ಇಂದಿನಿಂದಲೇ ಸಾಲಮನ್ನಾಗೆ ಚಾಲನೆ
Team Udayavani, Dec 8, 2018, 6:15 AM IST
ಮಂಡ್ಯ: ರೈತರ ಸಾಲಮನ್ನಾ ಪ್ರಕ್ರಿಯೆಗೆ ಶನಿವಾರದಿಂದಲೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಭತ್ತ ಕೊಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭತ್ತ ರಾಶಿಗೆ ಪೂಜೆ ಸಲ್ಲಿಸಿ, ಅವರು ಮಾತನಾಡಿದರು. ಮೊದಲ ಹಂತದಲ್ಲಿ ಸಾಲ ಮನ್ನಾಗೆ ದೊಡ್ಡಬಳ್ಳಾಪುರ ಮತ್ತು ಸೇಡಂನಿಂದ ಚಾಲನೆ ನೀಡಲಾಗುವುದು.
ಸಾಲಮನ್ನಾ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ಒಟ್ಟು 44 ಲಕ್ಷ ಕುಟುಂಬಗಳಿಗೆ ಋಣಮುಕ್ತ ಪ್ರಮಾಣ ಪತ್ರ ನೀಡಲು ನಿರ್ಧಾರ ಮಾಡಿದ್ದೇನೆ.ಅದನ್ನು ಸಹಿಸದೆ ಬಿಜೆಪಿ ನಾಯಕರು ರೈತರಲ್ಲಿ ಅಪನಂಬಿಕೆ ಮೂಡಿಸುತ್ತಿದ್ದಾರೆ. ಒಂದು ವೇಳೆ ನನಗೆ ಸಾಲ ಮನ್ನಾ ಮಾಡಲಾಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.
ಸರ್ಕಾರದಿಂದಲೇ ಸಾಲ: ಇಸ್ರೇಲ್ನಲ್ಲಿ ರೈತರು ಒಟ್ಟಾಗಿ ವ್ಯವಸಾಯ ಮಾಡುತ್ತಾರೆ. ಅದೇ ರೀತಿ ಇಲ್ಲಿಯೂ ರೈತರು ಒಗ್ಗೂಡಿ ಕೃಷಿ ಮಾಡಲು ತೀರ್ಮಾನ ಮಾಡಿದರೆ ಹೊರಗಿನಿಂದ ಸಾಲ ಪಡೆಯುವ ಅವಶ್ಯಕತೆ ಇಲ್ಲ. ಸರ್ಕಾರವೇ ಆರ್ಥಿಕ ನೆರವು ನೀಡಲಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಗೋದಾಮು, ಮಾರುಕಟ್ಟೆ, ಬೆಳೆಗಳ ಸಂರಕ್ಷಣೆಗೆ ಶೀತಲೀಕರಣ ಘಟಕ ಸ್ಥಾಪನೆ ಮಾಡುವುದು ನನ್ನ ಕನಸಾಗಿದೆ. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ರೈತರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