ನಿಮ್ಮ ಮಗು ಹೇಗಿದೆಯೋ ಹಾಗೆಯೇ ಸ್ವೀಕರಿಸಿ, ಪ್ರೀತಿಸಿರಿ: ಪೂರ್ಣಿಮಾ


Team Udayavani, Dec 8, 2018, 10:57 AM IST

8-december-4.gif

ಮೂಡುಬಿದಿರೆ: ಅಂಗವಿಕಲ ಮಗು ಹುಟ್ಟಿದೆಯಲ್ಲೋ ಎಂದು ಕೊರಗುತ್ತ, ಕೀಳರಿಮೆ ಬೆಳೆಸಿಕೊಳ್ಳುತ್ತ ಮಗುವನ್ನು ಉಪೇಕ್ಷಿಸಬೇಡಿ. ನಿಮ್ಮ ಮಗು ಹೇಗಿದೆಯೋ ಹಾಗೆಯೇ ಸ್ವೀಕರಿಸಿ, ಪ್ರೀತಿಸಿರಿ. ಮಗುವಿಗೆ ತಾಯಿ ತಂದೆ ಮೊದಲು ಬೆಂಗಾವಲಾಗಬೇಕು. ಇಂಥ ಧನಾತ್ಮಕ ಚಿಂತನೆ ಇದ್ದಾಗ ಮಗು ನಿಮ್ಮನ್ನು ಪ್ರೀತಿಸುತ್ತದೆ. ನಿಮ್ಮನ್ನು ಪರಿವಾರ, ಸಮಾಜ ಗೌರವಿಸುತ್ತದೆ ಎಂದು ಮಂಗಳೂರು ಶಕ್ತಿ ನಗರದ ಅರಿವು ವಿಶೇಷ ಮಕ್ಕಳ ತರಬೇತಿ ಕೇಂದ್ರದ ಮುಖ್ಯಸ್ಥೆ ಪೂರ್ಣಿಮಾ ಆರ್‌.ಕೆ. ಭಟ್‌ ಹೇಳಿದರು.

ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆಯ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ಶುಕ್ರವಾರ ಜರಗಿದ ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆ ಮತ್ತು ವಿಶೇಷ ಸಾಮರ್ಥ್ಯವುಳ್ಳ ಮಕ್ಕಳು ಹಾಗೂ ಹೆತ್ತವರ ಸಮಾವೇಶದಲ್ಲಿ ಅವರು ತಮ್ಮ ಬದುಕಿನ ಅನುಭವಗಳನ್ನು ಹಂಚಿಕೊಂಡರು. ಉದ್ಯಮಿ ಹಸ್ದುಲ್ಲಾ ಇಸ್ಮಾಯಿಲ್‌ ಅಧ್ಯಕ್ಷತೆ ವಹಿಸಿದ್ದರು.

