿಕರ ಸಂಸ್ಕೃತಿಯ ದ್ರಾವಿಡ ಸಂಸ್ಕೃತಿ ಬೇಕು. ಅದರಲ್ಲೂ ವಿವೇಕಾನಂದರು, ಕನಕದಾಸರು, ಬಸವಣ್ಣವರು ನೀಡಿರುವ ಸಂದೇಶ, ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. 

ಮಾಜಿ ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಮಾತನಾಡಿ, ಕೇಂದ್ರ ಸರಕಾರ ಇಂದು ಸುಪ್ರೀಂ ಕೋರ್ಟ್‌ಗೆ ನಿರ್ದೇಶನ ಮಾಡುತ್ತಿದೆ. ಸಂವಿಧಾನ ರಕ್ಷಣೆ ಮಾಡುವವರು ನಾಲಿಗೆಯನ್ನು ಕತ್ತರಿಸಿ ಎಂದು ಅಪ್ಪಣೆ ಮಾಡುತ್ತಿದ್ದಾರೆ. ಮತದಾನದ ಮೂಲಕ ಸಂವಿಧಾನ ರಕ್ಷಣೆ ಮಾಡಬೇಕಾದ್ದು ನಮ್ಮ ಕರ್ತವ್ಯವಾಗಿದೆ. ಜಾತಿ ರಹಿತ, ವರ್ಗ ರಹಿತ ಸಮಾಜ ನಿರ್ಮಿಸಬೇಕಾದ ಅವಶ್ಯಕತೆ ಹೆಚ್ಚಿದೆ ಎಂದರು.

ಕುಲಪತಿ ಪ್ರೊ| ಪ್ರಮೋದ ಗಾಯಿ ಅಧ್ಯಕ್ಷತೆ ವಹಿಸಿದ್ದರು. ಜನವಾಡದ ಅಲ್ಲಮ ಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ಕುಲಸಚಿವ ಪ್ರೊ| ಕೆ.ಎಂ ಹೊಸಮನಿ, ಹಣಕಾಸು ಅಧಿಕಾರಿ ಡಾ| ಆರ್‌.ಎಲ್‌. ಹೈದ್ರಾಬಾದ, ಮೌಲ್ಯಮಾಪನ ಕುಲಸಚಿವ ಡಾ| ಎನ್‌.ಎಂ. ಸಾಲಿ, ಪ್ರಾಧ್ಯಾಪಕರಾದ ಡಾ| ಶಿವರುದ್ರ ಕಲ್ಲೋಳಕರ, ಡಾ| ಸದಾಶಿವ ಮರ್ಜಿ, ಡಾ| ಬಿ.ಕೆ.ಎಸ್‌. ವರ್ಧನ್‌, ಡಾ| ಜಿ.ಬಿ. ನಂದನ, ಅಂಬೇಡ್ಕರ ವಿಭಾಗದ ಸಂಯೋಜಕರಾದ ಡಾ| ಸುಭಾಸಚಂದ್ರ ನಾಟಿಕರ ಇದ್ದರು.

ನಾನೆಂದೂ ಬ್ರಾಹ್ಮಣ ವಿರೋಧಿಯಲ್ಲ. ಬದಲಾಗಿ ಸಂಪ್ರದಾಯ ವಿರೋಧಿಯಷ್ಟೆ. ಈ ದೇಶ ಮಾಂಸ ತಿಂದವರಿಂದ ಹಾಳಾಗಿಲ್ಲ, ಬದಲಾಗಿ ತುಪ್ಪ ತಿಂದವರಿಂದ ಹಾಳಾಗಿದೆ ಎಂದು ಹೇಳಿದನ್ನೇ ತಪ್ಪಾಗಿ ಅರ್ಥೈಸಲಾಗಿದೆ. ಒಂದು ವೇಳೆ ಸಂವಿಧಾನ ಇಲ್ಲದಿದ್ದರೆ ನನ್ನನ್ನು ಗುಂಡಿಟ್ಟೋ ಅಥವಾ ಪ್ರಸಾದದಲ್ಲಿಯೇ ವಿಷ ಹಾಕಿ ಕೊಲ್ಲುತ್ತಿದ್ದರು. ಅದಕ್ಕಾಗಿ ಪ್ರಸಾದ ಮಾಡಲೂ ಹೆದರುವಂತಾಗಿದೆ.
. ನಿಜಗುಣಾನಂದ ಸ್ವಾಮೀಜಿ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.