ಅಂಗವಿಕಲರಾಗಿದ್ದು ಆಳ್ವಾಸ್‌ನಲ್ಲಿ ಎಂಎಸ್‌ಡಬ್ಲ್ಯು ವಿದ್ಯಾರ್ಥಿ ನಿತ್ಯಾನಂದ ಕಾರ್ಕಳ ಮತ್ತು ಪದವಿ ವಿದ್ಯಾರ್ಥಿ ದೀಕ್ಷಿತ್‌ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಅತಿಥಿಗಳಾಗಿ, ದ.ಕ. ಜಿಲ್ಲಾ ಅಂಗವಿಕಲರ ಪುನರ್ವಸತಿ ಅಧಿಕಾರಿ ಪಿ.ವಿ. ಸುಬ್ರಮಣಿ, ಮೂಡುಬಿದಿರೆ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್‌. ನಾಗೇಶ್‌, ಆದರ್ಶದ ನಿರ್ದೇಶಕ ಜೇಕಬ್‌ ವರ್ಗೀಸ್‌ ಭಾಗವಹಿಸಿದ್ದರು. ಅಳಿಯೂರು ಪ್ರೌಢಶಾಲೆಯ ಅಂಗವಿಕಲವಿದ್ಯಾರ್ಥಿ ವರುಣ್‌ ಮಾತನಾಡಿ, ನಾವು ಅಂಗವಿಕಲರೆಂದು ವಕ್ರ ದೃಷ್ಟಿ ಬೀರದಿರಿ. ನಮಗೆ ಬೇಕಾದದ್ದು ಬರಿಯ ಅನುಕಂಪವಲ್ಲ, ಸಹಾಯ. ನಮಗೆ ಶಿಕ್ಷಣ ಬೇಕು, ಉದ್ಯೋಗ ಬೇಕು. ನಾವೂ ನಿಮ್ಮಂತೆಯೇ ಬಾಳಲು ಎಲ್ಲ ಅವಕಾಶಗಳನ್ನೂ ಕಲ್ಪಿಸಿಕೊಟ್ಟರೆ ಸಾಕು. ಹಲವಾರು ಮಂದಿ ಅಂಗವಿಕಲರು ಅಸಾಧ್ಯವೆನಿಸಿರುವುದನ್ನು ಸಾಧ್ಯ ಎಂದು ಸಾಧಿಸಿ ತೋರಿದ್ದಾರೆ. ನಾವು ನಿಮಗೆ ಹೊರೆಯಾಗದಂತೆ ಬಾಳ ಬಯಸುತ್ತೇವೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮ
ಮೂಡುಬಿದಿರೆಯ ಸಮನ್ವಯ ಶಿಕ್ಷಣ ಕೇಂದ್ರ, ಆಳ್ವಾಸ್‌ ವಿಶೇಷ ಶಾಲೆ, ಸ್ಫೂರ್ತಿ ಭಿನ್ನ ಸಾಮರ್ಥ್ಯವುಳ್ಳ ಮಕ್ಕಳ ವಿಶೇಷ ಶಾಲೆ, ವಿಶೇಷ ಮಕ್ಕಳ ಹೆತ್ತವರ ವೇದಿಕೆ, ನವಚೇತನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ., ಕಾರ್ಕಳದ ಅರುಣೋದಯ ವಿಶೇಷ ಶಾಲೆ, ಚೇತನ ವಿಶೇಷ ಶಾಲೆ, ವಿಜೇತ ವಿಶೇಷ ವಸತಿ ಶಾಲೆ, ಮೂರುಕಾವೇರಿಯ ಮಾನವ ವಿಕಾಸ ಕೇಂದ್ರ, ಕಿನ್ನಿಗೋಳಿ ಸೈಂಟ್‌ ಮೇರಿಸ್‌ ವಿಶೇಷ ಶಾಲೆ, ವೇಣೂರಿನ ಕ್ರಿಸ್ತರಾಜ ನವಚೇತನ ವಿಶೇಷ ಶಾಲೆ ಈ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದ್ದವು. ಅಂಗವಿಕಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿದವು. ಆಶಾಲತಾ ಮೂಡುಬಿದಿರೆ ಸ್ವಾಗತಿಸಿ, ಸಂಧ್ಯಾ ನಿರೂಪಿಸಿ, ಸಂಜೀವಿ ವಂದಿಸಿದರು.

ಉಡುಪು ಉಡುಗೊರೆ 
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೆ ಶಾಲಾ ಮುಖ್ಯಸ್ಥರ ಮೂಲಕ ಉಡುಪುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗವಿಕಲರು, ಹೆತ್ತವರು ಹಾಗೂ ಹಿತೈಷಿಗಳಿಂದ ಮೂಡುಬಿದಿರೆ ಮೈನ್‌ ಮತ್ತು ಥರ್ಡ್‌ ಶಾಲಾ ಸಹಕಾರದೊಂದಿಗೆ ‘ಅಂಗವಿಕಲರ ಕುರಿತಾದ ಜಾಗೃತಿ ಜಾಥಾ’ ಮೂಡುಬಿದಿರೆ ಥರ್ಡ್‌ ಶಾಲೆಯ ಬಳಿಯಿಂದ ಸಮಾಜ ಮಂದಿರದ ತನಕ ನಡೆಯಿತು. 

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.